ಬ್ರೇಕಿಂಗ್ ನ್ಯೂಸ್
18-05-26 06:21 pm HK News Staffer ಕ್ರೈಂ
ಮಡಿಕೇರಿ, ಮೇ 18: ಸಾಕಾನೆಗಳ ಕಾದಾಟದ ವೇಳೆ ಪ್ರವಾಸ ಬಂದಿದ್ದ ಮಹಿಳೆಯೊಬ್ಬರು ಅವುಗಳ ನಡುವೆ ಸಿಲುಕಿ ದಾರುಣ ಮೃತಪಟ್ಟ ಘಟನೆ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣದ ದುಬಾರೆ ಆನೆ ಶಿಬಿರದಲ್ಲಿ ನಡೆದಿದೆ. ಎರಡು ಆನೆಗಳ ತಳ್ಳಾಟದ ವೇಳೆ ಅಲ್ಲಿಯೇ ನಿಂತುಕೊಂಡಿದ್ದ ಮಹಿಳೆ ನೆಲಕ್ಕುರುಳಿದ್ದು ಆನೆಯ ಕಾಲಿನಡಿಗೆ ಬಿದ್ದಿದ್ದಾರೆ.
ಗಂಭೀರ ಗಾಯಗೊಂಡಿದ್ದ ಆಕೆಯನ್ನು ಕೂಡಲೇ ಕುಶಾಲನಗರ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮೃತರನ್ನು ಚೆನ್ನೈ ಮೂಲದ ಜಿನ್ಶು(33) ಎಂದು ಗುರುತಿಸಲಾಗಿದೆ. ಮಹಿಳೆ ತನ್ನ ಕುಟುಂಬ ಸಮೇತ ನಂಜರಾಯಪಟ್ಟಣದ ದುಬಾರೆ ಆನೆ ಶಿಬಿರಕ್ಕೆ ಪ್ರವಾಸ ಬಂದಿದ್ದರು. ಕಾವೇರಿ ನೀರಿನಲ್ಲಿ ಆಟವಾಡುತ್ತಿದ್ದ ಸಂದರ್ಭ ಆನೆಗಳನ್ನು ಸಾಕುವ ಮಾವುತರು ಕಂಜನ್ ಮತ್ತು ಮಾರ್ತಾಂಡ ಎಂಬ ಎರಡು ಆನೆಗಳನ್ನು ಸ್ನಾನಕ್ಕೆ ಕರೆತಂದಿದ್ದರು. ಈ ವೇಳೆ ಆನೆಗಳ ನಡುವೆ ಕಾದಾಟ ಶುರುವಾಗಿದೆ. ತಳ್ಳಾಟದಲ್ಲಿ ಅಲ್ಲೇ ಇದ್ದ ಪ್ರವಾಸಿ ಮಹಿಳೆಯ ಮೇಲೆ ಮಾರ್ತಾಂಡ ಆನೆ ಬಿದ್ದಿದ್ದು, ನೆಲಕ್ಕೆ ಅಪ್ಪಳಿಸಿದ ಜಿನ್ಶು ಅವರ ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ.
ಆನೆಗಳ ನಿಯಂತ್ರಣಕ್ಕೆ ಮಾವುತರಿಬ್ಬರು ಸತತ ಪ್ರಯತ್ನ ನಡೆಸಿದರೂ, ಮಗುವನ್ನು ಕೈನಲ್ಲಿ ಹಿಡಿದಿದ್ದ ವ್ಯಕ್ತಿಯೊಬ್ಬರು ಮತ್ತು ಇತರರು ಮಹಿಳೆಯ ರಕ್ಷಣೆಗೆ ಯತ್ನಿಸಿದರೂ ಫಲಕಾರಿಯಾಗಿಲ್ಲ. ಇತರ ಪ್ರವಾಸಿಗರು ಆನೆಗಳ ಕಾದಾಟಕ್ಕೆ ಬೆದರಿ ಓಡಿದ್ದರಿಂದ ಬಚಾವ್ ಆಗಿದ್ದಾರೆ. ಘಟನೆ ಸಂಬಂಧ ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm