ಬ್ರೇಕಿಂಗ್ ನ್ಯೂಸ್
07-06-26 03:08 pm HK News Desk ಕ್ರೈಂ
ಮಂಗಳೂರು, ಜೂನ್ 6: ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಬ್ಯಾಂಕ್ ನಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿಯನ್ನು ಉಳ್ಳಾಲ ಪೊಲೀಸರು ಕೊನೆಗೂ ಬಂಧಿಸಿದ್ದಾರೆ.
ಉತ್ತರ ಪ್ರದೇಶ ಮೂಲದ ಧರ್ಮ ಬೀರ್ ಬೀರೇಂದ್ರ ಸಿಂಗ್ @ ಧರ್ಮವೀರ್ ಸಿಂಗ್ ಎಂಬಾತ ಬಂಧಿತ. ಆರೋಪಿಗಳ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಲಾಗಿತ್ತು. 2025ರ ಜನವರಿ 17ರಂದು ಕೆ.ಸಿ ರೋಡ್ ನಲ್ಲಿರುವ ಕೋಟೆಕಾರು ವ್ಯವಸಾಯ ಸಹಕಾರಿ ಬ್ಯಾಂಕಿನಲ್ಲಿ ಹಾಡಹಗಲೇ ದುಷ್ಕರ್ಮಿಗಳು ನುಗ್ಗಿ 20 ಕೇಜಿ ಚಿನ್ನಾಭರಣ ದರೋಡೆಗೈದಿದ್ದರು. ಮುಂಬೈ ಮೂಲದ ಗ್ಯಾಂಗ್ ದರೋಡೆ ನಡೆಸಿದ್ದು ತನಿಖೆಯಲ್ಲಿ ಪತ್ತೆಯಾಗಿತ್ತು. ಹತ್ತಕ್ಕೂ ಹೆಚ್ಚು ಮಂದಿ ಆರೋಪಿಗಳನ್ನು ಬಂಧಿಸಿದ್ದು ಇದೀಗ ಮತ್ತೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಮೇ 11ರಂದು ಮುಂಬೈಯ ಪನ್ವೇಲ್ ರೈಲ್ವೆ ಸ್ಟೇಷನ್ ಬಳಿ ಆರೋಪಿಯನ್ನು ವಶಕ್ಕೆ ಪಡೆದಿದ್ದು ಮರುದಿನ ಉಳ್ಳಾಲ ಪೊಲಿಸ್ ಠಾಣೆಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
34 ವರ್ಷದ ಧರ್ಮ ಬೀರ್ ಬೀರೇಂದ್ರ ಸಿಂಗ್ ತನ್ನ ಹೆಸರನ್ನು ಧರ್ಮವೀರ್ ಸಿಂಗ್, ಮನೋಜ್ ಜೀತ್ ಲಾಲ್ ವರ್ಮ, ಧರ್ಮ, ಮಾಸ್ಟರ್, ಕಳ್ಳು ಎಂದು ವಿವಿಧ ಹೆಸರುಗಳಲ್ಲಿ ಗುರುತಿಸಿಕೊಂಡಿದ್ದ. ಸದ್ರಿ ಆರೋಪಿಯನ್ನು ಕೋರ್ಟಿಗೆ ಹಾಜರುಪಡಿಸಿ 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿತ್ತು. ಮುಂದಿನ ತನಿಖೆಯನ್ನು ನಡೆಸಿ ವಾಪಸ್ ಮೇ 22 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿ, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿರುತ್ತದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm