ಬ್ರೇಕಿಂಗ್ ನ್ಯೂಸ್
16-05-26 11:46 am HK News Staffer ಕ್ರೈಂ
ಕಾರವಾರ, ಮೇ 16: ಗೋವಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೇತನ್ ಭಾಟಿಕರ್ ನಾಗರಹಾವು ಕಡಿದು ಮೃತಪಟ್ಟ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಅನಮೋಡ್ ಘಟ್ಟ ಪ್ರದೇಶದಲ್ಲಿ ನಡೆದಿದೆ.
ಮೂಲಗಳ ಪ್ರಕಾರ ಗೋವಾದ ಪೊಂಡಾದ ನಿವಾಸಿಯಾಗಿದ್ದ ಕೇತನ್ ಭಾಟಿಕರ್ ಪಕ್ಷದ ಕಾರ್ಯ ನಿಮಿತ್ತ ಸ್ನೇಹಿತನೊಂದಿಗೆ ಉತ್ತರ ಕನ್ನಡ ಜಿಲ್ಲೆಯ ರಾಮನಗರ ಸಮೀಪದ ಅನಮೋಡ್ ಭಾಗಕ್ಕೆ ಬಂದಿದ್ದರು. ಈ ವೇಳೆ ಘಟ್ಟ ಪ್ರದೇಶದಲ್ಲಿ ಕಾರು ನಿಲ್ಲಿಸಿ ಮೂತ್ರ ವಿಸರ್ಜನೆಗಾಗಿ ಕಾಡಿನತ್ತ ತೆರಳಿದಾಗ ನಾಗರಹಾವು ಕಡಿದಿದೆ ಎನ್ನಲಾಗಿದೆ.
ಹಾವು ಕಡಿದ ತಕ್ಷಣ ಅವರನ್ನು ಗೋವಾದ ಬಾಂಬೋಲಿನ್ನಲ್ಲಿರುವ ಜಿಎಮ್ಸಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ಸಂಬಂಧ ಕೋಲಮ್ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಕೇತನ್ ಭಾಟಿಕರ್ ಗೋವಾದ ಪೊಂಡಾ ವಿಧಾನಸಭಾ ಕ್ಷೇತ್ರ ದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಗೋವಾ ಕೃಷಿ ಸಚಿವ ರವಿ ನಾಯ್ಕ ಅವರ ಅಕಾಲಿಕ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ನಡೆಯುತ್ತಿದ್ದ ಉಪಚುನಾವಣೆಯಲ್ಲಿ ಅವರು ಸ್ಪರ್ಧಿಸಿದ್ದರು. ಜನಸಂಪರ್ಕ ಹಾಗೂ ಸಂಘಟನಾ ಸಾಮರ್ಥ್ಯದಿಂದ ಗೆಲ್ಲುವ ಅಭ್ಯರ್ಥಿ ಎಂದೇ ಗುರುತಿಸಿಕೊಂಡಿದ್ದ ಭಾಟಿಕರ್ ಅವರ ಅಕಾಲಿಕ ನಿಧನ ರಾಜಕೀಯ ವಲಯದಲ್ಲಿ ಶೋಕ ಮೂಡಿಸಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm