ಬ್ರೇಕಿಂಗ್ ನ್ಯೂಸ್
20-05-26 03:08 pm HK News Staffer ಕ್ರೈಂ
ನವದೆಹಲಿ, ಮೇ 20: ಭಾರತದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಹಾಗೂ ಸ್ಲೀಪರ್ ಸೆಲ್ ಸ್ಥಾಪಿಸಲು ಪಾಕಿಸ್ತಾನದಿಂದ ನುಸುಳಿ ಬಂದಿದ್ದ ಲಷ್ಕರ್-ಎ-ತೊಯ್ಬಾ (LeT) ಉಗ್ರನೊಬ್ಬನ ಸಂಚು ಕೊನೆಗೂ ವಿಫಲವಾಗಿದೆ. ಆದರೆ ಈ ಮಿಷನ್ ವಿಫಲವಾಗಲು ಕಾರಣ ಭಾರತೀಯ ಸೇನೆಯ ಕಾರ್ಯಾಚರಣೆ ಮಾತ್ರವಲ್ಲ, ಆತನಿಗೆ ಕಾಡುತ್ತಿದ್ದ ಕೂದಲು ಉದುರುವಿಕೆ ಸಮಸ್ಯೆ ಮತ್ತು ಸುಂದರವಾಗಿ ಕಾಣಬೇಕೆಂಬ ಗೀಳು ಎಂಬ ಅಚ್ಚರಿಯ ಮಾಹಿತಿ ಬಹಿರಂಗವಾಗಿದೆ.
ಉಸ್ಮಾನ್ ಜಟ್ ಅಲಿಯಾಸ್ ‘ಚೈನೀಸ್’ ಎಂಬ ಲಷ್ಕರ್ ಉಗ್ರ ಭಾರತದಲ್ಲಿ ಭೀಕರ ವಿಧ್ವಂಸಕ ಕೃತ್ಯಗಳಿಗೆ ಸ್ಲೀಪರ್ ಸೆಲ್ ಸ್ಥಾಪಿಸುವ ಜವಾಬ್ದಾರಿಯೊಂದಿಗೆ ಪಾಕಿಸ್ತಾನದಿಂದ ನುಸುಳಿದ್ದಾನೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಆದರೆ ಭಾರತದಲ್ಲಿ ಕೆಲ ಕಾಲ ಕಳೆದ ಬಳಿಕ ಆತ ತನ್ನ ಮುಖ್ಯ ಮಿಷನ್ಗಿಂತ ಕೂದಲು ಉದುರುವಿಕೆಯ ಸಮಸ್ಯೆಯನ್ನೇ ಹೆಚ್ಚು ಗಂಭೀರವಾಗಿ ತೆಗೆದುಕೊಂಡಿದ್ದಾನೆ ಎನ್ನಲಾಗಿದೆ.
ತನ್ನ ಆತ್ಮವಿಶ್ವಾಸ ಮತ್ತು ವ್ಯಕ್ತಿತ್ವದ ಮೇಲೆ ಕೂದಲು ಉದುರುವಿಕೆ ಪರಿಣಾಮ ಬೀರಿದೆ ಎಂದು ಹೇಳಿಕೊಂಡಿದ್ದ ಆತ, ಉಗ್ರ ಚಟುವಟಿಕೆಗಳನ್ನು ಬದಿಗಿಟ್ಟು ಶ್ರೀನಗರದ ಖಾಸಗಿ ಆಸ್ಪತ್ರೆಯಲ್ಲಿ ಹೇರ್ ಟ್ರಾನ್ಸ್ಪ್ಲಾಂಟ್ ಚಿಕಿತ್ಸೆ ಪಡೆಯಲು ದಾಖಲಾಗಿದ್ದ ವೇಳೆ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಇದೇ ರೀತಿಯ ಮತ್ತೊಂದು ಪ್ರಕರಣದಲ್ಲೂ ಲಷ್ಕರ್ ಸಂಪರ್ಕ ಹೊಂದಿದ್ದ ಶಬ್ಬೀರ್ ಅಹ್ಮದ್ ಲೋನ್ ಎಂಬಾತನನ್ನು ದೆಹಲಿ ಪೊಲೀಸರು ಬಂಧಿಸಿದ್ದರು. ಈತ ಎಐ ಶೃಂಗಸಭೆಗೆ ಮುನ್ನ ದೆಹಲಿಯಲ್ಲಿ ಪ್ರಚೋದನಕಾರಿ ಪೋಸ್ಟರ್ ಅಂಟಿಸಲು ಸದಸ್ಯರನ್ನು ನೇಮಕ ಮಾಡಿಕೊಂಡಿದ್ದ ಎಂದು ಆರೋಪಿಸಲಾಗಿದೆ. ತನಿಖೆಯ ವೇಳೆ ಆತ ಗುರುಗ್ರಾಮದ ಖಾಸಗಿ ಆಸ್ಪತ್ರೆಯಲ್ಲಿ ದಂತ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದ ವಿಚಾರವೂ ಬೆಳಕಿಗೆ ಬಂದಿದೆ.
ತನಿಖಾ ಸಂಸ್ಥೆಗಳ ಪ್ರಕಾರ, ಉಗ್ರರು ಈ ರೀತಿಯ ಮೇಕ್ಓವರ್ ಮಾಡಿಸಿಕೊಳ್ಳುವುದರ ಹಿಂದೆ ಕೇವಲ ಸೌಂದರ್ಯದ ಆಸೆ ಮಾತ್ರವಿಲ್ಲ. ವಿಮಾನ ನಿಲ್ದಾಣಗಳು ಹಾಗೂ ಪ್ರಮುಖ ಕೇಂದ್ರಗಳಲ್ಲಿ ಬಳಸಲಾಗುತ್ತಿರುವ ಕೃತಕ ಬುದ್ಧಿಮತ್ತೆ (AI) ಆಧಾರಿತ ಬಯೋಮೆಟ್ರಿಕ್ ಮುಖ ಗುರುತಿಸುವಿಕೆ ತಂತ್ರಜ್ಞಾನವನ್ನು ಗೊಂದಲಕ್ಕೀಡು ಮಾಡಲು ಈ ರೀತಿಯ ಶಸ್ತ್ರಚಿಕಿತ್ಸೆಗಳನ್ನು ಬಳಸಲಾಗುತ್ತಿದೆ ಎನ್ನಲಾಗಿದೆ.
ಎಐ ತಂತ್ರಜ್ಞಾನವು ವ್ಯಕ್ತಿಯ ಕಣ್ಣು, ಮೂಗು, ದವಡೆ ಹಾಗೂ ಮುಖದ ವಿವಿಧ ಭಾಗಗಳ ಅಂತರವನ್ನು ವಿಶ್ಲೇಷಿಸಿ ಗುರುತಿಸುವುದರಿಂದ, ಮುಖದ ಆಕಾರ ಬದಲಾವಣೆ ಮೂಲಕ ತನಿಖಾ ಸಂಸ್ಥೆಗಳ ಕಣ್ತಪ್ಪಿಸಲು ಉಗ್ರರು ಯತ್ನಿಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
26/11 ಮುಂಬೈ ದಾಳಿಯ ಮಾಸ್ಟರ್ಮೈಂಡ್ ಸಾಜಿದ್ ಮಿರ್ ಸೇರಿದಂತೆ ಹಲವು ಕುಖ್ಯಾತ ಉಗ್ರರು ಇದೇ ರೀತಿಯ ತಂತ್ರ ಅನುಸರಿಸಿದ್ದ ಉದಾಹರಣೆಗಳಿವೆ. ಪ್ಲಾಸ್ಟಿಕ್ ಸರ್ಜರಿ ಮತ್ತು ರೂಪ ಬದಲಾವಣೆ ಮೂಲಕ ಗುರುತು ಮರೆಮಾಚುವ ಪ್ರಯತ್ನಗಳು ಹೊಸದೇನಲ್ಲ ಎಂದು ತನಿಖಾ ಮೂಲಗಳು ತಿಳಿಸಿವೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am