ಬ್ರೇಕಿಂಗ್ ನ್ಯೂಸ್
12-05-26 11:19 am HK News Staffer ಕ್ರೈಂ
ಮಂಗಳೂರು, ಮೇ 12: ಕಳೆದ ಆರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪಣಂಬೂರು ಪೊಲೀಸರು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರು ತಾಲೂಕಿನ ಬೈಕಂಪಾಡಿಯ ಕುಡುಂಬೂರು ಪ್ರದೇಶದಲ್ಲಿ ನಡೆದಿದ್ದ ಮೊಬೈಲ್ ಅಂಗಡಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಕೇರಳದ ಮಂಜೇಶ್ವರದ ಬಳಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಬಂಧಿತನನ್ನು ಅಸ್ಸಾಂ ರಾಜ್ಯದ ಕಾಚಾರ್ ಜಿಲ್ಲೆಯ ಸಿಲ್ಚಾರ್ನ ಲಕ್ಕಿಪುರ್ ಠಾಣಾ ವ್ಯಾಪ್ತಿಯ ನಿವಾಸಿ ಪಾರೂಲ್ ಹುಸೈನ್ ಲಸ್ಕರ್ ಅಲಿಯಾಸ್ ಪಾರೂಲ್ (34) ಎಂದು ಗುರುತಿಸಲಾಗಿದೆ.
2018ರಲ್ಲಿ ಬೈಕಂಪಾಡಿ ಗ್ರಾಮದ ಕುಡುಂಬೂರುದಲ್ಲಿರುವ ‘ಪೂಜಾ ಮೊಬೈಲ್ಸ್’ ಅಂಗಡಿಗೆ ರಾತ್ರಿ ವೇಳೆ ನುಗ್ಗಿದ್ದ ಆರೋಪಿಗಳು ಸುಮಾರು 2,17,740 ರೂ. ಮೌಲ್ಯದ ಮೊಬೈಲ್ ಫೋನ್ಗಳು, ಮೊಬೈಲ್ ಬಿಡಿಭಾಗಗಳು, ಸಿಸಿಟಿವಿ ಡಿವಿಆರ್ ಹಾಗೂ 2,100 ರೂ. ನಗದು ಹಣವನ್ನು ಕಳವು ಮಾಡಿದ್ದರು. ಅಲ್ಲದೆ ಅಂಗಡಿಯಲ್ಲಿದ್ದ ಸುಮಾರು 10,000 ರೂ. ಮೌಲ್ಯದ ಎರಡು ಕಂಪ್ಯೂಟರ್ ಮಾನಿಟರ್ಗಳನ್ನು ಧ್ವಂಸಗೊಳಿಸಿ ನಷ್ಟ ಉಂಟುಮಾಡಿದ್ದರು.
ಈ ಸಂಬಂಧ 2018ರಲ್ಲಿ ಪಣಂಬೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ.152/2018ರಡಿ ಐಪಿಸಿ ಕಲಂ 427, 457 ಮತ್ತು 380 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
6 ವರ್ಷ ತಲೆಮರೆಸಿಕೊಂಡ ಆರೋಪಿ
ಪ್ರಕರಣದ ವಿಚಾರಣೆಗೆ ಹಲವು ಬಾರಿ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ಧ ನ್ಯಾಯಾಲಯ ದಸ್ತಗಿರಿ ವಾರಂಟ್ ಜಾರಿಗೊಳಿಸಿತ್ತು. ಬಳಿಕ ಕಳೆದ ಆರು ವರ್ಷಗಳಿಂದ ಆರೋಪಿ ವಿವಿಧೆಡೆ ತಲೆಮರೆಸಿಕೊಂಡು ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ಎನ್ನಲಾಗಿದೆ.
ಕೊನೆಗೂ ಖಾಕಿ ಬಲೆಗೆ
ಮೇಲಾಧಿಕಾರಿಗಳ ಸೂಚನೆಯಂತೆ ಪಣಂಬೂರು ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮೊಹಮ್ಮದ್ ಸಲೀಂ ಅಬ್ಬಾಸ್ ಅವರ ಮಾರ್ಗದರ್ಶನದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸ್ ತಂಡ, ಕೇರಳದ ಮಂಜೇಶ್ವರದ ಬಳಿ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದೆ.
ಈ ಕಾರ್ಯಾಚರಣೆಯಲ್ಲಿ ಸಿಎಚ್ಸಿಗಳಾದ ನವೀನ್ ಚಂದ್ರ, ಸಯ್ಯದ್ ಇಂತಿಯಾಜ್ ಹಾಗೂ ಸಿಪಿಸಿಗಳಾದ ರಾಕೇಶ್ ಮತ್ತು ವಿನಯ್ ಭಾಗವಹಿಸಿದ್ದರು. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳು ವರ್ಷಗಳ ಕಾಲ ತಲೆಮರೆಸಿಕೊಂಡರೂ, ಕಾನೂನಿನ ಕೈಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂಬುದನ್ನು ಈ ಪ್ರಕರಣ ಮತ್ತೊಮ್ಮೆ ಸಾಬೀತುಪಡಿಸಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm