ಬ್ರೇಕಿಂಗ್ ನ್ಯೂಸ್
22-05-26 09:25 pm HK News Staffer ಕ್ರೈಂ
ಬೆಂಗಳೂರು, ಮೇ 22: ಸ್ನೇಹಿತನ ಮನೆಯಲ್ಲೇ ದರೋಡೆ ಮಾಡಿಸಿದ್ದ ಮೇಸ್ತ್ರಿ ಸೇರಿದಂತೆ ಮೂವರು ಆರೋಪಿಗಳನ್ನು ಚಿಕ್ಕಜಾಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ಗುರುಪ್ರಸಾದ್, ಅರ್ಬಾಜ್ ಹಾಗೂ ಜಿಬ್ರಾನ್ ಬಂಧಿತ ಆರೋಪಿಗಳು.
ಚಿಕ್ಕಜಾಲದ ಹುಣಸಮಾರನಹಳ್ಳಿಯಲ್ಲಿರುವ ಕೃಷ್ಣಾಚಾರಿ ಎಂಬುವವರ ಮನೆಗೆ ಏಪ್ರಿಲ್ 18ರಂದು ರಾತ್ರಿ ನುಗ್ಗಿದ್ದ ಅರ್ಬಾಜ್ ಹಾಗೂ ಜಿಬ್ರಾನ್, ಮನೆಯವರಿಗೆ ಚಾಕು ತೋರಿಸಿ 79 ಗ್ರಾಂ ಚಿನ್ನ, 64 ಗ್ರಾಂ ಬೆಳ್ಳಿ ಹಾಗೂ 12 ಲಕ್ಷ ರೂಪಾಯಿ ನಗದು ದೋಚಿ ಪರಾರಿಯಾಗಿದ್ದರು.
ಪೊಲೀಸರ ತನಿಖೆಯಲ್ಲಿ ಈ ದರೋಡೆ ಹಿಂದೆ ಮನೆಯ ಕಾಮಗಾರಿ ನಡೆಸುತ್ತಿದ್ದ ಮೇಸ್ತ್ರಿ ಗುರುಪ್ರಸಾದ್ನ ಕೈವಾಡ ಇರುವುದು ಬಹಿರಂಗವಾಗಿದೆ. ಕೃಷ್ಣಾಚಾರಿ ಅವರ ಪುತ್ರ ಸುದರ್ಶನ್ ಹಾಗೂ ಗುರುಪ್ರಸಾದ್ ಸ್ನೇಹಿತರಾಗಿದ್ದು, ಹೊಸ ಮನೆ ನಿರ್ಮಾಣದ ಕಾಮಗಾರಿಯನ್ನು ಕಡಿಮೆ ಹಣಕ್ಕೆ ಗುರುಪ್ರಸಾದ್ಗೆ ನೀಡಲಾಗಿತ್ತು. ಆದರೆ ಕಾಮಗಾರಿ ಗುಣಮಟ್ಟ ಮತ್ತು ಹಣದ ವಿಚಾರವಾಗಿ ಆಗಾಗ ಜಗಳ, ಅಸಮಾಧಾನ ನಡೆಯುತ್ತಿತ್ತು ಎನ್ನಲಾಗಿದೆ.
ಇದರಿಂದ ಬೇಸತ್ತ ಗುರುಪ್ರಸಾದ್, ತನ್ನ ಬಳಿ ಕೆಲಸ ಮಾಡುತ್ತಿದ್ದ ಅರ್ಬಾಜ್ ಹಾಗೂ ಜಿಬ್ರಾನ್ ಮೂಲಕ ಸ್ನೇಹಿತನ ಮನೆಯಲ್ಲೇ ದರೋಡೆ ನಡೆಸುವ ಸಂಚು ರೂಪಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ದಿನ ರಾತ್ರಿ ಮನೆಗೆ ನುಗ್ಗಿದ ಆರೋಪಿಗಳು ಚಾಕು ತೋರಿಸಿ ಮನೆಯವರನ್ನು ಬೆದರಿಸಿ ಕಬೋರ್ಡ್ ಕೀ ಪಡೆದುಕೊಂಡಿದ್ದರು. ಬಳಿಕ ಮನೆಯಲ್ಲಿದ್ದ ಚಿನ್ನಾಭರಣ, ಬೆಳ್ಳಿ ಹಾಗೂ ನಗದನ್ನು ಚೀಲದಲ್ಲಿ ತುಂಬಿಕೊಂಡು ಹೋಗಿದ್ದರು.
ಈ ವೇಳೆ “ಎಲ್ಲವನ್ನೂ ದೋಚಿಕೊಂಡು ಹೋದರೆ ನಾವು ಬದುಕೋದು ಹೇಗೆ?” ಎಂದು ಮನೆಯವರು ಕೇಳಿದಾಗ, ಆರೋಪಿಗಳು 50 ಸಾವಿರ ರೂಪಾಯಿ ಇರುವ ಒಂದು ಬಂಡಲ್ ಹಿಂತಿರುಗಿಸಿ, “ಈ ಹಣದಲ್ಲಿ ಬದುಕು ನಡೆಸಿ... ಪೊಲೀಸರಿಗೆ ದೂರು ಕೊಡಬೇಡಿ” ಎಂದು ಬೆದರಿಕೆ ಹಾಕಿ ಪರಾರಿಯಾಗಿದ್ದರು ಎಂದು ಮನೆ ಮಾಲೀಕ ಕೃಷ್ಣಾಚಾರಿ ತಿಳಿಸಿದ್ದಾರೆ.
ದರೋಡೆ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಗಳಿಗಾಗಿ ಎರಡು ತಿಂಗಳು ನಿರಂತರ ಶೋಧ ನಡೆಸಿದ ಚಿಕ್ಕಜಾಲ ಪೊಲೀಸರು, ಕೊನೆಗೆ ಮೂವರನ್ನೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರಿಂದ 12 ಲಕ್ಷ ರೂಪಾಯಿ ನಗದು, ಸುಮಾರು 24 ಲಕ್ಷ ಮೌಲ್ಯದ ಚಿನ್ನಾಭರಣ, ಒಂದು ದ್ವಿಚಕ್ರ ವಾಹನ, ಒಂದು ಕಾರು ಹಾಗೂ ಎರಡು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm