ಬ್ರೇಕಿಂಗ್ ನ್ಯೂಸ್
23-05-26 09:19 am HK News Staffer ಕ್ರೈಂ
ಕಲಬುರಗಿ, ಮೇ 23: ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ.
ಮೃತರನ್ನು ಇಂಗಳಗಿ ಗ್ರಾಮದ ನಿವಾಸಿಗಳಾದ ತೋಲುಸಾಬ್ ಕ್ಯಾಶ್ವಾರ್ (27), ಹುಸೇನ್ ಷಾ (48), ಮೈಬೂಬ್ ಅಲಿ (45), ರಸೂಲ್ ಬೀ (42) ಹಾಗೂ ಫಾತೀಮಾ ಅಲಿ (38) ಎಂದು ಗುರುತಿಸಲಾಗಿದೆ.
ಕುಟುಂಬದ ಸದಸ್ಯರು ವೈಯಕ್ತಿಕ ಕೆಲಸದ ನಿಮಿತ್ತ ಯಾದಗಿರಿಗೆ ತೆರಳಿದ್ದು, ಕೆಲಸ ಮುಗಿಸಿಕೊಂಡು ಕ್ರೂಸರ್ ವಾಹನದಲ್ಲಿ ತಮ್ಮ ಊರಾದ ಇಂಗಳಗಿಗೆ ಹಿಂದಿರುಗುತ್ತಿದ್ದರು. ಈ ವೇಳೆ ಲಾಡ್ಲಾಪುರ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬಂದ ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಡಿಕ್ಕಿಯ ರಭಸಕ್ಕೆ ಕ್ರೂಸರ್ ವಾಹನ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದ ಐವರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಭೀಕರತೆಗೆ ಸ್ಥಳದಲ್ಲಿದ್ದವರು ಬೆಚ್ಚಿಬಿದ್ದಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಬಳಿಕ ನುಜ್ಜುಗುಜ್ಜಾದ ವಾಹನದಿಂದ ಮೃತದೇಹಗಳನ್ನು ಹೊರತೆಗೆದು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ಒಂದೇ ಕುಟುಂಬದ ಐವರು ಏಕಕಾಲದಲ್ಲಿ ಸಾವನ್ನಪ್ಪಿರುವುದು ಇಂಗಳಗಿ ಗ್ರಾಮದಲ್ಲಿ ದುಃಖದ ವಾತಾವರಣ ನಿರ್ಮಾಣ ಮಾಡಿದೆ. ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm