ಬ್ರೇಕಿಂಗ್ ನ್ಯೂಸ್
15-05-26 12:21 pm HK News Staffer ಕ್ರೈಂ
ಉಳ್ಳಾಲ, ಮೇ 15: ಉಳ್ಳಾಲ ರಾಜ ರಸ್ತೆಯಲ್ಲಿ ಫಿಶ್ ಮಿಲ್ ಆಯಿಲ್ ಸೋರಿಕೆಯಾಗಿರುವುದರಿಂದ ದ್ವಿಚಕ್ರ ವಾಹನಗಳು ಜಾರಿ ಬಿದ್ದು ಹಲವರು ಗಾಯಗೊಂಡಿರುವುದಕ್ಕೆ ಸ್ಪೀಕರ್ ಯು.ಟಿ.ಖಾದರ್ ವಿಷಾದ ವ್ಯಕ್ತಪಡಿಸಿದ್ದು, ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಪ್ರಕರಣಕ್ಕೆ ಸಂಬಂಧಿಸಿದ ಕಂಟೈನರ್ ಹಾಗೂ ಫಿಶ್ ಮೀಲ್ ಫ್ಯಾಕ್ಟರಿ ಮಾಲಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ನಗರ ಪೊಲೀಸ್ ಕಮಿಷನರ್ ಅವರಿಗೆ ಸೂಚಿಸಿದ್ದಾರೆ. ಘಟನೆಯಿಂದ ಗಾಯಗೊಂಡವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಕಂಟೈನರ್ಗೆ ಸಂಬಂಧಿಸಿದ ಫ್ಯಾಕ್ಟರಿ ಮಾಲಕರು ಭರಿಸಬೇಕೆಂದು ಅವರು ಆದೇಶಿಸಿದ್ದಾರೆ.
ಗುರುವಾರ ರಾತ್ರಿ ಕೋಟೆಪುರದಿಂದ ಮಂಗಳೂರು ಬಂದರಿಗೆ ಫಿಶ್ ಮೀಲ್ ಆಯಿಲನ್ನು ಒಯ್ಯುತ್ತಿದ್ದ ಬೃಹತ್ ಕ್ಯಾಂಟರ್ ಒಂದರಲ್ಲಿ ಉಂಟಾದ ತಾಂತ್ರಿಕ ದೋಷದಿಂದ ಭಾರೀ ಪ್ರಮಾಣದ ಫಿಶ್ ಆಯಿಲ್ ರಸ್ತೆಯಲ್ಲೇ ಸೋರಿಕೆಯಾಗಿತ್ತು. ಉಳ್ಳಾಲ ಅಬ್ಬಕ್ಕ ಸರ್ಕಲ್ ನಿಂದ ಉಳ್ಳಾಲ ಬೈಲ್ ವರೆಗೂ ಫಿಶ್ ಆಯಿಲ್ ಸೋರಿಕೆಯಾಗಿದ್ದು ದ್ವಿಚಕ್ರ ವಾಹನ ಸವಾರರು ರಸ್ತೆಯಲ್ಲಿ ಜಾರಿ ಬಿದ್ದು ಗಂಭೀರ ಗಾಯಗೊಂಡು ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದರು.
ಘಟನೆಯಿಂದ ಉದ್ರಿಕ್ತಗೊಂಡ ಸ್ಥಳೀಯರು ಫಿಶ್ ಮೀಲ್ ಆಯಿಲ್ ಸಾಗಿಸುತ್ತಿದ್ದ ಕ್ಯಾಂಟರನ್ನ ಉಳ್ಳಾಲ ಬೈಲಿನಲ್ಲಿ ಅಡ್ಡ ಹಾಕಿ ಪ್ರತಿಭಟಿಸಿದ್ದಾರೆ.

ಸುಮಾರು ನಲ್ವತ್ತು ಲಕ್ಷ ರೂಪಾಯಿ ಮೌಲ್ಯದ ಆಯಿಲ್ ಹೊತ್ತೊಯ್ಯುತ್ತಿದ್ದ ಕ್ಯಾಂಟರ್ ಲಾರಿಯಿಂದ ಆಯಿಲ್ ಸೋರಿಕೆಯಾಗುತ್ತಲೇ ಇದ್ದು ಆಯಿಲನ್ನು ಬೇರೊಂದು ಕ್ಯಾಂಟರ್ ಗೆ ತುಂಬಿಸಲಾಗಿದೆ. ಕ್ಯಾಂಟರ್ ಅವಾಂತರದಿಂದಾಗಿ ಉಳ್ಳಾಲ ಅಬ್ಬಕ್ಕ ಸರ್ಕಲ್ ನಿಂದ ಉಳ್ಳಾಲ ಬೈಲ್ ತನಕ ಏಕಮುಖ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಗೊಳಿಸಲಾಗಿದೆ. ರಸ್ತೆಯುದ್ದಕ್ಕೂ ಸೋರಿಕೆಯಾಗಿರುವ ಭಾರೀ ಜಿಡ್ಡಿನ ಫಿಶ್ ಆಯಿಲನ್ನ ಸ್ವಚ್ಚಗೊಳಿಸುವುದೇ ಸವಾಲಾಗಿದ್ದು, ಸ್ಥಳೀಯರು ಮರದ ಮಿಲ್ ಗಳ ಗರಗಸದ ಹುಡಿಯನ್ನ ರಸ್ತೆಗೆ ಚೆಲ್ಲಿ ಮುಂಜಾಗೃತಾ ಕ್ರಮ ವಹಿಸಿದ್ದಾರೆ.
ಘಟನೆಗೆ ಕಾರಣವಾದ ಕ್ಯಾಂಟರ್ ವಿರುದ್ಧ ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಳ್ಳಾಲ ನಗರ ಪ್ರದೇಶದಲ್ಲಿ ತಲೆ ಎತ್ತಿರುವ ಅನಧಿಕೃತ ಫಿಶ್ ಮೀಲ್ ಫ್ಯಾಕ್ಟರಿಗಳಿಂದ ಇಲ್ಲಿನ ಜನರು ನಿತ್ಯವೂ ತೊಂದರೆ ಅನುಭವಿಸುತ್ತಿದ್ದಾರೆ. ಫ್ಯಾಕ್ಟರಿಗಳ ತ್ಯಾಜ್ಯ ಸಮುದ್ರಕ್ಕೆ ಬಿಡುವುದರಿಂದ ಜಲಚರಗಳ ಮಾರಣ ಹೋಮ ನಡೆಯುತ್ತಿರುವುದಲ್ಲದೆ, ಫ್ಯಾಕ್ಟರಿಗಳಿಗೆ ದಿನನಿತ್ಯ ಸಾಗುವ ವಾಹನಗಳು ರಸ್ತೆಗೆ ದುರ್ವಾಸನೆಯುಕ್ತ ಮೀನಿನ ತ್ಯಾಜ್ಯವನ್ನ ಸುರಿಸುತ್ತಿದೆ. ಫ್ಯಾಕ್ಟರಿಗಳಿಂದ ಹೊರ ಸೂಸುವ ದುರ್ನಾತವು ಉಳ್ಳಾಲ ಮಾತ್ರವಲ್ಲದೆ ಸಮೀಪದ ಮಂಗಳಾದೇವಿ ಪರಿಸರಕ್ಕೂ ವ್ಯಾಪಿಸಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm