ಬ್ರೇಕಿಂಗ್ ನ್ಯೂಸ್
09-05-26 09:54 am HK News Staffer ಕ್ರೈಂ
ಪುತ್ತೂರು, ಮೇ 09 : ಬೇಸಿಗೆ ರಜೆಯ ಸಂಭ್ರಮದಲ್ಲಿ ಸ್ನೇಹಿತೆಯರೊಂದಿಗೆ ನದಿಗೆ ಸ್ನಾನಕ್ಕೆ ತೆರಳಿದ್ದ ಇಬ್ಬರು ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಕೊಲ್ಯದಕಟ್ಟ ಎಂಬಲ್ಲಿ ನಡೆದಿದೆ.
ಮೃತರನ್ನು ಅರ್ಪಿತಾ (15) ಹಾಗೂ ಸುನೀತಾ (21) ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ಅರ್ಪಿತಾ ಅವರ ತಂದೆ ಹರೀಶ್ ಪಿ.ಕೆ. ಅವರು ಕಡಬ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸ್ನೇಹಿತರೊಂದಿಗೆ ತೆರಳಿದ್ದ ವೇಳೆ ದುರಂತ
ಮೇ 8ರಂದು ಮಧ್ಯಾಹ್ನ ಅರ್ಪಿತಾ, ಸುನೀತಾ, ಅಕ್ಷತಾ ಹಾಗೂ ನೆಟ್ಟಣದ ಶ್ರೇಯಾ ಸೇರಿದಂತೆ ಸ್ನೇಹಿತರ ಬಳಗ ಕೊಲ್ಯದಕಟ್ಟದ ಗುಂಡ್ಯ ಹೊಳೆಗೆ ಸ್ನಾನಕ್ಕೆ ತೆರಳಿತ್ತು. ಸಂಜೆ ಸುಮಾರು 4:30ರ ವೇಳೆಗೆ ಎಲ್ಲರೂ ನದಿಯಲ್ಲಿ ಈಜಾಡುತ್ತಿದ್ದಾಗ, ಅರ್ಪಿತಾ ಮತ್ತು ಸುನೀತಾ ನೀರಿನ ಆಳಕ್ಕೆ ಸಿಲುಕಿ ಮುಳುಗತೊಡಗಿದ್ದಾರೆ. ಜೊತೆಯಲ್ಲಿದ್ದವರು ಇಬ್ಬರನ್ನೂ ರಕ್ಷಿಸಲು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ.

ಸ್ಥಳೀಯರಿಂದ ಶೋಧ ಕಾರ್ಯ
ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯ ನಿವಾಸಿ ಜಾರ್ಜ್ ಎಂಬವರು ನೀರಿನಲ್ಲಿ ಹುಡುಕಾಟ ನಡೆಸಿ ಇಬ್ಬರ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಬಳಿಕ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಡಬ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.
ಕುಟ್ರುಪ್ಪಾಡಿ ಭಾಗದ ನದಿ ಪ್ರದೇಶ ಈ ಹಿಂದೆಯೂ ಅಪಾಯಕಾರಿಯಾಗಿತ್ತು ಎನ್ನಲಾಗಿದೆ. ಇದೇ ಸ್ಥಳದಲ್ಲಿ ಮೀನು ಹಿಡಿಯಲು ತೆರಳಿದ್ದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಗ್ರಾಮಸ್ಥರ ನೆನಪಿನಲ್ಲಿ ಇನ್ನೂ ಹಸಿರಾಗಿರುವಾಗಲೇ ಇದೀಗ ಮತ್ತೊಂದು ದುರಂತ ಸಂಭವಿಸಿದೆ.
ಕನಸುಗಳೇ ನೀರಿನಲ್ಲಿ ಕರಗಿ ಹೋಯ್ತು
ರಜೆಯ ದಿನಗಳನ್ನು ಖುಷಿಯಿಂದ ಕಳೆಯಲು ತೆರಳಿದ್ದ ಈ ಬಾಲಕಿಯರು, ಮುಂದಿನ ಭವಿಷ್ಯದ ಅನೇಕ ಕನಸುಗಳನ್ನು ಹೊತ್ತಿದ್ದರು. ಆದರೆ ಕ್ಷಣ ಮಾತ್ರದ ಅಜಾಗರೂಕತೆ ಅವರ ಬದುಕನ್ನೇ ಕಸಿದುಕೊಂಡಿದೆ. ನಗುನಗುತ್ತಾ ಹೊರಟಿದ್ದ ಮಕ್ಕಳು ಶವವಾಗಿ ಮನೆಗೆ ಮರಳಿರುವ ದೃಶ್ಯ ಪೋಷಕರ ಆಕ್ರಂದನಕ್ಕೆ ಕಾರಣವಾಗಿದ್ದು, ಗ್ರಾಮದಲ್ಲಿ ಶೋಕ ಆವರಿಸಿದೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm