ಬ್ರೇಕಿಂಗ್ ನ್ಯೂಸ್
06-01-21 01:01 pm Headline Karnataka News Network ಕ್ರೈಂ
ಕಾಸರಗೋಡು, ಜ.6 : ತಾಯಿಯೇ ತನ್ನ ಒಂದೂವರೆ ವರ್ಷದ ಮಗುವನ್ನು ಬಾವಿಗೆಸೆದು ಕೊಲೆಗೈದ ಪ್ರಕರಣ ಬದಿಯಡ್ಕ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.
ಬದಿಯಡ್ಕ ಠಾಣೆ ಪೊಲೀಸರು ಪ್ರಕರಣ ಸಂಬಂಧಿಸಿ ಪೆರ್ಲತ್ತಡ್ಕ ನಿವಾಸಿ ಶಾರದಾ (25) ಮಬ ಮಹಿಳೆಯನ್ನು ಬಂಧಿಸಿದ್ದಾರೆ.
ಡಿ.4ರಂದು ಈಕೆಯ ಪುತ್ರ, ಒಂದೂವರೆ ವರ್ಷದ ಸ್ವಸ್ತಿಕ್ ಎಂಬ ಮಗುವಿನ ಮೃತದೇಹ ಮನೆ ಸಮೀಪದ ಬಾವಿಯಲ್ಲಿ ಪತ್ತೆಯಾಗಿತ್ತು. ಪತಿ ಬಾಬು ಕೂಲಿ ಕೆಲಸಕ್ಕೆ ತೆರಳಿದ್ದ ಸಂದರ್ಭ ಘಟನೆ ನಡೆದಿತ್ತು. ಮಗು ನಾಪತ್ತೆಯಾದುದರಿಂದ ಪರಿಸರವಾಸಿಗಳು ಶೋಧ ನಡೆಸಿದಾಗ ಮನೆಯ ಅಲ್ಪ ದೂರದ ಪಾಳು ಬಾವಿಯಲ್ಲಿ ಮೃತದೇಹ ಪತ್ತೆಯಾಗಿತ್ತು.
ಮೃತದೇಹವನ್ನು ಕಣ್ಣೂರು ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ್ದು, ಮಗುವನ್ನು ಬಾವಿಗೆಸೆದು ಕೊಲೆಗೈದಿರುವ ಸಂಶಯ ಬಂದಿತ್ತು. ಈ ವೇಳೆ, ಪೊಲೀಸರು ಪುತ್ತೂರಿನಲ್ಲಿರುವ ತಾಯಿ ಮನೆಗೆ ತೆರಳಿದ್ದ ಶಾರದಾಳನ್ನ ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಪೊಲೀಸರ ಪ್ರಶ್ನೆಗಳಿಗೆ ತಡವರಿಸಿದ ಶಾರದಾ ಕೊನೆಗೆ ತಾನೇ ಮಗುವನ್ನು ಬಾವಿಗೆಸೆದು ಕೊಲೆಗೈದಿರುವುದಾಗಿ ಒಪ್ಪಿಕೊಂಡಿದ್ದಾಳೆ. ಕೌಟುಂಬಿಕ ಕಲಹದ ಕಾರಣ ಮಗುವನ್ನೇ ಕೊಲೆ ಮಾಡಿದ್ದಾಳೆ ಎನ್ನುವ ವಿಚಾರ ಬಯಲಿಗೆ ಬಂದಿದೆ.
ಆರಂಭದಲ್ಲಿ ಮಗು ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟಿರುವುದಾಗಿ ಸಂಶಯ ಪಡಲಾಗಿತ್ತು. ಮರಣೋತ್ತರ ಪರೀಕ್ಷೆಯಿಂದ ಕೊಲೆ ಎಂಬ ಬಗ್ಗೆ ಸಂಶಯ ಬಂದಿತ್ತು. ಶಾರದಾ ಮಾನಸಿಕ ಅಸ್ವಸ್ಥಳಂತೆ ವರ್ತಿಸುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಆರೋಪಿಗೆ ಕಾಸರಗೋಡು ನ್ಯಾಯಾಲಯ , 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
connection with the recovery of the body of an 18-month-old baby from a well, Badiadka police have arrested the mother of the baby, who happens to be the accused.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 02:48 pm
HK News Staffer
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
01-08-26 04:27 pm
HK News Staffer
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm