ಬ್ರೇಕಿಂಗ್ ನ್ಯೂಸ್
08-06-26 03:14 pm HK News Staffer ಕ್ರೈಂ
ಬೆಂಗಳೂರು, ಜೂನ್ 8: ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ 5 ಕೋಟಿಗೂ ಹೆಚ್ಚು ಹಣ ಪಡೆದು ವಂಚಿಸಿದ ಆರೋಪದಲ್ಲಿ ತಂದೆ -ಮಗಳನ್ನು ಬೆಂಗಳೂರು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.
ಆರೋಪಿಗಳು ನಕಲಿ ತರಬೇತಿ ಕೇಂದ್ರಗಳನ್ನು ಸ್ಥಾಪಿಸಿದ್ದರಲ್ಲದೆ, ಟ್ರೇನಿಂಗ್ ಹೆಸರಲ್ಲಿ ಶುಲ್ಕ ಪಡೆಯುತ್ತಿದ್ದರು. ಕೆಲವರಿಗೆ ಆಕಾಂಕ್ಷಿಗಳ ವಿಶ್ವಾಸ ಗಳಿಸಲು ನಾಲ್ಕು ತಿಂಗಳ ಸಂಬಳವನ್ನು ಸಹ ನೀಡಿದ್ದರು ಎಂದು ಆರೋಪಿಸಲಾಗಿದೆ. ಆರೋಪಿಗಳನ್ನು ಎಂಬಿಎ ಪದವೀಧರೆಯಾದ ಶಂಶಾದ್ ಬೇಗಂ ಮತ್ತು ಆಕೆಯ ತಂದೆ ಎಂಎ ಮನ್ಸೂರ್ ಅಹ್ಮದ್ ಎಂದು ಗುರುತಿಸಲಾಗಿದೆ.
ಸಂಗಮೇಶ್ ರಾಚಯ್ಯ ವಸ್ತ್ರದ್ ಎಂಬವರು 2025ರ ನವೆಂಬರ್ 17ರಂದು ಸಿಸಿಬಿಗೆ ದೂರು ದಾಖಲಿಸಿದ್ದು, ತಂದೆ- ಮಗಳು ಹಿರಿಯ ಸರ್ಕಾರಿ ಅಧಿಕಾರಿಗಳು ಮತ್ತು ರಾಜಕೀಯ ನಾಯಕರೊಂದಿಗೆ ನಿಕಟ ಸಂಪರ್ಕ ಹೊಂದಿದ್ದಾರೆಂದು ಹೇಳಿಕೊಂಡಿದ್ದಾರೆ ಎಂದಿದ್ದಾರೆ. ನಿರುದ್ಯೋಗಿ ಮತ್ತು ವಿದ್ಯಾವಂತ ಯುವಕರಿಗೆ ತಮ್ಮ ಪ್ರಭಾವದ ಮೂಲಕ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡುತ್ತಿದ್ದರು. ರೈಲ್ವೇ, ಆದಾಯ ತೆರಿಗೆ, ನೀರಾವರಿ, ಆರೋಗ್ಯ ಮತ್ತು ಸಮಾಜ ಕಲ್ಯಾಣ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ನೇಮಕಾತಿಗಳ ಭರವಸೆ ನೀಡಿದ್ದರು. ಆದರೆ, ಹಣ ಸಂಗ್ರಹಿಸಿ ಯುವಕರಿಗೆ ವಂಚನೆ ಮಾಡಿದ್ದಾರೆ. ಉತ್ತರ ಕರ್ನಾಟಕದ 40ಕ್ಕೂ ಹೆಚ್ಚು ಉದ್ಯೋಗ ಆಕಾಂಕ್ಷಿಗಳಿಂದ ₹5.3 ಕೋಟಿ ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. 2023 ಮತ್ತು 2025ರ ನಡುವೆ ನಡೆದಿದೆ ಎನ್ನಲಾದ ಹಣಕಾಸಿನ ವಹಿವಾಟುಗಳನ್ನು ಸಿಸಿಬಿ ಪೊಲೀಸರು ಪರಿಶೀಲಿಸಿದ್ದಾರೆ.
ವಿಜಯಪುರದಲ ಮೂಲದ ಒಬ್ಬರಿಗೆ ಮಾತ್ರ 2.5 ಕೋಟಿಗೂ ಹೆಚ್ಚು ವಂಚನೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಆರೋಪಿಗಳು ನಕಲಿ ನೇಮಕಾತಿ ಪತ್ರಗಳನ್ನು ನೀಡಿ, ಬೆಂಗಳೂರು, ಮುಂಬೈ ಮತ್ತು ಕೋಲ್ಕತ್ತಾದಲ್ಲಿ ನಕಲಿ ತರಬೇತಿ ಕೇಂದ್ರಗಳನ್ನು ಸ್ಥಾಪಿಸಿದ್ದರು ಎಂದು ತಿಳಿದುಬಂದಿದೆ. ಪ್ರತಿಯೊಬ್ಬರಿಂದ 5 ಲಕ್ಷದಿಂದ ರೂ. 10 ಲಕ್ಷ ವರೆಗೆ ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ.
ತನಿಖೆಯ ನಂತರ, ಪೊಲೀಸರು ಜೂನ್ 4 ರಂದು ಇಬ್ಬರನ್ನು ಬಂಧಿಸಿದ್ದು ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ವಂಚನೆಯಲ್ಲಿ ಭಾಗಿಯಾಗಿರಬಹುದಾದ ಇತರ ಕುಟುಂಬ ಸದಸ್ಯರು ಮತ್ತು ಸಹಚರರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
08-06-26 12:37 pm
HK News Staffer
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
ಬೆಂಗಳೂರು ಖಾತೆಗಾಗಿ ರಾಮಲಿಂಗಾರೆಡ್ಡಿ ಬಂಡಾಯ: ಮನವೊಲ...
05-06-26 06:19 pm
ರಾಮಲಿಂಗಾ ರೆಡ್ಡಿ ಕಚೇರಿ ಎದುರಲ್ಲಿ ಪ್ರತಿಭಟನೆ ; ಕಾ...
05-06-26 05:23 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
08-06-26 09:21 pm
HK News Staffer
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
Apex Capital Fraud Investment, Mangalore: ಬಿಜ...
07-06-26 01:57 pm
ಮುರಿನಕಟ್ಟೆ ಧ್ವಂಸ ಪ್ರಕರಣಕ್ಕೆ ಮತ್ತೆ ಕಾವು ; ಭಟ್ಕ...
05-06-26 01:25 pm
08-06-26 11:10 pm
HK News Desk
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm
ರಾಜ್ಯ- ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಉದ್ಯೋಗ ಕೊಡಿ...
08-06-26 03:14 pm
ಪಬ್ಜಿ ಚಟಕ್ಕೆ ಬಿದ್ದು ಅಪ್ಪ - ಅಕ್ಕನನ್ನ ಚಟ್ಟಕ್ಕೆ...
08-06-26 02:20 pm