ಬ್ರೇಕಿಂಗ್ ನ್ಯೂಸ್
19-05-26 05:55 pm HK News Staffer ಕ್ರೈಂ
ಮಂಡ್ಯ, ಮೇ 19: ತಾಯಿ ಬೈದಿದ್ದಕ್ಕೆ ನೊಂದ ಅಪ್ರಾಪ್ತ ಸೋದರಿಯರಿಬ್ಬರು ಅಮ್ಮನಿಗೆ ಭಾವುಕ ಪತ್ರವೊಂದನ್ನು ಬರೆದಿಟ್ಟು ಮನೆಯಿಂದ ನಾಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದ್ದು ಹೆತ್ತವರು ಆತಂಕಗೊಂಡು ಪೊಲೀಸ್ ದೂರು ನೀಡಿದ್ದಾರೆ. ಶ್ರೀರಂಗಪಟ್ಟಣ ತಾಲೂಕಿನ ಕಾಳೇನಹಳ್ಳಿಯಲ್ಲಿ ಘಟನೆ ನಡೆದಿದ್ದು ರಾಮಚಂದ್ರ ಎಂಬವರ ಮಕ್ಕಳಾದ ಸುಜಾತಾ(16) ಮತ್ತು ರುಕ್ಮಿಣಿ(14) ಮನೆ ಬಿಟ್ಟು ಹೋದವರು.
ಯಾವುದೋ ವಿಷಯಕ್ಕೆ ಮನೆಯಲ್ಲಿ ತಾಯಿ ಬೈದಿದ್ದು ಮನನೊಂದ ಸಹೋದರಿಯರು, ಮನೆಯನ್ನೇ ಬಿಟ್ಟು ಹೋಗಿದ್ದಾರೆ. ಹೋಗುವ ಮುನ್ನ, "ಅಮ್ಮ-ಅಪ್ಪ ಸ್ಸಾರಿ.. ನಿಮ್ಮ ಕಣ್ಣು ಮುಂದೆ ಸಾಯುವುದಕ್ಕೆ ಆಗಲ್ಲ... ಹೀಗಾಗಿ ನಾವು ದೂರ ಹೋಗಿ ಸಾಯುತ್ತಿದ್ದೇವೆ" ಎಂದು ಆಘಾತಕಾರಿ ಪತ್ರ ಬರೆದಿಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ.
ಸುಜಾತ ಮತ್ತು ರುಕ್ಮಿಣಿ ಮನೆ ಬಿಟ್ಟು ಹೋಗುವ ಮುನ್ನ ಬರೆದಿಟ್ಟಿರುವ ಪತ್ರ ಪೋಷಕರು ಹಾಗೂ ಗ್ರಾಮಸ್ಥರನ್ನು ಆತಂಕಕ್ಕೆ ಈಡುಮಾಡಿದೆ. ಪತ್ರ ಓದಿದ ಕೂಡಲೇ ಆತಂಕಗೊಂಡ ಪೋಷಕರು, ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಗೆ ತೆರಳಿ ಕಣ್ಣೀರಿಟ್ಟಿದ್ದಾರೆ. ಕೂಡಲೇ ಪೊಲೀಸರು ದೂರು ದಾಖಲಿಸಿ ಮಕ್ಕಳ ಪತ್ತೆಗೆ ಶೋಧ ಕಾರ್ಯ ನಡೆಸಿದ್ದಾರೆ. ಮಕ್ಕಳು ಪ್ರಾಣಕ್ಕೆ ಅಪಾಯ ಮಾಡಿರಬಹುದೇ ಎಂಬ ಆತಂಕದಲ್ಲಿ ಕಣ್ಣೀರು ಹಾಕುತ್ತಿದ್ದಾರೆ. ಶಾಲೆಗೆ ಬೇಸಿಗೆ ರಜೆ ಇರುವುದರಿಂದ ಮನೆಯಲ್ಲಿ ಏನೋ ವಿಚಾರಕ್ಕೆ ತಾಯಿ ಬೈದಿದ್ದು ಅದನ್ನೇ ಮುಂದಿಟ್ಟು ಮಕ್ಕಳಿಬ್ಬರು ಮನೆಯಿಂದಲೇ ದೂರವಾಗಿ ಆತಂಕ ಮೂಡಿಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am