ಬ್ರೇಕಿಂಗ್ ನ್ಯೂಸ್
21-05-26 01:34 pm HK News Staffer ಕ್ರೈಂ
ಬೆಂಗಳೂರು, ಮೇ 21: ಮಣಿಪಾಲ್ ಅಕಾಡೆಮಿ ಆಫ್ ಬಿಎಫ್ಎಸ್ಐನಲ್ಲಿ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಸೆಕ್ಯುರಿಟೀಸ್ ಮಾರ್ಕೆಟ್ಸ್(NISM) ಪರೀಕ್ಷೆಗೆ ತರಬೇತಿ ಪಡೆಯುತ್ತಿದ್ದ 24 ವರ್ಷದ ಬಿಹಾರ ಮೂಲದ ಪದವಿ ವಿದ್ಯಾರ್ಥಿ ನಿಗೂಢವಾಗಿ ಮೃತಪಟ್ಟಿದ್ದು, ಇದನ್ನು ಖಂಡಿಸಿ ಸಾವಿರಾರು ವಿದ್ಯಾರ್ಥಿಗಳು ಕ್ಯಾಂಪಸ್ನಲ್ಲಿ ಪ್ರತಿಭಟನೆ ನಡೆಸಿದರು.
ಬಿಹಾರ ಮೂಲದ ಚಿನ್ನು ಕುಮಾರ್ ಮೃತ ವಿದ್ಯಾರ್ಥಿಯಾಗಿದ್ದು ಸೋಮವಾರ ಮಧ್ಯಾಹ್ನ 2.30 ರ ಸುಮಾರಿಗೆ ಸಂಸ್ಥೆಯ ಹಾಸ್ಟೆಲ್ನ ಕಿಟಕಿಯ ಗ್ರಿಲ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು. ಶವ ನೋಡಿದ ವಿದ್ಯಾರ್ಥಿಗಳು ತಕ್ಷಣ ಆಡಳಿತ ಮಂಡಳಿ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕುಮಾರ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಆಡಳಿತ ಮಂಡಳಿಯ ಕಿರುಕುಳ ಕಾರಣ ಎಂದು ಆರೋಪಿಸಿ ಸೋಮವಾರ ರಾತ್ರಿಯಿಂದ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ನ್ಯಾಯಕ್ಕಾಗಿ ಒತ್ತಾಯಿಸಿ ಘೋಷಣೆಗಳನ್ನು ಕೂಗಿ ಕ್ಯಾಂಪಸ್ನಲ್ಲಿ ಮೇಣದ ಬತ್ತಿ ಮೆರವಣಿಗೆ ನಡೆಸಿದ್ದಾರೆ. ಕೊತ್ತನೂರು ಪೊಲೀಸರು ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ಪೊಲೀಸರ ಪ್ರಕಾರ, ಪ್ರಾಥಮಿಕ ತನಿಖೆಯಲ್ಲಿ ಕುಮಾರ್, NISM ಪರೀಕ್ಷೆಗೆ ತರಬೇತಿ ಪಡೆಯುತ್ತಿದ್ದಾಗ ಗುತ್ತಿಗೆ ಆಧಾರದ ಮೇಲೆ ಖಾಸಗಿ ಬ್ಯಾಂಕ್ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಎರಡು ಬಾರಿ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದರು ಮತ್ತು ಆಡಳಿತ ಮಂಡಳಿ ಅವರನ್ನು ಸರಿಯಾಗಿ ನಡೆಸಿಕೊಳ್ಳಲಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಕುಮಾರ್ NISM ಪರೀಕ್ಷೆಗಾಗಿ ನಾಲ್ಕು ತಿಂಗಳ ತರಬೇತಿ ಕಾರ್ಯಕ್ರಮಕ್ಕೆ ಮಣಿಪಾಲ ಅಕಾಡೆಮಿ ಸೇರಿದ್ದರು. ಏಳು ಬಾರಿ ಪರೀಕ್ಷೆ ಬರೆದಿದ್ದರೂ ಪ್ರತಿ ಬಾರಿಯೂ ಒಂದು ಅಂಕದ ಅಂತರದಲ್ಲಿ ಫೇಲ್ ಆಗಿದ್ದರು ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಪರೀಕ್ಷೆಯಲ್ಲಿ ಫೇಲ್ ಮಾಡಿದ್ದಲ್ಲದೆ, ಎಲ್ಲರ ಮುಂದೆ ಅವಮಾನ ಮಾಡಲಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm