ಬ್ರೇಕಿಂಗ್ ನ್ಯೂಸ್
18-05-26 04:19 pm HK News Staffer ಕ್ರೈಂ
ಬೆಳಗಾವಿ, ಮೇ 18: ಬೆಳಗಾವಿ ಶಿವಂ ಅಸೋಸಿಯೇಟ್ಸ್ ಹೆಸರಲ್ಲಿ ಬಹುಕೋಟಿ ವಂಚನೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ಒಪ್ಪಿಸಿದ್ದು ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿ ಸಲ್ಲಿಸಿದ್ದ 150 ಪುಟಗಳ ವರದಿಯನ್ನಾಧರಿಸಿ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಸಿಐಡಿ ಡಿಐಜಿ ಡಾ.ಭೀಮಾಶಂಕರ ಗುಳೇದ ನೇತೃತ್ವದ ಪೊಲೀಸರು ಬೆಳಗಾವಿಗೆ ಆಗಮಿಸಿದ್ದಾರೆ.
ಶನಿವಾರ ರಾತ್ರಿ ಆರೋಪಿ ಶಿವಾನಂದ ನೀಲಣ್ಣವರನನ್ನು ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು ಹೆಚ್ಚಿನ ವಿಚಾರಣೆಗಾಗಿ ಐದು ದಿನಗಳ ಕಾಲ ವಶಕ್ಕೆ ಪಡೆದಿದ್ದಾರೆ. ಪ್ರಕರಣ ಸಂಬಂಧ ಉಪ ವಿಭಾಗಾಧಿಕಾರಿ ಶ್ರವಣ ನಾಯಕ 20 ಗಂಟೆ ಕಾಲ ಪರಿಶೀಲನೆ ನಡೆಸಿ, ಸಿದ್ಧಪಡಿಸಿರುವ 150 ಪುಟಗಳ ವರದಿಯೇ ತನಿಖೆಗೆ ಮುಖ್ಯ ಆಧಾರವಾಗಿದೆ. ಸಂಸ್ಥೆ ಆರಂಭದಿಂದ ಈವರೆಗೆ ಸಂಗ್ರಹವಾಗಿರುವ ಠೇವಣಿ, 35 ಸಾವಿರ ಜನರಿಂದ ಜಮೆ ಮಾಡಿಕೊಂಡಿರುವ ಮೊತ್ತ, ಅವರ ಹೂಡಿಕೆಗೆ ಪ್ರತಿಯಾಗಿ ಪ್ರತಿ ತಿಂಗಳು ನೀಡಿರುವ ಬಡ್ಡಿ, ಇದೇ ಹಣದಿಂದ ಸಂಪಾದಿಸಲಾಗಿರುವ ಚರಾಸ್ತಿ ಮತ್ತು ಸ್ಥಿರಾಸ್ತಿ, ಬ್ಯಾಂಕ್ ವಹಿವಾಟು, ವಿವಿಧೆಡೆ ಮಾಡಿರುವ ಹೂಡಿಕೆ, ಸಿಎಸ್ಆರ್ ಅಡಿ ಮಾಡಿರುವ ವೆಚ್ಚಗಳ ಸಮಗ್ರ ಮಾಹಿತಿಯನ್ನು ವರದಿಯಲ್ಲಿ ದಾಖಲಿಸಲಾಗಿದೆ.
ಬಹುಕೋಟಿ ವಂಚನೆ ಪ್ರಕರಣಗಳು ಬೆಳಗಾವಿಗೆ ಹೊಸದೇನಲ್ಲ. 18 ವರ್ಷಗಳ ಹಿಂದೆ ಸಾಯಿ ಮಲ್ಟಿ ಸ್ಕೀಮ್ (ಎಸ್ಎಂಎಸ್) ಹೆಸರಿನಲ್ಲಿ ಸಂಜಯ ಟೆಂಗಿನಕಾಯಿ ಎಂಬಾತ, ಠೇವಣಿ ಹಣಕ್ಕೆ ಮೂರು ವರ್ಷದ ವರೆಗೆ ತಿಂಗಳಿಗೆ ಶೇ.10ರ ಬಡ್ಡಿ ಅಮಿಷ ತೋರಿಸಿ ಹಣ ಹೂಡಿಕೆ ಮಾಡಿಸಿ ಮೋಸ ಮಾಡಿದ್ದ. ಮತ್ತೊಂದು ಪ್ರಕರಣದಲ್ಲಿ ಬೆಳಗಾವಿ, ಚಿಕ್ಕೋಡಿ, ಗೋಕಾಕ, ಬೈಲಹೊಂಗಲ ಭಾಗದಲ್ಲಿ ರೈತರಿಗೆ ಎಮು ಪಕ್ಷಿ ಮಾಂಸ, ಮೊಟ್ಟೆ, ಗರಿಗಳನ್ನು ಹೆಚ್ಚಿನ ಬೆಲೆಗೆ ತೆಗೆದುಕೊಳ್ಳುತ್ತೇವೆ ಎಂದು ನಂಬಿಸಿ, ರೈತರಿಗೆ ಮರಿಗಳನ್ನು ಮಾರಲಾಗಿತ್ತು. ಎಮು ಪಕ್ಷಿ ದೊಡ್ಡದಾಗಿ ಮೊಟ್ಟೆಯಿಡುವ ಹೊತ್ತಿಗೆ, ಮರಿ ಕೊಟ್ಟವರು ನಾಪತ್ತೆಯಾಗಿದ್ದರು.
ಬಹುಕೋಟಿ ವಂಚನೆ ಪ್ರಕರಣ ಅಂತಾರಾಜ್ಯ ವ್ಯಾಪ್ತಿ ಹೊಂದಿದ್ದು 50 ಕೋಟಿಗೂ ಹೆಚ್ಚಿನ ಅವ್ಯವಹಾರ ಆಗಿರುವುದರಿಂದ ಸಿಐಡಿಗೆ ನೀಡಲಾಗಿದೆ. ಈವರೆಗಿನ ತನಿಖಾ ಮಾಹಿತಿ ಹಾಗೂ ಜಪ್ತಿ ಮಾಡಿಕೊಂಡ ದಾಖಲೆಗಳನ್ನು ಸಿಐಡಿಗೆ ಹಸ್ತಾಂತರಿಸಿದ್ದೇವೆ ಎಂದು ಬೆಳಗಾವಿ ಎಸ್ಪಿ ಭೂಷಣ ಬೋರಸೆ ತಿಳಿಸಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm