ಬ್ರೇಕಿಂಗ್ ನ್ಯೂಸ್
09-05-26 09:54 am HK News Staffer ಕ್ರೈಂ
ಪುತ್ತೂರು, ಮೇ 09 : ಬೇಸಿಗೆ ರಜೆಯ ಸಂಭ್ರಮದಲ್ಲಿ ಸ್ನೇಹಿತೆಯರೊಂದಿಗೆ ನದಿಗೆ ಸ್ನಾನಕ್ಕೆ ತೆರಳಿದ್ದ ಇಬ್ಬರು ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಕೊಲ್ಯದಕಟ್ಟ ಎಂಬಲ್ಲಿ ನಡೆದಿದೆ.
ಮೃತರನ್ನು ಅರ್ಪಿತಾ (15) ಹಾಗೂ ಸುನೀತಾ (21) ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ಅರ್ಪಿತಾ ಅವರ ತಂದೆ ಹರೀಶ್ ಪಿ.ಕೆ. ಅವರು ಕಡಬ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸ್ನೇಹಿತರೊಂದಿಗೆ ತೆರಳಿದ್ದ ವೇಳೆ ದುರಂತ
ಮೇ 8ರಂದು ಮಧ್ಯಾಹ್ನ ಅರ್ಪಿತಾ, ಸುನೀತಾ, ಅಕ್ಷತಾ ಹಾಗೂ ನೆಟ್ಟಣದ ಶ್ರೇಯಾ ಸೇರಿದಂತೆ ಸ್ನೇಹಿತರ ಬಳಗ ಕೊಲ್ಯದಕಟ್ಟದ ಗುಂಡ್ಯ ಹೊಳೆಗೆ ಸ್ನಾನಕ್ಕೆ ತೆರಳಿತ್ತು. ಸಂಜೆ ಸುಮಾರು 4:30ರ ವೇಳೆಗೆ ಎಲ್ಲರೂ ನದಿಯಲ್ಲಿ ಈಜಾಡುತ್ತಿದ್ದಾಗ, ಅರ್ಪಿತಾ ಮತ್ತು ಸುನೀತಾ ನೀರಿನ ಆಳಕ್ಕೆ ಸಿಲುಕಿ ಮುಳುಗತೊಡಗಿದ್ದಾರೆ. ಜೊತೆಯಲ್ಲಿದ್ದವರು ಇಬ್ಬರನ್ನೂ ರಕ್ಷಿಸಲು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ.

ಸ್ಥಳೀಯರಿಂದ ಶೋಧ ಕಾರ್ಯ
ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯ ನಿವಾಸಿ ಜಾರ್ಜ್ ಎಂಬವರು ನೀರಿನಲ್ಲಿ ಹುಡುಕಾಟ ನಡೆಸಿ ಇಬ್ಬರ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಬಳಿಕ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಡಬ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.
ಕುಟ್ರುಪ್ಪಾಡಿ ಭಾಗದ ನದಿ ಪ್ರದೇಶ ಈ ಹಿಂದೆಯೂ ಅಪಾಯಕಾರಿಯಾಗಿತ್ತು ಎನ್ನಲಾಗಿದೆ. ಇದೇ ಸ್ಥಳದಲ್ಲಿ ಮೀನು ಹಿಡಿಯಲು ತೆರಳಿದ್ದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಗ್ರಾಮಸ್ಥರ ನೆನಪಿನಲ್ಲಿ ಇನ್ನೂ ಹಸಿರಾಗಿರುವಾಗಲೇ ಇದೀಗ ಮತ್ತೊಂದು ದುರಂತ ಸಂಭವಿಸಿದೆ.
ಕನಸುಗಳೇ ನೀರಿನಲ್ಲಿ ಕರಗಿ ಹೋಯ್ತು
ರಜೆಯ ದಿನಗಳನ್ನು ಖುಷಿಯಿಂದ ಕಳೆಯಲು ತೆರಳಿದ್ದ ಈ ಬಾಲಕಿಯರು, ಮುಂದಿನ ಭವಿಷ್ಯದ ಅನೇಕ ಕನಸುಗಳನ್ನು ಹೊತ್ತಿದ್ದರು. ಆದರೆ ಕ್ಷಣ ಮಾತ್ರದ ಅಜಾಗರೂಕತೆ ಅವರ ಬದುಕನ್ನೇ ಕಸಿದುಕೊಂಡಿದೆ. ನಗುನಗುತ್ತಾ ಹೊರಟಿದ್ದ ಮಕ್ಕಳು ಶವವಾಗಿ ಮನೆಗೆ ಮರಳಿರುವ ದೃಶ್ಯ ಪೋಷಕರ ಆಕ್ರಂದನಕ್ಕೆ ಕಾರಣವಾಗಿದ್ದು, ಗ್ರಾಮದಲ್ಲಿ ಶೋಕ ಆವರಿಸಿದೆ.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
09-05-26 11:14 am
HK News Staffer
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
08-05-26 10:33 pm
HK News Staffer
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
09-05-26 09:54 am
HK News Staffer
ಕಡಬದ ಮನೆಯೊಂದರಲ್ಲಿ ಬೆಂಗಳೂರಿನ 23 ಜನ ಪ್ರವಾಸಿಗರು...
08-05-26 07:02 pm
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm