ಬ್ರೇಕಿಂಗ್ ನ್ಯೂಸ್
18-05-26 12:37 pm HK News Staffer ಕ್ರೈಂ
ರಾಯಚೂರು, ಮೇ 18: ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಅಣ್ಣನನ್ನೇ ತಮ್ಮ ಕೊಲೆ ಮಾಡಿರುವ ಹೃದಯ ಕಲುಕುವ ಘಟನೆ ಜಿಲ್ಲೆಯ ಲಿಂಗಸೂಗೂರು ಪಟ್ಟಣದ ಬಸವಸಾಗರ ಕ್ರಾಸ್ ಬಳಿ ನಡೆದಿದೆ.
ಮೃತರನ್ನು ಬಸವರಾಜ (37) ಎಂದು ಗುರುತಿಸಲಾಗಿದ್ದು, ಆರೋಪಿ ಶ್ರೀಧರ್ನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಸಂಬಂಧ ಲಿಂಗಸೂಗೂರು ಪೊಲೀಸ್ ಠಾಣೆಯಲ್ಲಿ ಕೊಲೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಮಾಹಿತಿ ನೀಡಿದ್ದು, ಮೃತ ಬಸವರಾಜ ಕುಡಿದು ಮನೆಗೆ ಬಂದು ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎನ್ನಲಾಗಿದೆ. ಇದರಿಂದ ಆಕ್ರೋಶಗೊಂಡ ತಮ್ಮ ಶ್ರೀಧರ್, ಅಣ್ಣ ನಿದ್ರೆಗೆ ಜಾರಿದ ಬಳಿಕ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಅಣ್ಣನನ್ನು ಕೊಲೆ ಮಾಡಿದ ಬಳಿಕ, ಘಟನೆ ಆತ್ಮಹತ್ಯೆಯಂತೆ ತೋರಿಸಲು ಶ್ರೀಧರ್ ಕುತಂತ್ರ ರೂಪಿಸಿದ್ದಾನೆ. ಸೀರೆಯನ್ನು ಬಳಸಿಕೊಂಡು ಫ್ಯಾನ್ಗೆ ಅಣ್ಣನ ಹೆಣವನ್ನು ನೇತು ಹಾಕಿ ಅಣ್ಣನೇ ನೇಣು ಹಾಕಿಕೊಂಡಿದ್ದಾನೆ ಎಂಬಂತೆ ಮನೆಯವರಿಗೆ ನಂಬಿಸಲು ಯತ್ನಿಸಿದ್ದಾನೆ. ಇದರ ಜೊತೆಗೆ, ಬಳಿಕ ಬಾಗಿಲಿನ ಚೀಲಕ ಮುರಿದಂತೆ ಮಾಡಿ ಅಣ್ಣನ ಶವವನ್ನು ಕೆಳಗೆ ಇಳಿಸಿದ ತಮ್ಮ ತದನಂತರ ಅಣ್ಣ ಬಸವರಾಜ್ ಜೀವ ಇರಬಹುದು ಎಂದು ತಾಯಿಗೆ ನಂಬಿಸಿ ಖಾಸಗಿ ವಾಹನದಲ್ಲಿ ಶವ ತೆಗೆದುಕೊಂಡು ತಾಲೂಕು ಆಸ್ಪತ್ರೆಗೆ ಹೋಗಿದ್ದಾನೆ.
ತಾಲೂಕು ಆಸ್ಪತ್ರೆಯಲ್ಲಿ ವೈದ್ಯರು ಪರಿಶೀಲನೆ ನಡೆಸಿದಾಗ, ಬಸವರಾಜ್ ಈಗಾಗಲೇ ಮೃತಪಟ್ಟಿರುವುದು ದೃಢಪಟ್ಟಿದೆ. ಇದರಿಂದ ಘಟನೆಗೆ ಹೊಸ ತಿರುವು ಸಿಕ್ಕಿದ್ದು, ಅನುಮಾನಗಳು ಗಟ್ಟಿಯಾದವು. ಇತ್ತ ಬಸವರಾಜ್ ಸಾವಿನ ಕುರಿತು ಲಿಂಗಸೂಗೂರು ಪೊಲೀಸ್ ಠಾಣೆಯಲ್ಲಿ ಮೃತನ ತಂದೆ ವಾಸುದೇವ್ ದೂರು ನೀಡಿದ್ದಾರೆ. ಮಾಹಿತಿ ದೊರಕುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಪ್ರಕರಣದ ಗಂಭೀರತೆಯನ್ನು ಗಮನಿಸಿದ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm