ಬ್ರೇಕಿಂಗ್ ನ್ಯೂಸ್
06-01-21 11:40 am Udupi Correspondent ಕ್ರೈಂ
ಉಡುಪಿ, ಜ.5: ಮಂಗಳೂರು ಮತ್ತು ಉಡುಪಿಯಲ್ಲಿ ಪೊಲೀಸರಿಗೆ ಸವಾಲಾಗುವಂತೆ ಸರಣಿ ಸರಗಳ್ಳತನ ಮಾಡುತ್ತಿದ್ದ ಆರೋಪಿಯನ್ನು ಉಡುಪಿ ಪೊಲೀಸರು ಮಹತ್ವದ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ. ಈತ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳಲ್ಲಿ ಒಂಬತ್ತು ಪ್ರಕರಣಗಳಲ್ಲಿ ಭಾಗಿಯಾಗಿದ್ದಾಗಿ ಒಪ್ಪಿಕೊಂಡಿದ್ದಾನೆ.
ಮಂಗಳೂರಿನ ಮಂಗಳಾದೇವಿ ಮುಳಿಹಿತ್ಲು ನಿವಾಸಿ ಚಂದ್ರಶೇಖರ (25) ಬಂಧಿತ ಆರೋಪಿ. ಈತನಿಂದ ಒಟ್ಟು 9,38,200 ರೂ. ಮೌಲ್ಯದ 172.02 ಗ್ರಾಂ ಚಿನ್ನ ಹಾಗೂ ಟಿವಿಎಸ್ ಸ್ಟಾರ್ ಸಿಟಿ ಬೈಕ್, ಟಿವಿಎಸ್ ವಿಕ್ಟರ್, ಜುಪಿಟರ್ ಸ್ಟೂಟರ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಸರಗಳ್ಳತನ ಪ್ರಕರಣಗಳನ್ನು ಪತ್ತೆ ಹಚ್ಚಲು ಎಸ್ಪಿ ವಿಷ್ಣುವರ್ಧನ್ ಮತ್ತು ಹೆಚ್ಚುವರಿ ಎಸ್ಪಿ ಕುಮಾರಚಂದ್ರ ಮಾರ್ಗದರ್ಶನದಲ್ಲಿ ಉಡುಪಿ ಡಿವೈಎಸ್ಪಿ ಟಿ.ಆರ್.ಜೈಶಂಕರ್ ಹಾಗೂ ಕಾರ್ಕಳ ಡಿವೈಎಸ್ಪಿ ಭರತ್ ರೆಡ್ಡಿ ನೇತೃತ್ವದಲ್ಲಿ ಮೂರು ವಿಶೇಷ ತಂಡಗಳನ್ನು ರಚಿಸಲಾಗಿತ್ತು. ಮೊದಲ ತಂಡದಲ್ಲಿ ಉಡುಪಿ ನಗರ ವೃತ್ತ ನಿರೀಕ್ಷಕ ಮಂಜುನಾಥ ಹಾಗೂ ಸಿಬ್ಬಂದಿ, ಎರಡನೆ ತಂಡದಲ್ಲಿ ಡಿಸಿಐಬಿ ನಿರೀಕ್ಷಕ ಮಂಜಪ್ಪಡಿ ಆರ್. ಹಾಗೂ ಸಿಬ್ಬಂದಿ, ಮೂರನೆ ತಂಡದಲ್ಲಿ ಮಣಿಪಾಲ ಠಾಣಾ ನಿರೀಕ್ಷಕ ಮಂಜುನಾಥ ಹಾಗೂ ಸಿಬ್ಬಂದಿಯನ್ನು ನೇಮಿಸಲಾಯಿತು. ಜ.3ರಂದು ಡಿಸಿಐಬಿ ನಿರೀಕ್ಷಕ ಮಂಜಪ್ಪ ಮತ್ತು ತಂಡ ಜುಪಿಟರ್ ಸ್ಕೂಟರ್ನಲ್ಲಿ ಸಾಗುತ್ತಿದ್ದ ಆರೋಪಿಯನ್ನು ಕುಕ್ಕಿಕಟ್ಟೆ ಜಂಕ್ಷನ್ ಬಳಿ ಸಂಶಯದ ಮೇರೆಗೆ ವಶಕ್ಕೆ ಪಡೆದಿತ್ತು.

ಸರಕಳ್ಳತನಕ್ಕಾಗಿಯೇ ಬೈಕ್ ಕಳವು !
ಆರೋಪಿಯನ್ನ ವಿಚಾರಿಸಿ, ಸ್ಕೂಟರ್ ದಾಖಲೆ ಕೇಳಿದಾಗ, ಮಂಗಳೂರಿನ ಕಂಕನಾಡಿಯ ಗೋರಿಗುಡ್ಡೆ ಎಂಬಲ್ಲಿ ಸೆಕೆಂಡ್ ಹ್ಯಾಂಡ್ ಬಜಾರ್ನಿಂದ ಸ್ಕೂಟರ್ ಪಡೆದು ಟೆಸ್ಟ್ ರೈಡ್ ಮಾಡಿ ನೋಡುವುದಾಗಿ ಹೇಳಿ ತೆಗೆದುಕೊಂಡು ಬಂದಿರುವುದಾಗಿ ಹೇಳಿದ್ದಾನೆ. ಮತ್ತಷ್ಟು ವಿಚಾರಿಸಿದಾಗ ಆರೋಪಿಯ ಸರಗಳವು ಕೃತ್ಯ ಬಯಲಿಗೆ ಬಂದಿದೆ.
ಮಂಗಳೂರು ನಗರದ ಬರ್ಕೆ, ಮಣಿಪಾಲ ಹಾಗೂ ಕಂಕನಾಡಿ ಠಾಣೆ ವ್ಯಾಪ್ತಿಯಿಂದ ತಲಾ ಒಂದೊಂದು ಬೈಕ್ನ್ನು ಇದೇ ರೀತಿ ಮೋಸದಿಂದ ಪಡೆದು, ಅದೇ ಬೈಕ್ಗಳನ್ನು ಸರಗಳ್ಳತನಕ್ಕೆ ಉಪಯೋಗಿಸಿದ್ದಾಗಿ ಆರೋಪಿ ವಿಚಾರಣೆ ವೇಳಿ ಹೇಳಿದ್ದಾನೆ.

ಮಂಗಳೂರು, ಉಡುಪಿಯಲ್ಲಿ 9 ಕಡೆ ಸರಗಳ್ಳತನ
ಉಡುಪಿ ನಗರ ಠಾಣೆ ವ್ಯಾಪ್ತಿಯಲ್ಲಿ ನಾಲ್ಕು, ಮಣಿಪಾಲ ಠಾಣೆ ವ್ಯಾಪ್ತಿಯಲ್ಲಿ ಎರಡು, ಪಡುಬಿದ್ರೆ ಠಾಣಾ ವ್ಯಾಪ್ತಿಯಲ್ಲಿ ಒಂದು ಮತ್ತು ಮಂಗಳೂರು ನಗರದ ಕದ್ರಿ, ಮುಲ್ಕಿಯಲ್ಲಿ ತಲಾ ಒಂದು ಸರಗಳ್ಳತನ ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. ಈತ ಅಕ್ಟೋಬರ್ ತಿಂಗಳಲ್ಲಿ 3, ನವೆಂಬರ್ ತಿಂಗಳಲ್ಲಿ ಮೂರು, ಡಿಸೆಂಬರ್ ತಿಂಗಳಲ್ಲಿ ಒಂದೇ ದಿನ ನಾಲ್ಕು ಸರಕಳವು ಕೃತ್ಯ ಎಸಗಿದ್ದನು.
ಆರೋಪಿ ಇನ್ನು ಹೆಚ್ಚಿನ ಕಡೆಗಳಲ್ಲಿ ಅಪರಾಧ ಎಸಗಿರುವ ಬಗ್ಗೆ ಶಂಕೆ ಇದ್ದು, ಈ ಬಗ್ಗೆ ಉಡುಪಿ ನಗರ ವೃತ್ತ ನಿರೀಕ್ಷಕ ಮಂಜುನಾಥ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ. ಬಂಧಿತ ಈ ಹಿಂದೆ ದ.ಕ. ಜಿಲ್ಲೆಯ ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣದ ಆರೋಪಿಯೂ ಆಗಿದ್ದಾನೆ ಎಂದು ಎಸ್ಪಿ ವಿಷ್ಣುವರ್ಧನ್ ಮಾಹಿತಿ ನೀಡಿದ್ದಾರೆ.

ಕಾರ್ಯಾಚರಣೆಯಲ್ಲಿ ಕಾಪು ವೃತ್ತ ನಿರೀಕ್ಷಕ ಪ್ರಕಾಶ್, ಉಡುಪಿ ನಗರ ಎಸ್ಸೈ ಸಕ್ತಿವೇಲು, ಅಪರಾಧ ವಿಭಾಗದ ಎಸ್ಸೈ ವಾಸಪ್ಪ ನಾಯ್ಕ, ಮಣಿಪಾಲ ಎಸ್ಸೈ ರಾಜ್ಶೇಖರ್, ಮಲ್ಪೆಎಸ್ಸೈ ತಿಮ್ಮೇಶ್, ಕಾಪು ಎಸ್ಸೈ ರಾಘವೇಂದ್ರ, ಉಡುಪಿ ಸಂಚಾರ ಠಾಣಾ ಎಸ್ಸೈಗಳಾದ ಅಬ್ದುಲ್ ಖಾದರ್ ಮತ್ತು ಶೇಖರ್ ಹಾಗೂ ತಾಂತ್ರಿಕ ವಿಭಾಗ ಸಿಬ್ಬಂದಿಗಳು ಪಾಲ್ಗೊಂಡಿದ್ದಾರೆ.
ನರ್ಸಿಂಗ್ ಕೋರ್ಸ್ ಮುಗಿಸಿರುವ ಆರೋಪಿ ಚಂದ್ರಶೇಖರ್, ಕೋವಿಡ್ ಲಾಕ್ಡೌನ್ ನಂತರ ಕೆಲಸ ಕಳಕೊಂಡಿದ್ದನು. ಹಣಕ್ಕಾಗಿ ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿ ಸರ ಕಳ್ಳತನ ಪ್ರಕರಣಗಳಲ್ಲಿ ತೊಡಗಿಸಿದ್ದ ಎಂದು ಎಸ್ಪಿ ವಿಷ್ಣುವರ್ಧನ್ ತಿಳಿಸಿದ್ದಾರೆ.
Notorious Chain Snatcher and Bike Thief have been arrested by Udupi Police. The arrested has been identified as Chandrashekar (25).
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm