ಬ್ರೇಕಿಂಗ್ ನ್ಯೂಸ್
17-05-26 08:14 pm HK News Staffer ಕ್ರೈಂ
ಕುಂದಾಪುರ, ಮೇ 17: ಕೊಲ್ಲೂರು ಸಮೀಪದ ದಳಿ ಎಂಬಲ್ಲಿ ಕೊಡಚಾದ್ರಿ ಬೆಟ್ಟಕ್ಕೆ ತೆರಳಿ ಹಿಂತಿರುಗುತ್ತಿದ್ದ ಜೀಪು ಭಾನುವಾರ ಮಧ್ಯಾಹ್ನ ಮೀನು ಸಾಗಾಟದ ಲಾರಿಗೆ ಡಿಕ್ಕಿಯಾಗಿ ಕೇರಳ ಮೂಲದ ಇಬ್ಬರು ಪ್ರವಾಸಿಗರು ಮೃತಪಟ್ಟಿದ್ದಾರೆ. ಮೂವರು ಮಕ್ಕಳು ಸೇರಿದಂತೆ ಒಟ್ಟು ಎಂಟು ಮಂದಿ ತೀವ್ರ ಗಾಯಗೊಂಡಿದ್ದಾರೆ. ಕೇರಳ ಮೂಲದ ಜ್ಯೋತಿ (35) ಹಾಗೂ ಆರ್ಯ ಅನೂಪ್ (28) ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಜೀಪ್ನಲ್ಲಿದ್ದ ಪ್ರವಾಸಿಗರು ಹಾಗೂ ಚಾಲಕ ಸೇರಿದಂತೆ ಎಂಟು ಮಂದಿ ತೀವ್ರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಅಯನ್ (5), ಅವನಿ (8), ಅರ್ಜುನ್ (9), ಮಿನಿ (60), ಅಭಿ (36), ಅನೂಪ್ (37), ಜ್ಯೋತಿಷ್ (43) ಮತ್ತು ಜೀಪು ಚಾಲಕ ದೇವರಾಜ್ ಎಂದು ಗುರುತಿಸಲಾಗಿದೆ. ಇವರೆಲ್ಲರಿಗೂ ಕುಂದಾಪುರ ಹಾಗೂ ಮಣಿಪಾಲದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳೆಲ್ಲ ಕೇರಳ ರಾಜ್ಯದ ಒಂದೇ ಕುಟುಂಬದ ಪ್ರವಾಸಿಗರು ಎಂದು ತಿಳಿದುಬಂದಿದೆ.
ಇವರು ಜೀಪಿನಲ್ಲಿ ಕೊಡಚಾದ್ರಿ ಬೆಟ್ಟ ವೀಕ್ಷಿಸಿ ಕೊಲ್ಲೂರಿನತ್ತ ಮರಳುತ್ತಿದ್ದಾಗ ಕೊಲ್ಲೂರಿನಿಂದ ನಾಗೋಡಿ ಕಡೆಗೆ ಸಾಗುತ್ತಿದ್ದ ಮೀನಿನ ಲಾರಿ ನಡುವೆ ದಳಿ ಎಂಬಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಕೊಲ್ಲೂರು ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am