ಬ್ರೇಕಿಂಗ್ ನ್ಯೂಸ್
14-05-26 01:41 pm HK News Staffer ಕ್ರೈಂ
ಉಳ್ಳಾಲ, ಮೇ 14: ಉಳ್ಳಾಲ ಬೈಲ್ ಮೂಲದ ಮಹಿಳೆಯೊಬ್ಬರ ದಾಖಲಾತಿಗಳನ್ನು ದುರುಪಯೋಗಪಡಿಸಿ ಬೇರೊಬ್ಬ ಮಹಿಳೆ ನಕಲಿ ಪಾಸ್ಪೋರ್ಟ್ ಪಡೆದು ವಿದೇಶಕ್ಕೆ ತೆರಳಿದ ಘಟನೆ ನಡೆದಿದ್ದು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ.
ಮಂಗಳೂರು ನಗರದ ಪೊಲೀಸ್ ನಿರೀಕ್ಷಕ ಗೋಪಾಲಕೃಷ್ಣ ಭಟ್ ಬಿ. ಅವರ ದೂರಿನ ಮೇರೆಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯಶೋಧ ಕೇಶವ ಎಂಬವರ ಹೆಸರಿನಲ್ಲಿ ಅನ್ಯ ಮಹಿಳೆ ಪಾಸ್ಪೋರ್ಟ್ ಪಡೆದು ವಿದೇಶ ಪ್ರಯಾಣ ಮಾಡಿರುವ ಕುರಿತು ಮೇ 8ರಂದು ಪೊಲೀಸರಿಗೆ ಖಚಿತ ಮಾಹಿತಿ ದೊರಕಿತ್ತು.
ಪಾಸ್ಪೋರ್ಟ್ ಅಪ್ಲಿಕೇಶನ್ ಸಂಖ್ಯೆ BNX067061521924 ಪರಿಶೀಲಿಸಿದ ವೇಳೆ ಅರ್ಜಿಯಲ್ಲಿ ನಮೂದಿಸಿದ್ದ ಹೆಸರು, ವಿಳಾಸ ಹಾಗೂ ಭಾವಚಿತ್ರದಲ್ಲಿ ವ್ಯತ್ಯಾಸ ಕಂಡುಬಂದಿದೆ. ತನಿಖೆಯಲ್ಲಿ ಪಾಸ್ಪೋರ್ಟ್ನಲ್ಲಿ ಬಳಸಿದ್ದ ಭಾವಚಿತ್ರವು ಪ್ರೀತಾ ಡಿ’ಸೋಜಾ ಎಂಬವರದ್ದು ಎಂದು ತಿಳಿದುಬಂದಿದೆ. ಪಾಸ್ಪೋರ್ಟ್ ಸೇವಾ ಪೋರ್ಟಲ್ ದಾಖಲೆಗಳ ಪ್ರಕಾರ, ಅರ್ಜಿಯಲ್ಲಿ “ಯಶೋಧ ಕೇಶವ “ ಎಂದು ಕೈಬರಹದಲ್ಲಿ ನಮೂದಿಸಿ, ಅದರೊಂದಿಗೆ ಪ್ರೀತಾ ಡಿ’ಸೋಜಾ ಅವರ ಭಾವಚಿತ್ರ ಅಳವಡಿಸಲಾಗಿತ್ತು. ಯಶೋಧ ಎಂಬ ಹೆಸರಿನ ಸಹಿಯನ್ನೂ ಪ್ರೀತಾ ಡಿ’ಸೋಜ ಅವರೇ ಮಾಡಿರುವುದು ಪತ್ತೆಯಾಗಿದೆ.
ಇನ್ನಷ್ಟು ಪರಿಶೀಲನೆ ನಡೆಸಿದಾಗ, ಪ್ರೀತಾ ಡಿ’ಸೋಜಾ ಅವರು ಯಶೋಧ ಕೇಶವ ಅವರ ದಾಖಲೆಗಳಲ್ಲಿದ್ದ ವಿಳಾಸವನ್ನು ಬಳಸಿ ತಪ್ಪು ಮಾಹಿತಿ ನೀಡಿ ಅಕ್ರಮವಾಗಿ ಪಾಸ್ಪೋರ್ಟ್ ಪಡೆದು, 2025ರ ಮಾರ್ಚ್ 17ರಂದು ಮುಂಬೈ ವಿಮಾನ ನಿಲ್ದಾಣದ ಮೂಲಕ ವಿದೇಶಕ್ಕೆ ತೆರಳಿರುವುದು ತಿಳಿದುಬಂದಿದೆ.
ಅಕ್ರಮಕ್ಕೆ ಉಳ್ಳಾಲ ನಿವಾಸಿ ಪ್ರೇಮ್ ಡಿ’ಸೋಜಾ ಸಹಕಾರ ನೀಡಿದ್ದಾನೆ ಎನ್ನಲಾಗಿದ್ದು, ಪ್ರೀತಾ ಡಿ’ಸೋಜಾ ಅವರನ್ನು ಇಸ್ರೇಲ್ಗೆ ಕಳುಹಿಸುವ ಉದ್ದೇಶದಿಂದ ಯಶೋಧ ಕೇಶವ ಎಂಬವರ ದಾಖಲಾತಿಗಳನ್ನು ಬಳಸಿ ಪಾಸ್ಪೋರ್ಟ್ ಸಿದ್ಧಪಡಿಸಿದ್ದಾನೆ ಎಂದು ಆರೋಪಿಸಲಾಗಿದೆ. ಹಾಗೆಯೇ, ಯಶೋಧ ಕೇಶವ ಅವರು ತಮ್ಮ ದಾಖಲಾತಿಗಳನ್ನು ಪ್ರೀತಾ ಡಿ’ಸೋಜಾ ಅವರಿಗೆ ನೀಡಿ ನಕಲಿ ಪಾಸ್ಪೋರ್ಟ್ ಪಡೆಯಲು ಸಹಕರಿಸಿರುವ ಆರೋಪವೂ ಕೇಳಿಬಂದಿದೆ. ಪ್ರಕರಣದಲ್ಲಿ ಪ್ರೀತಾ ಡಿ’ಸೋಜಾ, ಪ್ರೇಮ್ ಡಿ’ಸೋಜಾ ಹಾಗೂ ಯಶೋಧ ಕೇಶವ ಸೇರಿದಂತೆ ಇತರರ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm