ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ್ಲಿ ಗೋಹತ್ಯೆಗೈದು ಮಾಂಸ ; ಬಂಟ್ವಾಳದಲ್ಲಿ ಇಬ್ಬರ ಬಂಧನ, ಆರು ಗೋವುಗಳ ರಕ್ಷಣೆ

28-05-26 09:44 pm       HK News Desk   ಕ್ರೈಂ

ಅಕ್ರಮ ಜಾನುವಾರು ವಧೆ ನಡೆಯುತ್ತಿರುವ ಬಗ್ಗೆ ಬಂದ ಮಾಹಿತಿ ಮೇರೆಗೆ, ಮೇ 27ರ ರಾತ್ರಿ ಬಂಟ್ವಾಳ ನಗರ ಪೊಲೀಸ್ ಠಾಣಾ ಉಪ ನಿರೀಕ್ಷಕ ಸಂದೀಪ್‌ ಕುಮಾರ್‌ ಶೆಟ್ಟಿ ನೇತೃತ್ವದಲ್ಲಿ ಪೊಲೀಸರು ಬಂಟ್ವಾಳ ಸಜಿಪಮೂಡ ಗ್ರಾಮದ ಪಂಜಾಜೆ ಎಂಬಲ್ಲಿಗೆ ದಾಳಿ ನಡೆಸಿದ್ದು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಮಂಗಳೂರು, ಮೇ 28: ಅಕ್ರಮ ಜಾನುವಾರು ವಧೆ ನಡೆಯುತ್ತಿರುವ ಬಗ್ಗೆ ಬಂದ ಮಾಹಿತಿ ಮೇರೆಗೆ, ಮೇ 27ರ ರಾತ್ರಿ ಬಂಟ್ವಾಳ ನಗರ ಪೊಲೀಸ್ ಠಾಣಾ ಉಪ ನಿರೀಕ್ಷಕ ಸಂದೀಪ್‌ ಕುಮಾರ್‌ ಶೆಟ್ಟಿ ನೇತೃತ್ವದಲ್ಲಿ ಪೊಲೀಸರು ಬಂಟ್ವಾಳ ಸಜಿಪಮೂಡ ಗ್ರಾಮದ ಪಂಜಾಜೆ ಎಂಬಲ್ಲಿಗೆ ದಾಳಿ ನಡೆಸಿದ್ದು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಪೊಲೀಸರು ತೆರಳಿದಾಗ ಮನೆಯೊಂದರ ಹಿಂಬದಿ ಕೊಟ್ಟಿಗೆಯಲ್ಲಿ ಇಬ್ಬರು ಮಾಂಸ ಕತ್ತರಿಸುತ್ತಿರುವುದು ಕಂಡುಬಂದಿರುತ್ತದೆ. ಈ ವೇಳೆ ಅಲ್ಲಿದ್ದ ಇಬ್ಬರನ್ನು ಹಿಡಿದು ವಿಚಾರಿಸಿದಾಗ, ಬಂಟ್ವಾಳ ಸಜಿಪಮೂಡ ನಿವಾಸಿ ಮುಸ್ತಾಪ (33) ಹಾಗೂ ಬಂಟ್ವಾಳ ಬಿ ಕಸಬಾ ನಿವಾಸಿ ಮಹಮ್ಮದ್‌ ಸಾದೀಕ್‌ (30) ಎಂಬುದಾಗಿ ತಿಳಿದುಬಂದಿದೆ. ವಿಚಾರಣೆ ವೇಳೆ ಆರೋಪಿಗಳು ಪರವಾನಿಗೆ ಹೊಂದದೇ ಅಕ್ರಮವಾಗಿ ಕೃತ್ಯ ನಡೆಸುತ್ತಿರುವುದು ಧೃಢಪಟ್ಟಿದೆ. 

ಸ್ಥಳದಲ್ಲಿ ಒಂದು ಜಾನುವಾರನ್ನು ವಧೆ ಮಾಡಿ ಕತ್ತರಿಸಲಾದ ಮಾಂಸ, 06 ಜಾನುವಾರುಗಳು, ಒಂದು ಕಾರು ಹಾಗೂ ಕೃತ್ಯಕ್ಕೆ ಬಳಸಿದ ಸಾಮಗ್ರಿಗಳು ಪತ್ತೆಯಾಗಿದೆ. ಮುಂದಿನ ಕಾನೂನು ಕ್ರಮಕ್ಕಾಗಿ ಆರೋಪಿಗಳನ್ನು ಹಾಗೂ ಜಾನುವಾರು ಮತ್ತು ಇತರೆ ಸೊತ್ತುಗಳೊಂದಿಗೆ ವಶಕ್ಕೆ ಪಡೆದಿದ್ದು, ಬಂಟ್ವಾಳ ನಗರ ಠಾಣೆಯಲ್ಲಿ ಅ.ಕ್ರ 68/2026, ಕಲಂ: 4,7,12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020 ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.