ಬ್ರೇಕಿಂಗ್ ನ್ಯೂಸ್
09-05-26 08:29 pm HK News Staffer ಕ್ರೈಂ
ಬೆಂಗಳೂರು, ಮೇ 9: ಹಣಕ್ಕಾಗಿ ಸಾಲ ನೀಡಿದ್ದ ಮಹಿಳೆಯನ್ನು ಸಿನಿಮೀಯ ಶೈಲಿಯಲ್ಲಿ ಅಪಘಾತವೆಸಗಿ ಹತ್ಯೆ ಮಾಡಿದ ಬೆಚ್ಚಿಬೀಳಿಸುವ ಪ್ರಕರಣವನ್ನು ಮಹಾಲಕ್ಷ್ಮಿ ಲೇಔಟ್ ಪೊಲೀಸರು ಚಾಣಾಕ್ಷತನದಿಂದ ಭೇದಿಸಿದ್ದು, ಈ ಸಂಬಂಧ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ವಿಜಯಲಕ್ಷ್ಮಿ ಕೊಲೆಯಾದ ಮಹಿಳೆ. ಘಟನೆಗೆ ಸಂಬಂಧಿಸಿದಂತೆ ಪ್ರದೀಪ್, ರಾಕೇಶ್, ಮಂಜುನಾಥ್, ಚೇತನ್ ಹಾಗೂ ಯೋಹಾನ್ ಎಂಬುವವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಏಪ್ರಿಲ್ 21ರಂದು ಕುರುಬರಹಳ್ಳಿಯ ಪೈಪ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿಜಯಲಕ್ಷ್ಮಿಗೆ, ಪೂರ್ವಸಂಚಿನಂತೆ ಆರೋಪಿಯಾದ ರಾಕೇಶ್ ವೇಗವಾಗಿ ಬೈಕ್ ಚಲಾಯಿಸಿ ಡಿಕ್ಕಿ ಹೊಡೆದಿದ್ದ. ಬಳಿಕ ಇತರ ಆರೋಪಿಗಳು ಆಟೋದಲ್ಲಿ ಬಂದು ರಕ್ಷಿಸುವ ನಾಟಕವಾಡಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ವಿಜಯಲಕ್ಷ್ಮಿ ಏಪ್ರಿಲ್ 27ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಈ ಸಂಬಂಧ ವಿಜಯನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿತ್ತು.
ಆದರೆ ಪ್ರಕರಣದ ತನಿಖೆ ವೇಳೆ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ ಪೊಲೀಸರಿಗೆ ಅಪಘಾತ ಉದ್ದೇಶಪೂರ್ವಕವಾಗಿ ನಡೆದಿರುವುದು ಗೊತ್ತಾಗಿದೆ. ಬೈಕ್ ಸವಾರ ನೇರವಾಗಿ ಮಹಿಳೆಗೆ ಗುದ್ದಿರುವುದು ಸ್ಪಷ್ಟವಾಗಿದ್ದು, ಇದು ಕೊಲೆ ಎಂಬ ಅನುಮಾನ ಗಟ್ಟಿಯಾಗಿತ್ತು.
ತನ್ನ ಮೇಲೆ ಅನುಮಾನ ಬಾರದಂತೆ ಮಾಡಲು ಆರೋಪಿ ರಾಕೇಶ್, ಅಪಘಾತ ನಡೆದ ಎರಡು ದಿನಗಳ ಬಳಿಕ ತಾನೇ ಪೊಲೀಸ್ ಠಾಣೆಗೆ ಹೋಗಿ, “ನಾನು ಮಹಿಳೆಯನ್ನು ರಕ್ಷಿಸಿದ್ದೇನೆ, ಅಪಘಾತ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಿ” ಎಂದು ದೂರು ನೀಡಿದ್ದ ಎನ್ನಲಾಗಿದೆ.
ಇನ್ನೊಂದೆಡೆ, ಗಾಯಾಳು ಮಹಿಳೆಯನ್ನು ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಆಕೆಯ ಪರ್ಸ್ನಲ್ಲಿದ್ದ ಮನೆ ಕೀಯನ್ನು ಆರೋಪಿ ಪ್ರದೀಪ್ ಕದ್ದಿದ್ದ. ಬಳಿಕ ನೇರವಾಗಿ ವಿಜಯಲಕ್ಷ್ಮಿ ಮನೆಗೆ ಹೋಗಿ ಹಣಕ್ಕಾಗಿ ಹುಡುಕಾಟ ನಡೆಸಿದ್ದ. ಈ ವೇಳೆ ಮನೆ ಮಾಲೀಕರು ಅನುಮಾನ ವ್ಯಕ್ತಪಡಿಸಿದಾಗ, “ಆಧಾರ್ ಕಾರ್ಡ್ ತೆಗೆದುಕೊಳ್ಳಲು ಬಂದಿದ್ದೇವೆ” ಎಂದು ಹೇಳಿ ಅಲ್ಲಿಂದ ಪರಾರಿಯಾಗಿದ್ದ. ಈ ಕುರಿತು ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಕಳ್ಳತನ ಯತ್ನದ ದೂರು ದಾಖಲಾಗಿತ್ತು.
ಹತ್ಯೆಗೆ ಕಾರಣವೇನು?
ಕುರುಬರಹಳ್ಳಿ ನಿವಾಸಿಯಾಗಿದ್ದ ವಿಜಯಲಕ್ಷ್ಮಿ ಒಬ್ಬಂಟಿಯಾಗಿ ವಾಸವಿದ್ದು, ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದರು. ಸ್ಥಳೀಯ ನಿವಾಸಿ ಚೇತನ್ ಹಲವು ವರ್ಷಗಳಿಂದ ಪರಿಚಯ ಹೊಂದಿದ್ದು, ಮಹಿಳೆಯಿಂದ ಸಾಲ ಪಡೆದಿದ್ದ ಎನ್ನಲಾಗಿದೆ.
ಮಹಿಳೆ ಬಳಿ ಹೆಚ್ಚಿನ ಹಣವಿದೆ ಎಂದು ಭಾವಿಸಿದ ಚೇತನ್ ಈ ವಿಚಾರವನ್ನು ಸಹಚರ ಪ್ರದೀಪ್ಗೆ ಹೇಳಿದ್ದ. ಬಳಿಕ ಇತರ ಆರೋಪಿಗಳೊಂದಿಗೆ ಸೇರಿ ಸಂಚು ರೂಪಿಸಿ ಹತ್ಯೆ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳ್ಳತನ ಯತ್ನ ಪ್ರಕರಣದಲ್ಲಿ ಮೊದಲಿಗೆ ಪ್ರದೀಪ್ ಬಂಧನಕ್ಕೊಳಗಾಗಿದ್ದು, ವಿಚಾರಣೆ ವೇಳೆ ಕೊಲೆ ಸಂಚಿನ ರಹಸ್ಯ ಬಯಲಾಗಿತ್ತು. ಈ ಮಾಹಿತಿ ಆಧರಿಸಿ ಉಳಿದ ಆರೋಪಿಗಳನ್ನು ಬಂಧಿಸಲಾಗಿದೆ.
ಪ್ರಕರಣದ ಮೊದಲ ಆರೋಪಿ ಪ್ರದೀಪ್ ಕುಮಾರಸ್ವಾಮಿ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದರೆ, ಮಂಜುನಾಥ್ ಶೇಷಾದ್ರಿಪುರ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸ್ ಕಸ್ಟಡಿಯಲ್ಲೇ ಆರೋಪಿ ಸಾವು;
ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ ರೌಡಿ ಮಂಜುನಾಥ್ನನ್ನು ಪೊಲೀಸ್ ಕಸ್ಟಡಿಯಲ್ಲಿ ವಿಚಾರಣೆ ನಡೆಸುವ ವೇಳೆ ಹೊಟ್ಟೆ ನೋವು ಎಂದು ಹೇಳಿದ್ದ. ಹೀಗಾಗಿ ಮೇ 2ರಂದು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಆತ ಚಿಕಿತ್ಸೆ ಫಲಕಾರಿಯಾಗದೆ ಮೇ 5ರಂದು ಮೃತಪಟ್ಟಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm