ಬ್ರೇಕಿಂಗ್ ನ್ಯೂಸ್
13-05-26 06:36 pm HK News Staffer ಕ್ರೈಂ
ಹಾಸನ, ಮೇ 13: ಜಿಮ್ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಭುಜ ತಾಗಿದ ವಿಚಾರಕ್ಕೆ ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಹಾಸನ ನಗರದ ಕುವೆಂಪುನಗರದಲ್ಲಿರುವ ಎಂ.ಜೆ ಫಿಟ್ನೆಸ್ ಸ್ಟುಡಿಯೋದಲ್ಲಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ನಡೆದ ಈ ಹಲ್ಲೆ ಸ್ಥಳೀಯರಲ್ಲಿ ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.
ಘಟನೆಯಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡ ಯುವಕನನ್ನು ಕೀರ್ತನ್ ಎಂದು ಗುರುತಿಸಲಾಗಿದ್ದು, ಹಲ್ಲೆ ನಡೆಸಿದ ಆರೋಪಿಯನ್ನು ವರುಣ್ ಎಂದು ಹೇಳಲಾಗಿದೆ. ಇಬ್ಬರೂ ಜಿಮ್ನಲ್ಲಿ ವ್ಯಾಯಾಮ ಮಾಡುತ್ತಿದ್ದ ವೇಳೆ, ಒಂದು ಬದಿಯಿಂದ ಮತ್ತೊಂದು ಬದಿಗೆ ತೆರಳುವಾಗ ಕೀರ್ತನ್ ಅವರ ಭುಜ ವರುಣ್ ಭುಜಕ್ಕೆ ತಾಗಿತ್ತು ಎನ್ನಲಾಗಿದೆ. ಈ ಸಣ್ಣ ವಿಚಾರವೇ ದೊಡ್ಡ ಗಲಾಟೆಗೆ ಕಾರಣವಾಗಿದೆ.
ಭುಜ ತಾಗಿದ್ದಕ್ಕೆ ಕೋಪಗೊಂಡ ವರುಣ್, ಕೀರ್ತನ್ನನ್ನು ಕರೆದು ಅವಾಜ್ ಹಾಕಿದ ಬಳಿಕ ಏಕಾಏಕಿ ತಲೆ ಭಾಗಕ್ಕೆ ಬಲವಾಗಿ ಹೊಡೆದಿದ್ದಾನೆ. ಹಲ್ಲೆಯ ತೀವ್ರತೆಗೆ ಕೀರ್ತನ್ ಅವರ ತಲೆಬರುಡೆಗೆ ಪೆಟ್ಟು ಬಿದ್ದ ಕಾರಣ ಸ್ಥಳದಲ್ಲೇ ಕುಸಿದು ಬಿದ್ದಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ವೈದ್ಯರ ಮಾಹಿತಿ ಪ್ರಕಾರ, ಕೀರ್ತನ್ ಅವರ ತಲೆಬುರುಡೆಗೆ ಬಲವಾದ ಪೆಟ್ಟು ಬಿದ್ದ ಕಾರಣ ಕೋಮಾಗೆ ಜಾರಿದ್ದಾರೆ ಎನ್ನಲಾಗಿದೆ. ಸದ್ಯ ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರಿದಿದೆ. ಈ ಘಟನೆ ಸಂಬಂಧ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದರ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಕೋಪ ಮತ್ತು ಅಹಂಕಾರ ಕೆಲವೇ ಕ್ಷಣಗಳಲ್ಲಿ ಜೀವ ಹಾನಿಗೂ ಕಾರಣವಾಗಬಹುದು. ಕ್ಷುಲ್ಲಕ ವಿಚಾರಗಳನ್ನು ಮಾತಿನ ಮೂಲಕ ಬಗೆಹರಿಸಿಕೊಳ್ಳುವ ಬದಲು ಹಿಂಸೆಗೆ ಮೊರೆಹೋದರೆ ಅದರ ಪರಿಣಾಮ ಭೀಕರವಾಗಿರುತ್ತದೆ. ಯುವಕರು ಕೋಪ ನಿಯಂತ್ರಣ, ಸಹನೆ ಮತ್ತು ಪರಸ್ಪರ ಗೌರವವನ್ನು ಬೆಳೆಸಿಕೊಳ್ಳುವುದು ಅತ್ಯಂತ ಅಗತ್ಯವಾಗಿದೆ.
Shocking gym assault in Hassan, Karnataka: At M.J. Fitness, a minor shoulder bump led to Varun kicking Kirthan in the head, causing skull fracture & coma. Victim in ICU, police investigating. pic.twitter.com/pUu6w1rvET
— Ghar Ke Kalesh (@gharkekalesh) May 13, 2026
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm