ಬ್ರೇಕಿಂಗ್ ನ್ಯೂಸ್
19-05-26 05:55 pm HK News Staffer ಕ್ರೈಂ
ಮಂಡ್ಯ, ಮೇ 19: ತಾಯಿ ಬೈದಿದ್ದಕ್ಕೆ ನೊಂದ ಅಪ್ರಾಪ್ತ ಸೋದರಿಯರಿಬ್ಬರು ಅಮ್ಮನಿಗೆ ಭಾವುಕ ಪತ್ರವೊಂದನ್ನು ಬರೆದಿಟ್ಟು ಮನೆಯಿಂದ ನಾಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದ್ದು ಹೆತ್ತವರು ಆತಂಕಗೊಂಡು ಪೊಲೀಸ್ ದೂರು ನೀಡಿದ್ದಾರೆ. ಶ್ರೀರಂಗಪಟ್ಟಣ ತಾಲೂಕಿನ ಕಾಳೇನಹಳ್ಳಿಯಲ್ಲಿ ಘಟನೆ ನಡೆದಿದ್ದು ರಾಮಚಂದ್ರ ಎಂಬವರ ಮಕ್ಕಳಾದ ಸುಜಾತಾ(16) ಮತ್ತು ರುಕ್ಮಿಣಿ(14) ಮನೆ ಬಿಟ್ಟು ಹೋದವರು.
ಯಾವುದೋ ವಿಷಯಕ್ಕೆ ಮನೆಯಲ್ಲಿ ತಾಯಿ ಬೈದಿದ್ದು ಮನನೊಂದ ಸಹೋದರಿಯರು, ಮನೆಯನ್ನೇ ಬಿಟ್ಟು ಹೋಗಿದ್ದಾರೆ. ಹೋಗುವ ಮುನ್ನ, "ಅಮ್ಮ-ಅಪ್ಪ ಸ್ಸಾರಿ.. ನಿಮ್ಮ ಕಣ್ಣು ಮುಂದೆ ಸಾಯುವುದಕ್ಕೆ ಆಗಲ್ಲ... ಹೀಗಾಗಿ ನಾವು ದೂರ ಹೋಗಿ ಸಾಯುತ್ತಿದ್ದೇವೆ" ಎಂದು ಆಘಾತಕಾರಿ ಪತ್ರ ಬರೆದಿಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ.
ಸುಜಾತ ಮತ್ತು ರುಕ್ಮಿಣಿ ಮನೆ ಬಿಟ್ಟು ಹೋಗುವ ಮುನ್ನ ಬರೆದಿಟ್ಟಿರುವ ಪತ್ರ ಪೋಷಕರು ಹಾಗೂ ಗ್ರಾಮಸ್ಥರನ್ನು ಆತಂಕಕ್ಕೆ ಈಡುಮಾಡಿದೆ. ಪತ್ರ ಓದಿದ ಕೂಡಲೇ ಆತಂಕಗೊಂಡ ಪೋಷಕರು, ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಗೆ ತೆರಳಿ ಕಣ್ಣೀರಿಟ್ಟಿದ್ದಾರೆ. ಕೂಡಲೇ ಪೊಲೀಸರು ದೂರು ದಾಖಲಿಸಿ ಮಕ್ಕಳ ಪತ್ತೆಗೆ ಶೋಧ ಕಾರ್ಯ ನಡೆಸಿದ್ದಾರೆ. ಮಕ್ಕಳು ಪ್ರಾಣಕ್ಕೆ ಅಪಾಯ ಮಾಡಿರಬಹುದೇ ಎಂಬ ಆತಂಕದಲ್ಲಿ ಕಣ್ಣೀರು ಹಾಕುತ್ತಿದ್ದಾರೆ. ಶಾಲೆಗೆ ಬೇಸಿಗೆ ರಜೆ ಇರುವುದರಿಂದ ಮನೆಯಲ್ಲಿ ಏನೋ ವಿಚಾರಕ್ಕೆ ತಾಯಿ ಬೈದಿದ್ದು ಅದನ್ನೇ ಮುಂದಿಟ್ಟು ಮಕ್ಕಳಿಬ್ಬರು ಮನೆಯಿಂದಲೇ ದೂರವಾಗಿ ಆತಂಕ ಮೂಡಿಸಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm