ಬ್ರೇಕಿಂಗ್ ನ್ಯೂಸ್
18-05-26 06:47 pm HK News Staffer ಕ್ರೈಂ
ಮಂಗಳೂರು, ಮೇ 18 : ಇನ್ಸ್ಟಾಮಾರ್ಟ್ ಉದ್ಯೋಗಿ ನೌಫಾಲ್ ಸಾವಿನ ಪ್ರಕರಣ ಇದೀಗ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಘಟನೆಯ ಹಿಂದೆ ಲಿಫ್ಟ್ ಸುರಕ್ಷತೆ, ಪರವಾನಗಿ ಹಾಗೂ ಕಟ್ಟಡ ಮಾಲೀಕರ ಬೇಜವಾಬ್ದಾರಿ ಕುರಿತು ಪ್ರಶ್ನೆಗಳು ಎದ್ದಿವೆ. ನಗರದ ಕುಂಟಿಕಾನ ಸಮೀಪದ ಕಟ್ಟಡದಲ್ಲಿ ಸಂಭವಿಸಿದ ಲಿಫ್ಟ್ ದುರ್ಘಟನೆಯ ವಿಚಾರದಲ್ಲಿ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಳ್ತಂಗಡಿ ಮೂಲದ ನೌಫಾಲ್ ಎಂಬ ಯುವಕ ಲಿಫ್ಟ್ನಲ್ಲಿ ಸಿಲುಕಿ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿ, “ಈ ಲಿಫ್ಟ್ಗೆ ಅಧಿಕೃತ ಪರವಾನಗಿ ಇದೆಯೇ? ನಗರ ಪಾಲಿಕೆ ಅನುಮತಿ ನೀಡಿದೆಯೇ? ಎಂಬ ಪ್ರಶ್ನೆಗಳು ಇದೀಗ ಕೇಳಿಬರುತ್ತಿವೆ. ಸಾಮಾನ್ಯವಾಗಿ ವಾಣಿಜ್ಯ ಕಟ್ಟಡಗಳಲ್ಲಿ ಅಳವಡಿಸುವ ಲಿಫ್ಟ್ಗಳ ನಿರ್ವಹಣೆ ಹಾಗೂ ಸುರಕ್ಷತಾ ತಪಾಸಣೆಗೆ ಮೆಸ್ಕಾಂ ಅಥವಾ ಸಂಬಂಧಿತ ತಾಂತ್ರಿಕ ಇಲಾಖೆಯ ಅಧಿಕಾರಿಗಳನ್ನು ನೇಮಿಸಲಾಗುತ್ತದೆ. ಅವರು ಪ್ರತಿವರ್ಷ ಪರಿಶೀಲನೆ ನಡೆಸಿ ಸುರಕ್ಷತಾ ಮಾನದಂಡಗಳನ್ನು ಖಚಿತಪಡಿಸಬೇಕು. ಆದರೆ, ಈ ಪ್ರಕರಣದಲ್ಲಿ ಬಳಸಲಾಗುತ್ತಿದ್ದ ಲಿಫ್ಟ್ ಸಾಮಾನ್ಯ ಪ್ರಯಾಣಿಕರ ಲಿಫ್ಟ್ ಮಾದರಿಯದ್ದಲ್ಲ ಎಂಬ ಅನುಮಾನ ವ್ಯಕ್ತವಾಗಿದೆ.

ಸ್ಥಳೀಯರ ಆರೋಪದ ಪ್ರಕಾರ, ಪಾರ್ಕಿಂಗ್ ಜಾಗದಲ್ಲೇ ತಾತ್ಕಾಲಿಕ ರೀತಿಯಲ್ಲಿ ತಗಡಿನಿಂದ ಸರಕು ಸಾಗಣೆಗಾಗಿ ಲಿಫ್ಟ್ ನಿರ್ಮಿಸಲಾಗಿತ್ತು. “ಸರಕು ಸಾಗಣೆ ಲಿಫ್ಟ್ ಹಾಳಾದರೆ ವ್ಯಕ್ತಿ ಕೆಳಗೆ ಬೀಳುವ ಸಾಧ್ಯತೆ ಇರುತ್ತದೆ. ಆದರೆ ಸಾಯುವ ಮಟ್ಟದ ದುರಂತ ಹೇಗೆ ಸಂಭವಿಸಿತು?” ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಪ್ರಕರಣದಲ್ಲಿ ಕೇವಲ ಇನ್ಸ್ಟಾಮಾರ್ಟ್ ಕಂಪನಿಯ ಹೊಣೆಗಾರಿಕೆ ಮಾತ್ರವಲ್ಲ, ಕಟ್ಟಡ ಮಾಲೀಕರ ಪಾತ್ರವನ್ನೂ ತನಿಖೆ ಮಾಡಬೇಕು ಎಂದು ಆಗ್ರಹ ಕೇಳಿಬಂದಿದೆ. “ಕಟ್ಟಡ ಮಾಲೀಕ ರಸಾಕ್ ಎಂಬಾತ ಕೇರಳ ಮೂಲದವನು ಎನ್ನಲಾಗುತ್ತಿದೆ. ಘಟನೆಯ ಬಗ್ಗೆ ಕೇಳಿದಾಗ, ‘ನನಗೂ ಇದಕ್ಕೂ ಸಂಬಂಧ ಇಲ್ಲ, ಎಲ್ಲವೂ ಕಾನೂನುಬದ್ಧವಾಗಿದೆ’ ಎಂದು ಹೇಳುತ್ತಿದ್ದಾರೆ. ಆದರೆ ಕಟ್ಟಡದಲ್ಲಿ ಪಾರ್ಕಿಂಗ್ ಜಾಗವನ್ನು ವಾಣಿಜ್ಯ ಚಟುವಟಿಕೆಗಳಿಗೆ ಬಳಸಲು ಅವಕಾಶ ನೀಡಿದ್ದು ಹೇಗೆ ಎಂದು ಸ್ಥಳೀಯರು ಪ್ರಶ್ನಿಸಿದ್ದಾರೆ.
ಘಟನೆಯ ನಂತರ ಇನ್ಸ್ಟಾಮಾರ್ಟ್ ಕೇಂದ್ರದ ಒಳಗೆ ಯಾರನ್ನೂ ಬಿಡುತ್ತಿಲ್ಲ ಎನ್ನುವ ಆರೋಪ ಕೇಳಿಬಂದಿದೆ. ಸ್ಥಳದಲ್ಲಿ ಬೌನ್ಸರ್ ನಿಯೋಜನೆ ಮಾಡಿ ಸಾರ್ವಜನಿಕರು ಹಾಗೂ ಮಾಧ್ಯಮದವರ ಪ್ರವೇಶ ತಡೆಯಲಾಗುತ್ತಿದೆ ಎಂದು ಕೆಲವರು ದೂರಿದ್ದಾರೆ. ಇನ್ನೊಂದೆಡೆ, ಘಟನೆ ಬಳಿಕ ಕಂಪನಿ, ಕಟ್ಟಡ ಮಾಲೀಕ ಅಥವಾ ಸಂಬಂಧಿತ ಅಧಿಕಾರಿಗಳಿಂದ ಸ್ಪಷ್ಟ ಪ್ರತಿಕ್ರಿಯೆ ಲಭ್ಯವಾಗದಿರುವುದು ಅನುಮಾನಗಳಿಗೆ ಕಾರಣವಾಗಿದೆ. ನಗರಪಾಲಿಕೆ, ಪೊಲೀಸ್ ಇಲಾಖೆ ಹಾಗೂ ಸಂಬಂಧಿತ ಸುರಕ್ಷತಾ ಸಂಸ್ಥೆಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆ ನಡೆಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am