ಬ್ರೇಕಿಂಗ್ ನ್ಯೂಸ್
12-05-26 01:11 pm HK News Staffer ಕ್ರೈಂ
ಮಂಗಳೂರು, ಮೇ 12 : ದೇಶವ್ಯಾಪಿ ಗಮನ ಸೆಳೆದಿದ್ದ "ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ” ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಎಸ್ಐಟಿ ತನಿಖೆ ಸಲುವಾಗಿ 17 ಸ್ಥಳಗಳಲ್ಲಿ ಅಗೆಯಲು ಬಳಸಿದ್ದ ಜೆಸಿಬಿ ಮತ್ತು ಕಾರ್ಮಿಕರ ವೆಚ್ಚವನ್ನು ಇನ್ನೂ ಪಾವತಿಸಿಲ್ಲ ಎಂಬ ಆರೋಪ ಕೇಳಿಬಂದಿದೆ.
2025ರ ಜುಲೈ 29ರಿಂದ ಆಗಸ್ಟ್ 13ರ ವರೆಗೆ ನಡೆದ ಈ ಕಾರ್ಯಾಚರಣೆಯಲ್ಲಿ ಜೆಸಿಬಿ ಮತ್ತು ಕೂಲಿಯಾಳುಗಳನ್ನು ಬಳಸಿ ಮಳೆ, ಬಿಸಿಲು ಲೆಕ್ಕಿಸದೇ ಕೆಲಸ ಮಾಡಿಸಲಾಗಿತ್ತು. ಇದಾಗಿ 10 ತಿಂಗಳು ಕಳೆದರೂ ಜೆಸಿಬಿ ಬಾಡಿಗೆ, ವಾಹನ ಬಾಡಿಗೆ ಹಾಗೂ ಕಾರ್ಮಿಕರ ಕೂಲಿ ಸೇರಿ ಲಕ್ಷಾಂತರ ಬಿಲ್ ಬಾಕಿ ಉಳಿದಿದೆ. ಹಿಟಾಚಿ ಯಂತ್ರ ಬಳಕೆ, ಶಾಮಿಯಾನ, ಹಾರೆ, ಪಿಕಾಸು, ಕುಡಿಯುವ ನೀರು ವ್ಯವಸ್ಥೆ ಸೇರಿದಂತೆ ಹಲವು ವೆಚ್ಚಗಳಿಗೆ ಪಾವತಿ ಇನ್ನೂ ಆಗಿಲ್ಲ ಎಂದು ತಿಳಿದುಬಂದಿದೆ.
ಲಭ್ಯ ಮಾಹಿತಿಯ ಪ್ರಕಾರ, ಉತ್ಖನನ ಕಾರ್ಯಕ್ಕೆ ಸುನೀಲ್ ಕನ್ಯಾಡಿ ಎಂಬವರ ಹಿಟಾಚಿ ಯಂತ್ರ ಬಳಸಲಾಗಿತ್ತು. ಕೇವಲ 10 ದಿನಗಳಷ್ಟೇ ಯಂತ್ರವನ್ನು ಬಳಸಲಾಗಿದ್ದರೂ, ಬಳಕೆಯಾದ ದಿನಗಳಿಗಷ್ಟೇ ಬಿಲ್ ಪಾವತಿಸಬೇಕೆಂದು ಮಾಲಕರು ಮನವಿ ಮಾಡಿದ್ದರು. ಆದರೆ 9 ತಿಂಗಳಿಗೂ ಹೆಚ್ಚು ಕಾಲ ಕಳೆದರೂ ಯಾವುದೇ ಹಣ ದೊರೆತಿಲ್ಲ ಎಂಬುದು ಆರೋಪವಾಗಿದೆ.
ಬಿಲ್ ಪಾವತಿ ವಿಚಾರದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ಹಾಗೂ ಎಸ್ಐಟಿ ನಡುವೆ ಗೊಂದಲ ಉಂಟಾಗಿದೆ ಎನ್ನಲಾಗುತ್ತಿದೆ. ಪಂಚಾಯತ್ ಅಧಿಕಾರಿಗಳು ಎಸ್ಐಟಿ ಕಡೆಗೆ ಬೆರಳು ತೋರಿಸುತ್ತಿದ್ದು, ಎಸ್ಐಟಿ ಮಾತ್ರ ನವೆಂಬರ್ನಲ್ಲೇ ಬಿಲ್ ಪಾವತಿಸಲಾಗಿದೆ ಎಂದು ಹೇಳುತ್ತಿರುವುದು ವಿವಾದಕ್ಕೆ ಕಾರಣವಾಗಿದೆ. ಇದೇ ವೇಳೆ, ಉತ್ಖನನ ಸಂದರ್ಭದಲ್ಲಿ ಇದ್ದ ಪಂಚಾಯತ್ ಪಿಡಿಒ ಈಗ ನಿವೃತ್ತರಾಗಿದ್ದು ಯಾರನ್ನು ಕೇಳುವುದೆಂಬ ಗೊಂದಲ ಉಂಟಾಗಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm