ಬ್ರೇಕಿಂಗ್ ನ್ಯೂಸ್
21-05-26 01:34 pm HK News Staffer ಕ್ರೈಂ
ಬೆಂಗಳೂರು, ಮೇ 21: ಮಣಿಪಾಲ್ ಅಕಾಡೆಮಿ ಆಫ್ ಬಿಎಫ್ಎಸ್ಐನಲ್ಲಿ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಸೆಕ್ಯುರಿಟೀಸ್ ಮಾರ್ಕೆಟ್ಸ್(NISM) ಪರೀಕ್ಷೆಗೆ ತರಬೇತಿ ಪಡೆಯುತ್ತಿದ್ದ 24 ವರ್ಷದ ಬಿಹಾರ ಮೂಲದ ಪದವಿ ವಿದ್ಯಾರ್ಥಿ ನಿಗೂಢವಾಗಿ ಮೃತಪಟ್ಟಿದ್ದು, ಇದನ್ನು ಖಂಡಿಸಿ ಸಾವಿರಾರು ವಿದ್ಯಾರ್ಥಿಗಳು ಕ್ಯಾಂಪಸ್ನಲ್ಲಿ ಪ್ರತಿಭಟನೆ ನಡೆಸಿದರು.
ಬಿಹಾರ ಮೂಲದ ಚಿನ್ನು ಕುಮಾರ್ ಮೃತ ವಿದ್ಯಾರ್ಥಿಯಾಗಿದ್ದು ಸೋಮವಾರ ಮಧ್ಯಾಹ್ನ 2.30 ರ ಸುಮಾರಿಗೆ ಸಂಸ್ಥೆಯ ಹಾಸ್ಟೆಲ್ನ ಕಿಟಕಿಯ ಗ್ರಿಲ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು. ಶವ ನೋಡಿದ ವಿದ್ಯಾರ್ಥಿಗಳು ತಕ್ಷಣ ಆಡಳಿತ ಮಂಡಳಿ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕುಮಾರ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಆಡಳಿತ ಮಂಡಳಿಯ ಕಿರುಕುಳ ಕಾರಣ ಎಂದು ಆರೋಪಿಸಿ ಸೋಮವಾರ ರಾತ್ರಿಯಿಂದ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ನ್ಯಾಯಕ್ಕಾಗಿ ಒತ್ತಾಯಿಸಿ ಘೋಷಣೆಗಳನ್ನು ಕೂಗಿ ಕ್ಯಾಂಪಸ್ನಲ್ಲಿ ಮೇಣದ ಬತ್ತಿ ಮೆರವಣಿಗೆ ನಡೆಸಿದ್ದಾರೆ. ಕೊತ್ತನೂರು ಪೊಲೀಸರು ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ಪೊಲೀಸರ ಪ್ರಕಾರ, ಪ್ರಾಥಮಿಕ ತನಿಖೆಯಲ್ಲಿ ಕುಮಾರ್, NISM ಪರೀಕ್ಷೆಗೆ ತರಬೇತಿ ಪಡೆಯುತ್ತಿದ್ದಾಗ ಗುತ್ತಿಗೆ ಆಧಾರದ ಮೇಲೆ ಖಾಸಗಿ ಬ್ಯಾಂಕ್ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಎರಡು ಬಾರಿ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದರು ಮತ್ತು ಆಡಳಿತ ಮಂಡಳಿ ಅವರನ್ನು ಸರಿಯಾಗಿ ನಡೆಸಿಕೊಳ್ಳಲಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಕುಮಾರ್ NISM ಪರೀಕ್ಷೆಗಾಗಿ ನಾಲ್ಕು ತಿಂಗಳ ತರಬೇತಿ ಕಾರ್ಯಕ್ರಮಕ್ಕೆ ಮಣಿಪಾಲ ಅಕಾಡೆಮಿ ಸೇರಿದ್ದರು. ಏಳು ಬಾರಿ ಪರೀಕ್ಷೆ ಬರೆದಿದ್ದರೂ ಪ್ರತಿ ಬಾರಿಯೂ ಒಂದು ಅಂಕದ ಅಂತರದಲ್ಲಿ ಫೇಲ್ ಆಗಿದ್ದರು ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಪರೀಕ್ಷೆಯಲ್ಲಿ ಫೇಲ್ ಮಾಡಿದ್ದಲ್ಲದೆ, ಎಲ್ಲರ ಮುಂದೆ ಅವಮಾನ ಮಾಡಲಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am