ಬ್ರೇಕಿಂಗ್ ನ್ಯೂಸ್
29-05-26 10:21 pm HK News Staffer ಕ್ರೈಂ
ವಿಜಯಪುರ, ಮೇ 29: ಭೀಮಾತೀರ ಪ್ರದೇಶವನ್ನು ಬೆಚ್ಚಿಬೀಳಿಸುವಂತಹ ಭೀಕರ ಸಾಮೂಹಿಕ ಹತ್ಯೆ ಪ್ರಕರಣ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ನಡೆದಿದೆ. ಜಮೀನು ವಿವಾದದ ಹಿನ್ನೆಲೆ 15ರಿಂದ 20 ಮಂದಿಯ ಗುಂಪೊಂದು ಕುಟುಂಬದ ಸದಸ್ಯರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಬಳಿಕ ಗುಂಡಿಕ್ಕಿ ಹತ್ಯೆ ಮಾಡಿರುವ ಆರೋಪ ಕೇಳಿಬಂದಿದೆ. ಘಟನೆಯಲ್ಲಿ ಒಟ್ಟು 6 ಮಂದಿ ಸಾವನ್ನಪ್ಪಿದ್ದಾರೆ.
ಮೃತರನ್ನು ಚಂದು ನಿರಾಳೆ, ದುಂಡಪ್ಪ ನಿರಾಳೆ, ಶಿವಪುತ್ರ ನಿರಾಳೆ, ರಾಹುಲ್ ನಿರಾಳೆ, ಸಮರ್ಥ ನಿರಾಳೆ ಹಾಗೂ ಶಬ್ಬೀರ್ ನದಾಫ್ ಎಂದು ಗುರುತಿಸಲಾಗಿದೆ.
ಮಾಹಿತಿಯ ಪ್ರಕಾರ, ಗೋವಿಂದಪುರ ಗ್ರಾಮದ ವಿವಾದಿತ 24 ಎಕರೆ ಜಮೀನನ್ನು ನಿರಾಳೆ ಕುಟುಂಬ ಆರು ತಿಂಗಳ ಹಿಂದೆ ಖರೀದಿಸಿತ್ತು. ಈ ಜಮೀನು ಖರೀದಿಸಬಾರದು ಎಂದು ಗ್ರಾಮದ ಅಪ್ಪುಗೌಡ ಪಾಟೀಲ್ ಹಾಗೂ ಇತರರು ಎಚ್ಚರಿಕೆ ನೀಡಿದ್ದರೆನ್ನಲಾಗಿದೆ. ಆದರೂ ಜಮೀನು ಖರೀದಿ ಮಾಡಿದ್ದ ನಿರಾಳೆ ಕುಟುಂಬದವರು ಟ್ರ್ಯಾಕ್ಟರ್ ಮತ್ತು ಜೆಸಿಬಿ ಬಳಸಿ ಭೂಮಿಯನ್ನು ಕೃಷಿಗೆ ಸಜ್ಜುಗೊಳಿಸುವ ಕಾರ್ಯದಲ್ಲಿ ತೊಡಗಿದ್ದರು. ಈ ವೇಳೆ ಏಕಾಏಕಿ ದಾಳಿ ನಡೆಸಿದ ದುಷ್ಕರ್ಮಿಗಳು ಹೊಲದಲ್ಲೇ ಕುಟುಂಬದವರನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಬಳಿಕ ಗುಂಡಿಕ್ಕಿ ಕೊಲೆ ಮಾಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಈ ಜಮೀನು ವಿವಾದದ ಸಂಬಂಧ ಕೆಲ ದಿನಗಳ ಹಿಂದಷ್ಟೇ ಅಪ್ಪುಗೌಡ ಪಾಟೀಲ್ ಹಾಗೂ ರೇವಣಸಿದ್ದಪ್ಪ ನಿರಾಳೆ ಕುಟುಂಬಗಳ ನಡುವೆ ರಾಜಿ ಪಂಚಾಯತಿ ನಡೆದಿತ್ತು. ಆದರೆ ಕಲಹ ಶಮನವಾಗದೆ ಅಂತಿಮವಾಗಿ ರಕ್ತಪಾತಕ್ಕೆ ಕಾರಣವಾಗಿದೆ ಎನ್ನಲಾಗುತ್ತಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm