ಬ್ರೇಕಿಂಗ್ ನ್ಯೂಸ್
26-05-26 02:43 pm HK News Staffer ಕ್ರೈಂ
ಪುತ್ತೂರು, ಮೇ 26: ಇಸ್ರೇಲ್ನಲ್ಲಿ ಉದ್ಯೋಗದಲ್ಲಿದ್ದು ಇತ್ತೀಚೆಗೆ ರಜೆಗೆ ಊರಿಗೆ ಬಂದಿದ್ದ 29 ವರ್ಷದ ಯುವಕನೊಬ್ಬ ವಿದ್ಯುತ್ ಶಾಕ್ಗೆ ಒಳಗಾಗಿ ದುರ್ಮರಣ ಹೊಂದಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನಿಡಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಬೇಳೂರಿನ ಅಂಕಿಹಳ್ಳಿ ನಿವಾಸಿ ಜೊಆಕಿಂ ಪಿಂಟೋ ಅವರ ಪುತ್ರ ರೋಶನ್ ಪಿಂಟೋ (29) ಎಂದು ಗುರುತಿಸಲಾಗಿದೆ. ರೋಷನ್ ಇಸ್ರೇಲ್ನಲ್ಲಿ ಉದ್ಯೋಗದಲ್ಲಿದ್ದು, ರಜೆಗೆ ಕುಟುಂಬದೊಂದಿಗೆ ಊರಿಗೆ ಬಂದಿದ್ದರು.
ವರದಿಗಳ ಪ್ರಕಾರ, ರೋಶನ್ ತಮ್ಮ ತಂದೆ-ತಾಯಿ ಹಾಗೂ ಇಬ್ಬರು ಮಕ್ಕಳೊಂದಿಗೆ ನಿಡಳ್ಳಿ ಗ್ರಾಮದ ಬೊಳುಂಬುಡೆ ಪ್ರದೇಶದಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದರು. ಮಧ್ಯಾಹ್ನ ಊಟ ಮುಗಿಸಿ ಕೈ ತೊಳೆಯುವ ಸ್ಥಳಕ್ಕೆ ತೆರಳಿದ್ದ ವೇಳೆ ಅಚಾನಕ್ ವಿದ್ಯುತ್ ಹರಿದ ತಂತಿಗೆ ಸ್ಪರ್ಶಿಸಿ ಶಾಕ್ಗೆ ಒಳಗಾಗಿ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತಾದರೂ, ವೈದ್ಯರು ಅವರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ವಿದೇಶದಲ್ಲಿ ಉದ್ಯೋಗದಲ್ಲಿದ್ದು ರಜೆಗೆ ಬಂದಿದ್ದ ಯುವಕನ ಅಕಾಲಿಕ ಸಾವು ಕುಟುಂಬವನ್ನು ಆಘಾತಕ್ಕೆ ತಳ್ಳಿದ್ದು, ಪ್ರದೇಶದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಇತ್ತೀಚೆಗೆ ಅವರು ಹೊಸ ಮನೆ ನಿರ್ಮಿಸಿ ಈ ತಿಂಗಳ ಆರಂಭದಲ್ಲೇ ಗೃಹಪ್ರವೇಶ ಮಾಡಿದ್ದರು. ಸದ್ಯ ಮೃತ ರೋಶನ್ ಪಿಂಟೋ ಅವರ ಅಂತ್ಯಕ್ರಿಯೆ ಸಕಲೇಶಪುರದಲ್ಲಿ ನೆರವೇರಿಸಲಾಗಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm