ಬ್ರೇಕಿಂಗ್ ನ್ಯೂಸ್
22-05-26 07:18 pm HK News Staffer ಕ್ರೈಂ
ಬೆಳಗಾವಿ, ಮೇ 22: ಹಿರಿಯ ವೈದ್ಯರೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ಟಿಳಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಡಾ. ದಿನೇಶ್ ಲಕ್ಷ್ಮಣ ಭಟ್ಕಳ (79) ಮೃತ ವೈದ್ಯ.
ಮಂಡೋಳಿ ರಸ್ತೆಯ ಗೋಡ್ಸೆವಾಡಿಯಲ್ಲಿರುವ ತಮ್ಮ ನಿವಾಸದ ಬಾಲ್ಕನಿಯಲ್ಲಿ ಡಾ. ಭಟ್ಕಳ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗುಂಡಿನ ಸದ್ದು ಕೇಳಿ ಮನೆಯವರು ಹಾಗೂ ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿದರೂ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು.
ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನವರಾದ ಡಾ. ದಿನೇಶ್ ಭಟ್ಕಳ ಹಲವು ವರ್ಷಗಳಿಂದ ವೈದ್ಯರಾಗಿ ಸೇವೆ ಸಲ್ಲಿಸಿ ನಂತರ ಬೆಳಗಾವಿಯಲ್ಲಿ ನೆಲೆಸಿದ್ದರು. ವೈದ್ಯಕೀಯ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿದ್ದ ಡಾ ಭಟ್ಕಳ ಅನಾರೋಗ್ಯ ಹಾಗೂ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಕಳೆದ ನಾಲ್ಕು ತಿಂಗಳ ಹಿಂದಷ್ಟೇ ದಿನೇಶ್ ಅವರಿಗೆ ಶ್ವಾಸಕೋಶ ಕ್ಯಾನ್ಸರ್ ಇರುವುದು ಗೊತ್ತಾಗಿತ್ತು. ಚಿಕಿತ್ಸೆಗಾಗಿಯೇ ತಮ್ಮೂರು ಬಿಟ್ಟು ಬೆಳಗಾವಿಯ ಟಿಳಕವಾಡಿಯ ಮಂಡೋಲಿ ರಸ್ತೆಯಲ್ಲಿ ಮನೆ ಮಾಡಿಕೊಂಡು ಕುಟುಂಬಸ್ಥರೊಂದಿಗೆ ವಾಸವಿದ್ದರು.
ಶ್ವಾಸಕೋಶ ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರು ಸಹಿಸಲಾಗದ ನೋವನ್ನು ಅನುಭವಿಸುತ್ತಿದ್ದರು ಎನ್ನಲಾಗಿದೆ. ತಮಗಾಗುತ್ತಿರುವ ನೋವಿನ ಕುರಿತು ಆಗಾಗ ತಮ್ಮ ಸ್ನೇಹಿತರೊಡನೆ ಹಂಚಿಕೊಳ್ಳುತ್ತಿದ್ದರು. ಇಂದೂ ಸಹ ಬೆಳಗ್ಗೆ ಎದ್ದ ತಕ್ಷಣ ದಿನೇಶ್ ಅವರಿಗೆ ಎದೆಯಲ್ಲಿ ಸಹಿಸಲಾಗದ ನೋವು ಕಾಣಿಸಿಕೊಂಡಿದೆ. ಹೀಗಾಗಿ, ಅವರು ತಮ್ಮ ಮನೆಯಲ್ಲಿದ್ದ ರಿವಾಲ್ವಾರ್ ತೆಗೆದುಕೊಂಡು ಮನೆಯ ಗ್ಯಾಲರಿ ಬಳಿ ಹೋಗಿ ಅಲ್ಲಿಯೇ ತಲೆಗೆ ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟಿದ್ದಾರೆ.
ವೈದ್ಯ ದಿನೇಶ್ ಆತ್ಮಹತ್ಯೆಗೆ ಶರಣಾಗುವ ಮುನ್ನ ತಮ್ಮ ಹಿತೈಷಿಗಳು ಹಾಗೂ ಮಾರ್ಗದರ್ಶಕರಿಗೆ ವಾಟ್ಸಪ್ ಸಂದೇಶ ರವಾನಿಸಿದ್ದಾರೆ. ಅದರಲ್ಲಿ ಕೆಎಲ್ಇ ಮಾಜಿ ಕಾರ್ಯಾಧ್ಯಕ್ಷ ಡಾ.ಪ್ರಭಾಕರ್ ಕೋರೆಯವರಿಗೂ ಸಹ ವಾಟ್ಸಪ್ ಸಂದೇಶ ಕಳಿಸಿದ್ದಾರೆ.
‘ನನಗೆ ನೀವು ಇಷ್ಟು ವರ್ಷ ಸಹಾಯ ಮಾಡಿದ್ದೀರಿ. ಆದರೆ, ನನಗೆ ತೀವ್ರವಾದ ಎದೆ ನೋವಿದೆ. ನಾನು ನೋವಿನಿಂದ ಬೇಸತ್ತು ಕಠಿಣ ನಿರ್ಧಾರ ತೆಗೆದುಕೊಳ್ಳುತ್ತಿದ್ದೇನೆ. ದಯವಿಟ್ಟು ನನ್ನ ಕುಟುಂಬಕ್ಕೆ ಸಹಾಯ ಮಾಡಿ. ನಗರ ಪೊಲೀಸ್ ಆಯುಕ್ತರಿಗೂ ಮಾಹಿತಿ ನೀಡಿ’ ಎಂದು ಸಂದೇಶ ಕಳುಹಿಸಿದ್ದಾರೆ.
ಡಾ. ದಿನೇಶ್ ಅವರ ಆತ್ಮಹತ್ಯೆಯ ಸುದ್ದಿ ಗೊತ್ತಾಗುತ್ತಿದ್ದಂತೆ ಸ್ಥಳೀಯರು ಕೂಡಲೇ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಡಿಸಿಪಿ ನಾರಾಯಣ ಭರಮಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಬೆಳಗಾವಿಯ ಬೀಮ್ಸ್ ಆಸ್ಪತ್ರಗೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ತನಿಖೆಯ ಬಳಿಕವೇ ತಿಳಿಯಬೇಕಿದೆ.
ಆತ್ಮಹತ್ಯೆ ಯಾವುದೇ ಸಮಸ್ಯೆಗೆ ಪರಿಹಾರವಲ್ಲ. ಮಾನಸಿಕ ಒತ್ತಡ, ಖಿನ್ನತೆ ಅಥವಾ ನಿರಾಶೆ ಎದುರಾದಾಗ ಒಂಟಿಯಾಗಿರಬೇಡಿ. ಕುಟುಂಬಸ್ಥರು, ಸ್ನೇಹಿತರು ಅಥವಾ ತಜ್ಞರೊಂದಿಗೆ ಮಾತನಾಡುವುದು ಬಹಳ ಮುಖ್ಯ. ಭಾವನಾತ್ಮಕ ಬೆಂಬಲ ಅಗತ್ಯವಿದ್ದರೆ ಸಹಾಯವಾಣಿಗಳನ್ನು ಸಂಪರ್ಕಿಸಬಹುದು.
ಸ್ನೇಹ ಫೌಂಡೇಶನ್: 044-24640050 (24x7)
ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ ಸಹಾಯವಾಣಿ: 9152987821 (ಬೆಳಗ್ಗೆ 8 ರಿಂದ ರಾತ್ರಿ 10ರವರೆಗೆ)
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm