ಬ್ರೇಕಿಂಗ್ ನ್ಯೂಸ್
09-05-26 06:42 pm HK News Staffer ಕ್ರೈಂ
ಬೆಂಗಳೂರು, ಮೇ 9: ಯಾದಗಿರಿ ಜಿಲ್ಲೆಯ ಗುರುಮಠಕಲ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಒಬ್ಬರು 1 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಕೈಗೆ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಜಾತಿ ನಿಂದನೆ ಪ್ರಕರಣದಿಂದ ಆರೋಪಿಯನ್ನು ಕೈಬಿಡಲು ಹಣಕ್ಕೆ ಬೇಡಿಕೆಯಿಟ್ಟಿದ್ದು, ಖಚಿತ ಮಾಹಿತಿ ಮೇರೆಗೆ ಲೋಕಾಯುಕ್ತ ಡಿವೈಎಸ್ಪಿ ಜಾಕೀರ್ ಇನಾಂದಾರ್ ನೇತೃತ್ವದ ತಂಡ ದಾಳಿ ನಡೆಸಿ, ಅಧಿಕಾರಿಯನ್ನು ವಶಕ್ಕೆ ಪಡೆದಿದೆ.
ಆರೋಪಿಯನ್ನು ಬಂಧಿಸದಿರಲು ಒಂದು ಲಕ್ಷ ರೂ. ಲಂಚ ಪಡೆಯುತ್ತಿದ್ದ ಇನ್ಸ್ಪೆಕ್ಟರ್ ವೀರಣ್ಣ ದೊಡ್ಡಮನಿ ಹಣ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಗುರುಮಠಕಲ್ ತಾಲೂಕಿನ ಗೋಪಾಳಪುರ ಗ್ರಾಮದ ಆನಂದ್ ಎಂಬವರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಾಗಿತ್ತು. ಕೇಸ್ನಲ್ಲಿ ಅವರನ್ನು ಬಂಧಿಸದೆ ಇರಲು ಮತ್ತು ಇನ್ನೊಂದು ಕೇಸ್ನಲ್ಲಿ ಅವರ ಹೆಸರನ್ನು ಕೈಬಿಡಲು ಪಿಐ ವೀರಣ್ಣ ದೊಡ್ಡಮನಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಆನಂದ್ ದೂರು ನೀಡಿದ್ದಾರೆ. ಎರಡು ಪ್ರಕರಣಗಳ ಇತ್ಯರ್ಥಕ್ಕಾಗಿ ಒಂದು ಲಕ್ಷ ರೂ. ಹಣವನ್ನು ಪಡೆಯಲು ಒಪ್ಪಂದವಾಗಿತ್ತು ಎಂದವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಗುರುಮಠಕಲ್ನ ಪೊಲೀಸ್ ವಸತಿ ಗೃಹದಲ್ಲಿ ಆನಂದ್ ಅವರಿಂದ ಒಂದು ಲಕ್ಷ ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು ಇನ್ಸ್ ಪೆಕ್ಟರ್ ನನ್ನು ವಶಕ್ಕೆ ಪಡೆದಿದ್ದಾರೆ. ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
09-08-26 04:47 pm
HK News Staffer
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಶಾರ್ಪ್ ಶೂಟರ್ ರಾಜ...
09-08-26 03:34 pm
ಇನ್ಸ್ಟಾಗ್ರಾಂನಲ್ಲಿ ವರ್ಕ್ ಫ್ರಮ್ ಹೋಮ್ ಹೆಸರಲ್ಲಿ...
09-08-26 12:56 pm
ರೇಣುಕಾಸ್ವಾಮಿ ಗಂಭೀರವಾಗಿ ಗಾಯಗೊಂಡಿದ್ದರೂ ದರ್ಶನ್ ಹ...
09-08-26 12:03 pm