ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡೆದ ಕಾರು ; ರಸ್ತೆಗೆ ಎಸೆಯಲ್ಪಟ್ಟ ಸಿಬ್ಬಂದಿಗಳು, ಯಕ್ಷಗಾನ ಕಲಾವಿದ ಧೀರಜ್ ರೈ ಮೇಲೆ ಕೇಸು

28-05-26 10:43 am       HK News Staffer   ಕ್ರೈಂ

ಕರ್ತವ್ಯ ನಿರ್ವಹಿಸುತ್ತಿದ್ದ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗೆ ಅತಿವೇಗದ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ರಸ್ತೆಗೆ ಎಸೆಯಲ್ಪಟ್ಟು ಓರ್ವ ಪೊಲೀಸ್ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳೂರಿನ ಮಣ್ಣಗುಡ್ಡದಲ್ಲಿ ಕಳೆದ ರಾತ್ರಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯಕ್ಷಗಾನ ಕಲಾವಿದ ಧೀರಜ್ ರೈ ವಿರುದ್ಧ ಪ್ರಕರಣ ದಾಖಲಾಗಿದೆ.

ಮಂಗಳೂರು, ಮೇ 28: ಕರ್ತವ್ಯ ನಿರ್ವಹಿಸುತ್ತಿದ್ದ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗೆ ಅತಿವೇಗದ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ರಸ್ತೆಗೆ ಎಸೆಯಲ್ಪಟ್ಟು ಓರ್ವ ಪೊಲೀಸ್ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳೂರಿನ ಮಣ್ಣಗುಡ್ಡದಲ್ಲಿ ಕಳೆದ ರಾತ್ರಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯಕ್ಷಗಾನ ಕಲಾವಿದ ಧೀರಜ್ ರೈ ವಿರುದ್ಧ ಪ್ರಕರಣ ದಾಖಲಾಗಿದೆ.

ಗಾಯಗೊಂಡ ಪೊಲೀಸ್ ಸಿಬ್ಬಂದಿಯನ್ನು ವಿಠಲ್ ಗೌಡ ಎಂದು ಗುರುತಿಸಲಾಗಿದ್ದು, ಮತ್ತೋರ್ವ ಸಿಬ್ಬಂದಿ ಕುಮಾರ್ ಅವರಿಗೂ ಗಾಯಗಳಾಗಿವೆ. ಇಬ್ಬರಿಗೂ ಚಿಕಿತ್ಸೆ ನೀಡಲಾಗುತ್ತಿದೆ.

ಮಾಹಿತಿಯ ಪ್ರಕಾರ, ಮಣ್ಣಗುಡ್ಡದಲ್ಲಿ ಇರಡು ಬೈಕ್‌ಗಳ ನಡುವೆ ಸಂಭವಿಸಿದ್ದ ಅಪಘಾತದ ತನಿಖೆಗಾಗಿ ಸ್ಥಳಕ್ಕೆ ತೆರಳಿದ್ದರು. ತನಿಖೆ ಪೂರ್ಣಗೊಳಿಸಿದ ಬಳಿಕ ಪೇದೆ ವಿಠಲ್ ಗೌಡ ಠಾಣೆಗೆ ತೆರಳಲು ಬೈಕ್ ಏರುತ್ತಿದ್ದ ವೇಳೆ ಕಾರು ಬಂದು ಡಿಕ್ಕಿ ಹೊಡೆದಿದೆ. ಘಟನೆಯ ದೃಶ್ಯ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಅಪಘಾತದ ತೀವ್ರತೆ ಸ್ಪಷ್ಟವಾಗಿ ಗೋಚರಿಸಿದೆ.

ಕಾರು ಚಾಲನೆ ಮಾಡುತ್ತಿದ್ದ ಯಕ್ಷಗಾನ ಕಲಾವಿದ ಧೀರಜ್ ರೈ ಮದ್ಯಪಾನ ಮಾಡಿ ಕಾರು ಚಲಾಯಿಸುತ್ತಿದ್ದರು  ಎಂಬ ಆರೋಪವೂ ಕೇಳಿಬಂದಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.