ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗುಂಪುಗಳ ನಡುವೆ ತಕರಾರು; ಪೊಲೀಸರಿಂದ ಲಘು ಲಾಠಿ ಚಾರ್ಜ್

25-05-26 02:23 pm       HK News Staffer   ಕ್ರೈಂ

ಭಟ್ಕಳ ತಾಲೂಕಿನ ಮುರಿನಕಟ್ಟೆ ಎಂಬಲ್ಲಿ ದೇವರಕಟ್ಟೆಯೊಂದರ ಮರುನಿರ್ಮಾಣಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.

ಭಟ್ಕಳ, ಮೇ 25: ಭಟ್ಕಳ ತಾಲೂಕಿನ ಮುರಿನಕಟ್ಟೆ ಎಂಬಲ್ಲಿ ದೇವರಕಟ್ಟೆಯೊಂದರ ಮರುನಿರ್ಮಾಣಕ್ಕೆ ಸಂಬಂಧಿಸಿದಂತೆ  ಎರಡು ಗುಂಪುಗಳ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.

ಮುರಿನಕಟ್ಟೆಯಲ್ಲಿ ಕಳೆದ ಹಲವು ವರ್ಷಗಳಿಂದ ಧಾರ್ಮಿಕ ನಂಬಿಕೆಯುಳ್ಳ ದೇವರಕಟ್ಟೆಯೊಂದು ಅಸ್ತಿತ್ವದಲ್ಲಿತ್ತು. ಕಳೆದ ಕೆಲವು ತಿಂಗಳ ಹಿಂದೆ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಗಾಗಿ ಈ ಕಟ್ಟೆಯನ್ನು ತೆರವುಗೊಳಿಸಲಾಗಿತ್ತು. ಸ್ಥಳೀಯರು ಇದೇ ಸ್ಥಳದ ಸಮೀಪದಲ್ಲಿ ಮತ್ತೆ ದೇವರಕಟ್ಟೆ ನಿರ್ಮಿಸಿದ್ದರು.

ದೇವರಕಟ್ಟೆಗೆ ಮತ್ತೊಂದು ಕೋಮಿನವರ ಆಕ್ಷೇಪ: 

ಸ್ಥಳೀಯರು ನಿರ್ಮಿಸಿದ್ದ ಹೊಸ ಕಟ್ಟೆಗೆ ಮತ್ತೊಂದು ಕೋಮಿನವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕಟ್ಟೆಯನ್ನು ತೆರವುಗೊಳಿಸಬೇಕೆಂದು ಒತ್ತಾಯಿಸಿ ಒಂದು ಗುಂಪು ಪ್ರತಿಭಟನೆ ನಡೆಸಿದ ಕಾರಣ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು, ಪರಿಸ್ಥಿತಿ ನಿಯಂತ್ರಿಸಿದರು.

ಇದೀಗ ಮುರಿನಕಟ್ಟೆ ಪ್ರದೇಶದಲ್ಲಿ ಬಿಗುವಿನ ವಾತಾವರಣವಿದ್ದು, ಹೆಚ್ಚಿನ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಘಟನೆಯ ಗಂಭೀರತೆಯನ್ನು ಪರಿಗಣಿಸಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಮತ್ತು ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗಿದ್ದು, ಅಧಿಕಾರಿಗಳು ಸ್ಥಳೀಯ ಮುಖಂಡರೊಂದಿಗೆ ಮಾತುಕತೆ ಮಾಡುತ್ತಿದ್ದಾರೆ.