ಬ್ರೇಕಿಂಗ್ ನ್ಯೂಸ್
13-05-26 03:39 pm HK News Staffer ಕ್ರೈಂ
ಬೆಂಗಳೂರು, ಮೇ 13: ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ದ್ವಿಚಕ್ರ ವಾಹನ ಸ್ಫೋಟಗೊಂಡ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಗರದ ಹಲಸೂರು ಪೊಲೀಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ. ಹಲಸೂರಿನ ಮರ್ಫಿಟೌನ್ ನಿವಾಸಿ ಲೂರ್ದ್ ನಾಥನ್(65) ಮೃತ ವೃದ್ಧ.
ಆಟೋ ಚಾಲಕರಾಗಿದ್ದ ಲೂರ್ದ್ ನಾಥನ್ ಅನಾರೋಗ್ಯದ ಹಿನ್ನೆಲೆಯಲ್ಲಿ ಆಟೋ ಚಾಲನೆಗೆ ಹೋಗದೆ ಮನೆಯಲ್ಲಿಯೇ ಇರುತ್ತಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಲೂರ್ದ್ ನಾಥನ್ ತಮ್ಮ ಮಗ ಬಳಸುವಂತಹ ಎಲೆಕ್ಟ್ರಿಕಲ್ ದ್ವಿಚಕ್ರ ವಾಹನವನ್ನು ಸೋಮವಾರ ರಾತ್ರಿ 11 ಗಂಟೆಯ ಸುಮಾರಿಗೆ ಎಂದಿನಂತೆ ತಮ್ಮ ಚಿಕ್ಕದಾದ ಮನೆಯ ಒಳಗಡೆಯೇ ಚಾರ್ಜ್ಗೆ ಹಾಕಿ ಮಲಗಿದ್ದರು. ಮಧ್ಯರಾತ್ರಿ 3 ಗಂಟೆಗೆ ಏಕಾಏಕಿ ದ್ವಿಚಕ್ರ ವಾಹನ ಸ್ಫೋಟಗೊಂಡಿದ್ದು, ಸ್ಫೋಟದ ತೀವ್ರತೆಗೆ ಮಲಗಿದ್ದ ಲೂರ್ದ್ ನಾಥನ್ಗೆ ಮೈಯೆಲ್ಲಾ ಸುಟ್ಟ ಗಾಯಗಳಾಗಿದ್ದು, ಸ್ಫೋಟದ ಶಬ್ಧ ಕೇಳಿ ಮನೆಯ ಮೊದಲ ಮಹಡಿಯಲ್ಲಿದ್ದ ಮಗ ಮತ್ತು ಸೊಸೆ ಬಂದು ನೋಡಿದಾಗ ಲೂರ್ದ್ ನಾಥನ್ ಗಂಭೀರವಾಗಿ ಗಾಯಗೊಂಡು ಒದ್ದಾಡುತ್ತಿದ್ದರು. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರನ್ನು ಪರೀಕ್ಷಿಸಿದ ವೈದ್ಯರು ದಾರಿ ಮಧ್ಯದಲ್ಲಿಯೇ ಮೃತಪಟ್ಟಿದ್ದಾರೆ ಎಂದು ದೃಢಪಡಿಸಿದ್ದಾರೆ.
ಮನೆಯ ಒಳಗಡೆಯಲ್ಲಿಯೇ ಚಾರ್ಜ್ಗೆ ಹಾಕಿದ್ದಾಗ ಈ ದುರ್ಘಟನೆ ನಡೆದಿದೆ. ಸ್ಫೋಟದಿಂದ ಲೂರ್ದ್ ನಾಥನ್ ಸುಟ್ಟು ಹೋಗಿ ಗಂಭೀರವಾಗಿ ಗಾಯಗೊಂಡಿದ್ದರು. ಬೆಂಕಿಯ ತೀವ್ರತೆಗೆ ಮನೆಯಲ್ಲಿದ್ದ ಟಿ.ವಿ ಮತ್ತು ಹಾಸಿಗೆಗೆ ಜ್ವಾಲೆ ತಾಗಿ ಹೊತ್ತಿ ಉರಿದಿದೆ. ಬ್ಯಾಟರಿ ಓವರ್ ಫ್ಲೋ ಆಗಿ ಸ್ಫೋಟಗೊಂಡಿರುವ ಶಂಕೆ ವ್ಯಕ್ತವಾಗಿದೆ. ಲೂರ್ದ್ ನಾಥನ್ ಪುತ್ರ ಫ್ರಾಂಕ್ ಆಟೋನಿ ಎಂಬುವರು ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm