ಬ್ರೇಕಿಂಗ್ ನ್ಯೂಸ್
15-05-26 11:08 pm Mangalore Correspondent ಕ್ರೈಂ
ಮಂಗಳೂರು, ಮೇ 15: ಐಷಾರಾಮಿ ಕಾರಿನಲ್ಲಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಕಟ್ಟಿ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮೂಡುಬಿದ್ರೆ ಪೊಲೀಸರು ಸಿನಿಮಾ ಶೈಲಿಯಲ್ಲಿ ಬೆನ್ನಟ್ಟಿ ಬಂಧಿಸಿದ್ದಾರೆ. ಪಡು ಮಾರ್ನಾಡು ಗ್ರಾಮದ ಗುಂಡುಕಲ್ಲು ಕ್ರಾಸ್ ಬಳಿ ಕಾರ್ಯಾಚರಣೆ ನಡೆಸಲಾಗಿದೆ.
ಮೂಡುಬಿದ್ರೆ ಹಂಡೇಲು ನಿವಾಸಿ ಮಹಮ್ಮದ್ ಆರಿಫ್ ಮತ್ತು ಗಂಟಾಲಕಟ್ಟೆಯ ಇಮ್ರಾನ್ ಅಲಿಯಾಸ್ ಇಬ್ರಾಹಿಂ ಬಂಧಿತ ಆರೋಪಿಗಳು. ಕೃತ್ಯಕ್ಕೆ ಬಳಸಿದ್ದ ಮಾರುತಿ ಬ್ರೀಜಾ ಕಾರನ್ನು ವಶಪಡಿಸಲಾಗಿದೆ. ಪೊಲೀಸರು ರೌಂಡ್ಸ್ನಲ್ಲಿದ್ದಾಗ ಖಚಿತ ಮಾಹಿತಿ ಮೇರೆಗೆ ಮೇ 14ರ ಬೆಳಗ್ಗಿನ ಹೊತ್ತಿಗೆ ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಬೆಳುವಾಯಿ ಅಳಿಯೂರು ಕಡೆಯಿಂದ ವೇಗವಾಗಿ ಬಂದ ಮಾರುತಿ ಬ್ರೀಜಾ ಕಾರನ್ನು ನಿಲ್ಲಿಸಲು ಸೂಚಿಸಿದಾಗ, ಆರೋಪಿಗಳು ಕಾರನ್ನು ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದಾರೆ. ತಕ್ಷಣ ಎಚ್ಚೆತ್ತ ಪೊಲೀಸರು ಆರೋಪಿಗಳ ಕಾರನ್ನು ಬೆನ್ನಟ್ಟಿದ್ದಾರೆ. ತಪ್ಪಿಸಿಕೊಳ್ಳಲು ದಾರಿಯಿಲ್ಲದೆ ಆರೋಪಿಗಳು ಮನೆಯೊಂದರ ಕಂಪೌಂಡ್ ಒಳಗೆ ಕಾರು ನುಗ್ಗಿಸಿ ಓಡಿಹೋಗಲು ಯತ್ನಿಸಿದ್ದು ಪೊಲೀಸರು ಅವರನ್ನು ಸುತ್ತುವರೆದು ಹಿಡಿದಿದ್ದಾರೆ.
ಕಾರಿನ ಹಿಂಬದಿ ಸೀಟ್ ತೆಗೆದು ಅದರ ಮೇಲೆ ನೀಲಿ ಬಣ್ಣದ ಪ್ಲಾಸ್ಟಿಕ್ ಹೊದಿಕೆ ಹಾಕಿ ಅದರ ಮೇಲೆ ಒಂದು ಗಂಡು ಕರುವನ್ನು ಹಿಂಸಾತ್ಮಕವಾಗಿ ಕಾಲು ಮತ್ತು ತಲೆಯನ್ನು ಹಗ್ಗದಿಂದ ಕಟ್ಟಿ ತುಂಬಿಸಿರುವುದು ಕಂಡುಬಂದಿದೆ. ಆರೋಪಿಗಳು ಒಂದು ವಾರದಿಂದ ಬೇರೆ ಬೇರೆ ಕಡೆಗಳಿಂದ ದನಗಳನ್ನು ಕಳ್ಳತನ ಮಾಡಿ ಪಡುಮಾರ್ನಾಡು ಗ್ರಾಮದ ಗುಂಡುಕಲ್ಲು ನಿವಾಸಿ ಸಾಹುಲ್ ಹಮೀದ್ ಎಂಬವರ ಮನೆಯ ಬಳಿ ಕಡಿದು ಮಾಂಸ ಮಾಡಿ ಮಾರಾಟ ಮಾಡುವ ಸಲುವಾಗಿ ಸಂಗ್ರಹಣೆ ಮಾಡಿರುವುದಾಗಿ ತಿಳಿಸಿರುತ್ತಾರೆ.
ಮೊಹಮ್ಮದ್ ಆರಿಫ್ ವಿರುದ್ಧ ಬಜ್ಪೆ, ಉಡುಪಿ ಜಿಲ್ಲೆಯ ಬಣಕಲ್, ಮೂಡುಬಿದ್ರೆ ಠಾಣೆಯಲ್ಲಿ ದನ ಕಳ್ಳತನದ ಪ್ರಕರಣ ದಾಖಲಾಗಿದೆ. ಇಮ್ರಾನ್ ಮೇಲೆ ಮೂಡುಬಿದ್ರೆ, ಕಾರ್ಕಳ ಠಾಣೆಗಳಲ್ಲಿ ದನಕಳವು, ಗಾಂಜಾ ಸಾಗಣೆ ಸೇರಿ ಹಲವು ಕೇಸುಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am