ಬ್ರೇಕಿಂಗ್ ನ್ಯೂಸ್
08-05-26 07:02 pm HK News Staffer ಕ್ರೈಂ
ಪುತ್ತೂರು, ಮೇ 8: ಕಡಬ ಠಾಣಾ ವ್ಯಾಪ್ತಿಯ ಐತೂರು ಗ್ರಾಮದ ಕೆರ್ಮಾಯಿ ಎಂಬಲ್ಲಿ ಮಹಿಳೆಯರು ಮತ್ತು ಮಕ್ಕಳನ್ನು ಕರೆದುಕೊಂಡು ಬಂದು ಮತಾಂತರ ಹಾಗೂ ಅನೈತಿಕ ಚಟುವಟಿಕೆ ನಡೆಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕಡಬ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದು ಯಾವುದೇ ಅಂತಹ ಚಟುವಟಿಕೆ ಕಂಡುಬಂದಿಲ್ಲ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.
ಮೇ 07ರಂದು ಐತ್ತೂರಿನ ಮನೆಯೊಂದರಲ್ಲಿ ಜನ ಹೆಚ್ಚು ಸೇರಿರುವ ಬಗ್ಗೆ ಮಾಹಿತಿಯ ಮೇರೆಗೆ ಪೊಲೀಸರು ಸ್ಥಳಕ್ಕೆ ತೆರಳಿ ವಿಚಾರಣೆ ನಡೆಸಿದ್ದು ಒಟ್ಟು 4 ಕುಟುಂಬಗಳಿಗೆ ಸೇರಿದ 23 ಜನ ಗಂಡಸರು, ಮಹಿಳೆಯರು ಹಾಗೂ ಮಕ್ಕಳು ಅಲ್ಲಿ ಇರುವುದಾಗಿ ಕಂಡುಬಂದಿದೆ. ವಿಚಾರಣೆಯಲ್ಲಿ ಅವರುಗಳೆಲ್ಲರೂ ಬೆಂಗಳೂರಿನ ಪರಿಚಯದವರಾಗಿದ್ದು, ಮಂಗಳೂರಿಗೆ ಪ್ರವಾಸದ ನಿಮಿತ್ತ ಬಂದಿರುವುದಾಗಿ ತಿಳಿಸಿರುತ್ತಾರೆ.
ಹಲವು ವರ್ಷಗಳಿಂದ ಪರಿಚಯವಿರುವ ಬೆಂಗಳೂರಿನ ಚರ್ಚ್ ಒಂದರ ಫಾದರ್ ಅವರ ತಮ್ಮನ ಕಡಬದ ಮನೆಯಲ್ಲಿ ತಂಗಿರುವುದಾಗಿ ತಿಳಿಸಿರುತ್ತಾರೆ. ವಿಚಾರಣೆಯಲ್ಲಿ ಎಲ್ಲರೂ ಪ್ರಸ್ತುತ ಬೆಂಗಳೂರಿನಲ್ಲಿ ವಾಸವಾಗಿದ್ದು, ಸುಮಾರು 15 ರಿಂದ 20 ವರ್ಷಗಳಿಂದ ಕ್ರಿಶ್ಚಿಯನ್ ಧರ್ಮವನ್ನು ಸ್ವಯಂಪ್ರೇರಿತವಾಗಿ ಪಾಲಿಸಿಕೊಂಡು ಬರುತ್ತಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಯಾವುದೇ ಬಲವಂತದ ಮತಾಂತರ ನಡೆದಿರುವುದಿಲ್ಲ ಎಂಬುದಾಗಿ ತಿಳಿಸಿದ್ದಾರೆ.
ಸದರಿ ವಿಚಾರದಲ್ಲಿ ಯಾವುದೇ ಅನೈತಿಕ ಚಟುವಟಿಕೆ ಅಥವಾ ಬಲವಂತದ ಮತಾಂತರ ನಡೆದಿರುವ ಬಗ್ಗೆ ವಿಚಾರಣೆ ವೇಳೆ ಮಾಹಿತಿ ದೊರೆತಿರುವುದಿಲ್ಲ. ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಲಾಗಿದೆ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
09-08-26 04:47 pm
HK News Staffer
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಶಾರ್ಪ್ ಶೂಟರ್ ರಾಜ...
09-08-26 03:34 pm
ಇನ್ಸ್ಟಾಗ್ರಾಂನಲ್ಲಿ ವರ್ಕ್ ಫ್ರಮ್ ಹೋಮ್ ಹೆಸರಲ್ಲಿ...
09-08-26 12:56 pm
ರೇಣುಕಾಸ್ವಾಮಿ ಗಂಭೀರವಾಗಿ ಗಾಯಗೊಂಡಿದ್ದರೂ ದರ್ಶನ್ ಹ...
09-08-26 12:03 pm