ಬ್ರೇಕಿಂಗ್ ನ್ಯೂಸ್
06-06-26 01:18 pm HK News Staffer ಕ್ರೈಂ
ಮಂಗಳೂರು, ಜೂನ್ 6: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ನಗರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು 164 ಗ್ರಾಂ ಎಂಡಿಎಂಎ ಮಾದಕ ವಸ್ತು ವಶಪಡಿಸಿಕೊಳ್ಳಲಾಗಿದ್ದು, ಇದರ ಮೌಲ್ಯ ಸುಮಾರು 16.40 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ಹೊಯಿಗೆ ಬಜಾರ್ನಲ್ಲಿ ದಾಳಿ:
ಬೆಂಗಳೂರು ನಗರದಿಂದ ಎಂಡಿಎಂಎ ಖರೀದಿಸಿ ಮಂಗಳೂರಿಗೆ ತಂದು ಹೊಯಿಗೆ ಬಜಾರ್ ಪರಿಸರದಲ್ಲಿರುವ ಮನೆಯಿಂದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಜೂನ್ 5ರಂದು ದಾಳಿ ನಡೆಸಿ ಪ್ರಣಾಮ್ ಕೋಟ್ಯಾನ್ (30) ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿಯಿಂದ 104 ಗ್ರಾಂ ಎಂಡಿಎಂಎ, ಮೊಬೈಲ್ ಫೋನ್, ಜಿಪ್ಲಾಕ್ ಕವರ್ ಹಾಗೂ ಡಿಜಿಟಲ್ ತೂಕಮಾಪನ ಯಂತ್ರವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಮಾದಕ ವಸ್ತುವಿನ ಮೌಲ್ಯ ಸುಮಾರು 10.40 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಈ ಸಂಬಂಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಧಿತ ಪ್ರಣಾಮ್ ಕೋಟ್ಯಾನ್ ವಿರುದ್ಧ ಈ ಹಿಂದೆ ಹಲ್ಲೆ, ಬೆದರಿಕೆ, ಗಾಂಜಾ ಸೇವನೆ ಹಾಗೂ ಮಾರಾಟ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿವೆ. ಮಂಗಳೂರು ದಕ್ಷಿಣ, ಉತ್ತರ ಪೊಲೀಸ್ ಠಾಣೆ ಹಾಗೂ ಅಬಕಾರಿ ಇಲಾಖೆಯಲ್ಲಿ ಆತನ ವಿರುದ್ಧ ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ.
ಪದವಿನಂಗಡಿಯಲ್ಲಿ ಮತ್ತೊಂದು ಕಾರ್ಯಾಚರಣೆ
ಇನ್ನೊಂದು ಪ್ರಕರಣದಲ್ಲಿ ಪದವಿನಂಗಡಿ ಪರಿಸರದಲ್ಲಿರುವ ಮನೆಯಿಂದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಬಗ್ಗೆ ದೊರೆತ ಮಾಹಿತಿಯ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಧನರಾಜ್ ಪೂಜಾರಿ ಅಲಿಯಾಸ್ ಧನು ವಳಚಿಲ್ (33) ಎಂಬಾತನನ್ನು ಬಂಧಿಸಿದ್ದಾರೆ.
ಆರೋಪಿಯಿಂದ 60 ಗ್ರಾಂ ಎಂಡಿಎಂಎ, ಜಿಪ್ಲಾಕ್ ಕವರ್ಗಳು, ಮೊಬೈಲ್ ಫೋನ್ ಹಾಗೂ ಡಿಜಿಟಲ್ ತೂಕಮಾಪನ ಯಂತ್ರವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಮಾದಕ ವಸ್ತುವಿನ ಮೌಲ್ಯ ಸುಮಾರು 6 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಈ ಕುರಿತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಲೆ, ಕೊಲೆಯತ್ನ ಸೇರಿ 12ಕ್ಕೂ ಹೆಚ್ಚು ಪ್ರಕರಣಗಳು
ಧನರಾಜ್ ಪೂಜಾರಿ ವಿರುದ್ಧ ಮಂಗಳೂರು ದಕ್ಷಿಣ, ಉತ್ತರ, ಸುರತ್ಕಲ್, ಬರ್ಕೆ, ಕಾವೂರು, ಕಂಕನಾಡಿ ನಗರ ಹಾಗೂ ಬಂಟ್ವಾಳ ಠಾಣೆಗಳಲ್ಲಿ ಕೊಲೆ, ಕೊಲೆಯತ್ನ, ಹಲ್ಲೆ ಹಾಗೂ ಬೆದರಿಕೆ ಸೇರಿದಂತೆ ಸುಮಾರು 12 ಪ್ರಕರಣಗಳು ದಾಖಲಾಗಿವೆ. 2016ರಲ್ಲಿ ದಾಖಲಾಗಿದ್ದ ಗಂಭೀರ ಹಲ್ಲೆ ಪ್ರಕರಣದಲ್ಲಿ ಆತನಿಗೆ 3 ವರ್ಷಗಳ ಜೈಲು ಶಿಕ್ಷೆ ಕೂಡ ವಿಧಿಸಲಾಗಿತ್ತು.
ಇನ್ನಷ್ಟು ಆರೋಪಿಗಳಿಗಾಗಿ ಶೋಧ:
ಈ ಡ್ರಗ್ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಅವರ ಪತ್ತೆಗೆ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ. ಕಾರ್ಯಾಚರಣೆಯನ್ನು ಮಂಗಳೂರು ನಗರ ಸಿಸಿಬಿ ಘಟಕದ ಅಧಿಕಾರಿಗಳು ಮತ್ತು ಸಿಬ್ಬಂದಿ ಯಶಸ್ವಿಯಾಗಿ ನಡೆಸಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm