ಬ್ರೇಕಿಂಗ್ ನ್ಯೂಸ್
27-05-26 12:42 pm HK News Staffer ಕ್ರೈಂ
ಬೆಂಗಳೂರು, ಮೇ 27: ಮುಂಬೈನಲ್ಲಿ ರೇಡಿಯೊ ಜಾಕಿ ಆಗಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ನಗರದ ಮಾನ್ಯತಾ ಟೆಕ್ ಪಾರ್ಕ್ ಆವರಣದಲ್ಲಿರುವ ತಮ್ಮ ಫ್ಲ್ಯಾಟ್ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮುಂಬೈ ಮೂಲದ ಮನೀಷಾ ಪ್ರಸಾದ್ (48) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಘಟನೆಗೆ ಸಂಬಂಧಿಸಿ ಆಕೆಯ ಪ್ರಿಯಕರ ಹರ್ಷವರ್ಧನ್ ಸಿಂಗ್ ಬನ್ಸಾಲ್ ಎಂಬಾತನ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮನೀಷಾ ಪ್ರಸಾದ್ ಅವರು ಮುಂಬೈನಲ್ಲಿ ರೇಡಿಯೊ ಜಾಕಿಯಾಗಿದ್ದರು. ಕೌಟುಂಬಿಕ ಭಿನ್ನಾಭಿಪ್ರಾಯಗಳ ಹಿನ್ನೆಲೆಯಲ್ಲಿ 2024 ರಲ್ಲಿ ಅವರು ತಮ್ಮ ಪತಿಯಿಂದ ವಿಚ್ಛೇದನ ಪಡೆದಿದ್ದರು. ವಿಚ್ಛೇದನ ಬಳಿಕ ಮುಂಬೈನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಹಿಮಾಚಲ ಪ್ರದೇಶ ಮೂಲದ ಹರ್ಷವರ್ಧನ್ ಸಿಂಗ್ ಬನ್ಸಾಲ್ ಎಂಬಾತನ ಪರಿಚಯವಾಗಿ, ಇಬ್ಬರ ನಡುವೆ ಪ್ರೀತಿ ಬೆಳೆದಿತ್ತು. ನಂತರ ಇಬ್ಬರೂ ಲಿವ್-ಇನ್ ರಿಲೇಶನ್ಶಿಪ್ನಲ್ಲಿ ಇದ್ದರು ಎನ್ನಲಾಗಿದೆ.
ಸಹ ಜೀವನ ನಡೆಸುತ್ತಿದ್ದ ವೇಳೆ ಪ್ರಿಯಕರ ಹರ್ಷವರ್ಧನ್ ಸಿಂಗ್, ಮನೀಷಾ ಅವರಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇದರಿಂದ ಘಾಸಿಗೊಂಡ ಮನೀಷಾ ಆತನಿಂದ ದೂರವಿರಲು ನಿರ್ಧರಿಸಿ, ಕಳೆದ ಏಪ್ರಿಲ್ ತಿಂಗಳಲ್ಲಿ ಬೆಂಗಳೂರಿಗೆ ಬಂದಿದ್ದರು. ಮಾನ್ಯತಾ ಟೆಕ್ ಪಾರ್ಕಿನ ಅಪಾರ್ಟ್ಮೆಂಟ್ನಲ್ಲಿ ಹೊಸದಾಗಿ ಫ್ಲ್ಯಾಟ್ ಖರೀದಿಸಿ, ಒಂಟಿಯಾಗಿ ವಾಸಿಸುತ್ತಿದ್ದರು.
ಕಳೆದ ಕೆಲವು ದಿನಗಳಿಂದ ಮನೀಷಾ ಸಂಬಂಧಿಕರ ಫೋನ್ ಕರೆಗಳನ್ನೂ ಸ್ವೀಕರಿಸುತ್ತಿರಲಿಲ್ಲ. ಇದರಿಂದ ಆತಂಕಗೊಂಡ ಸಂಬಂಧಿಕರು ನಿನ್ನೆ ಬೆಂಗಳೂರಿನ ಫ್ಲ್ಯಾಟ್ಗೆ ಬಂದು ಪರಿಶೀಲಿಸಿದಾಗ ಮನೀಷಾ ನೇಣು ಬಿಗಿದು ಆತ್ಮಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ. ತಕ್ಷಣವೇ ಅಮೃತಹಳ್ಳಿ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.
ಮೂರು ಪುಟಗಳ ಡೆತ್ನೋಟ್
ಆತ್ಮಹತ್ಯೆಗೂ ಮುನ್ನ ಮನೀಷಾ ಅವರು ಮೂರು ಪುಟಗಳ ಸುದೀರ್ಘ ಡೆತ್ ನೋಟ್ ಬರೆದಿಟ್ಟಿದ್ದಾರೆ. ಅದರಲ್ಲಿ, “ನನ್ನ ಸಾವಿಗೆ ಹಿಮಾಚಲ ಪ್ರದೇಶದ ಹರ್ಷವರ್ಧನ್ ಸಿಂಗ್ ಬನ್ಸಾಲ್ ನೀಡಿದ ಕಿರುಕುಳವೇ ನೇರ ಕಾರಣ” ಎಂದು ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಅಮೃತಹಳ್ಳಿ ಪೊಲೀಸರು ಮರಣಪತ್ರ ಹಾಗೂ ಮನೀಷಾ ಅವರ ಮೊಬೈಲ್ ಫೋನ್ ವಶಪಡಿಸಿದ್ದಾರೆ. ಆರೋಪಿ ಹರ್ಷವರ್ಧನ್ ಸಿಂಗ್ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಮೊಕದ್ದಮೆ ದಾಖಲಾಗಿದ್ದು, ಪೊಲೀಸರು ಆತನಿಗಾಗಿ ಶೋಧ ಕೈಗೊಂಡಿದ್ದಾರೆ.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm