ಬ್ರೇಕಿಂಗ್ ನ್ಯೂಸ್
13-05-26 12:39 pm HK News Staffer ಕ್ರೈಂ
ಉಳ್ಳಾಲ, ಮೇ 13: ಕುತ್ತಾರು ಜಂಕ್ಷನ್ ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣದ ವಿಚಾರದಲ್ಲಿ ಭದ್ರತಾ ಸಿಬ್ಬಂದಿಯನ್ನ ತಳ್ಳಿ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಘೇರಾವ್ ಹಾಕಿ ತರಾಟೆಗೈದ ಮದನಿ ನಗರದ ಜುನೈದ್ ಮತ್ತು ಆತನ ಹತ್ತು ಜನ ಸಹಚರರ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಸ್ಪೀಕರ್ ಯು.ಟಿ.ಖಾದರ್ ಅವರ ಅಂಗ ರಕ್ಷಕ ಸಿಎಸ್ ಆರ್ ಘಟಕದ ಸಿಬ್ಬಂದಿ ಮೊಹಮ್ಮದ್ ಯಾಸೀನ್ ಇನಾಮದಾರ ನೀಡಿರುವ ದೂರಿನ ಆಧಾರದಡಿ ಉಳ್ಳಾಲ ಠಾಣೆಯಲ್ಲಿ ಹನ್ನೊಂದು ಜನ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಕಳೆದ ಮೇ 7 ರ ಗುರುವಾರ ರಾತ್ರಿ 10 ಗಂಟೆ ವೇಳೆ ಸ್ಪೀಕರ್ ಯು.ಟಿ.ಖಾದರ್ ಅವರು ಉಳ್ಳಾಲ ಮಾಸ್ತಿಕಟ್ಟೆಯ ರೆಸಾರ್ಟ್ ಒಂದರಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಹಿಂತಿರುಗುವ ವೇಳೆ ಮದನಿ ನಗರದ ಜುನೈದ್ ಹಾಗೂ ಇತರ ಹತ್ತು ಮಂದಿ ಏಕಾಏಕಿ ಸ್ಪೀಕರ್ ಬಳಿ ಹೋಗುವಾಗ ಅಂಗರಕ್ಷಕರಾದ ಮೊಹಮ್ಮದ್ ಯಾಸೀನ ಅವರನ್ನು ತಡೆದಿದ್ದು , ಈಗಾಗಲೇ ಬಹಳ ತಡವಾಗಿದೆ ಎಂದು ಹೇಳಿ ಸ್ಪೀಕರ್ ಭೇಟಿಗೆ ಅವಕಾಶ ನಿರಾಕರಿಸಿದ್ದರು. ಈ ವೇಳೆ ಜುನೈದ್ ಹಾಗೂ ಸಹಚರರು ಅಂಗರಕ್ಷಕ ಯಾಸೀನ್ ಅವರನ್ನ ತಳ್ಳಿ ಮುನ್ನುಗ್ಗಿದ್ದು, ಸ್ಪೀಕರ್ ಖಾದರ್ ಅವರನ್ನ ಘೇರಾವ್ ಹಾಕಿ ಏರು ಧ್ವನಿಯಲ್ಲಿ ಕುತ್ತಾರು ಕೊರಗಜ್ಜನ ವೃತ್ತದ ವಿಚಾರದಲ್ಲಿ ತರಾಟೆಗೈದಿದ್ದಲ್ಲದೆ, ಅದರ ವೀಡಿಯೋವನ್ನು ಆಕ್ಷೇಪಾರ್ಹ ಬರಹಗಳೊಂದಿಗೆ ಜಾಲತಾಣಗಳಲ್ಲಿ ಹರಿಯಬಿಟ್ಟಿರುವುದಾಗಿ ಗನ್ ಮ್ಯಾನ್ ಮೊಹಮ್ಮದ್ ಯಾಸೀನ ಅವರು ತನ್ನ ಮೇಲಾಧಿಕಾರಿಗಳ ಸೂಚನೆಯಂತೆ ಮೇ 9 ರಂದು ತಡವಾಗಿ ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ.
ಕುತ್ತಾರು ಕೊರಗಜ್ಜನ ಆದಿಕ್ಷೇತ್ರಕ್ಕೆ ರಾಜ್ಯದ ವಿವಿಧ ಕಡೆಗಳಿಂದ ಬರುವ ಭಕ್ತಾಧಿಗಳಿಗೆ ಮಾಹಿತಿ ನೀಡುವುದಕ್ಕಾಗಿ ವರ್ಷಗಳ ಹಿಂದೆ ಕುತ್ತಾರು ಜಂಕ್ಷನ್ ನಲ್ಲಿ ಸ್ಥಳೀಯ ಬಜರಂಗದಳ ಸಂಘಟನೆಯು ಕೊರಗಜ್ಜನ ಮುಟ್ಟಾಳೆ ಹಾಗೂ ದಂಟೆಯ ಪ್ರತಿಕೃತಿಯುಳ್ಳ ಸಣ್ಣ ವೃತ್ತವೊಂದನ್ನ ನಿರ್ಮಿಸಿತ್ತು. ಇದೀಗ ಆ ಸಣ್ಣ ವೃತ್ತವನ್ನ ತೆರವುಗೊಳಿಸಿ ನಿಟ್ಟೆ ಪರಿಗಣಿತ ವಿವಿಯು ನೂತನ ವೃತ್ತವೊಂದನ್ನು ನಿರ್ಮಿಸುತ್ತಿದೆ. ಈ ಮಧ್ಯೆ ಕುತ್ತಾರಿನಲ್ಲಿ ಕೊರಗಜ್ಜನ ಹೆಸರಲ್ಲಿ ವೃತ್ತ ನಿರ್ಮಾಣವಾಗಬಾರದೆಂದು ಕುತ್ತಾರು ಮದನಿನಗರದ ಮುಸ್ಲಿಮರ ಗುಂಪೊಂದು ಆಕ್ಷೇಪ ವ್ಯಕ್ತಪಡಿಸಿ ಸ್ಪೀಕರ್ ಖಾದರ್ ಅವರನ್ನ ಘೇರಾವ್ ಮಾಡಿ ತರಾಟೆಗೈದಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಭಾರೀ ಸಂಚಲನ ಉಂಟು ಮಾಡಿದ್ದಲ್ಲದೆ, ಸ್ಪೀಕರ್ ಅವರ ಭದ್ರತಾ ವ್ಯವಸ್ಥೆಯ ಬಗ್ಗೆಯೂ ಪ್ರಶ್ನೆ ಹುಟ್ಟು ಹಾಕಿತ್ತು.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm