ಬ್ರೇಕಿಂಗ್ ನ್ಯೂಸ್
08-06-26 04:42 pm HK News Staffer ಕ್ರೈಂ
ಪುತ್ತೂರು, ಜೂನ್ 8: ದಕ್ಷಿಣ ಕನ್ನಡ ಜಿಲ್ಲೆಯ ಕೊಕ್ಕಡ ಗ್ರಾಮದಲ್ಲಿ ಹೃದಯಾಘಾತಕ್ಕೊಳಗಾದ ಯುವ ವ್ಯಾಪಾರಿಯೊಬ್ಬರು ಸಮಯಕ್ಕೆ ಸರಿಯಾಗಿ ಆ್ಯಂಬುಲೆನ್ಸ್ ಸೌಲಭ್ಯ ದೊರೆಯದ ಕಾರಣ ಮೃತಪಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಗ್ರಾಮೀಣ ಆರೋಗ್ಯ ವ್ಯವಸ್ಥೆಯ ವೈಫಲ್ಯದ ಬಗ್ಗೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಕೊಕ್ಕಡ ಗ್ರಾಮದ ಕೊಪ್ಪಲಕೋಡಿ ನಿವಾಸಿ ಹಾಗೂ ಸೌತಡ್ಕ ಸಮೀಪ ಜ್ಯೂಸ್ ಸೆಂಟರ್ ನಡೆಸುತ್ತಿದ್ದ ಧನಂಜಯ್ (36) ಮೃತ ದುರ್ದೈವಿ. ಶುಕ್ರವಾರ ತಡರಾತ್ರಿ ಒಂದು ಗಂಟೆ ವೇಳೆಗೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ಕುಟುಂಬಸ್ಥರು ತಕ್ಷಣವೇ ಕೊಕ್ಕಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದರು. ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಲು ಸೂಚಿಸಿದ್ದರು. ಆದರೆ ತುರ್ತಾಗಿ 108 ಆ್ಯಂಬುಲೆನ್ಸ್ ಸೇವೆ ಲಭ್ಯವಾಗದೇ ಸಮಸ್ಯೆ ಉಂಟಾಗಿದೆ ಎನ್ನಲಾಗಿದೆ. ಪರಿಣಾಮ ಕುಟುಂಬಸ್ಥರು ಖಾಸಗಿ ಕಾರಿನಲ್ಲೇ ಧನಂಜಯ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಮುಂದಾಗಿದ್ದಾರೆ. ಆದರೆ ಮಾರ್ಗಮಧ್ಯೆ ತೀವ್ರ ಹೃದಯಾಘಾತ ಸಂಭವಿಸಿ, ಆಸ್ಪತ್ರೆ ತಲುಪುವ ಮುನ್ನವೇ ಅವರು ಕೊನೆಯುಸಿರೆಳೆದಿದ್ದಾರೆ.
‘108 ಇದ್ದರೂ ಸೇವೆ ಸಿಗಲಿಲ್ಲ’
ಘಟನೆ ಬಳಿಕ ಸ್ಥಳೀಯರು ಆರೋಗ್ಯ ಇಲಾಖೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಸಜ್ಜಿತ ಆರೋಗ್ಯ ಕೇಂದ್ರವಿದ್ದರೂ ತುರ್ತು ಸಂದರ್ಭಗಳಲ್ಲಿ ಆ್ಯಂಬುಲೆನ್ಸ್ ಸೌಲಭ್ಯ ದೊರೆಯದಿರುವುದು ಗ್ರಾಮೀಣ ಜನರ ಜೀವದೊಂದಿಗೆ ಆಟವಾಡಿದಂತಾಗಿದೆ ಎಂದು ಆರೋಪಿಸಿದ್ದಾರೆ.
ವೈದ್ಯಾಧಿಕಾರಿಯಿಂದ ಸ್ಪಷ್ಟನೆ
ಈ ಕುರಿತು ಪ್ರತಿಕ್ರಿಯಿಸಿರುವ ಕೊಕ್ಕಡ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ತುಷಾರ್, “108 ಆ್ಯಂಬುಲೆನ್ಸ್ಗೆ ಒಬ್ಬರೇ ಚಾಲಕರಿದ್ದು, ಅವರು ಹಗಲು ಕರ್ತವ್ಯ ಜತೆಗೆ ರಾತ್ರಿ ತುರ್ತು ಸೇವೆಯನ್ನೂ ನಿರ್ವಹಿಸುತ್ತಾರೆ. ಘಟನೆ ನಡೆದ ದಿನ ಚಾಲಕ ರಜೆಯಲ್ಲಿದ್ದ ಕಾರಣ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿಲ್ಲ” ಎಂದು ತಿಳಿಸಿದ್ದಾರೆ. ಧನಂಜಯ್ ಅವರ ಅಕಾಲಿಕ ನಿಧನದಿಂದ ಕುಟುಂಬಸ್ಥರು ಹಾಗೂ ಸ್ಥಳೀಯರು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ಅವರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಗ್ರಾಮೀಣ ಆರೋಗ್ಯ ಸೇವೆಗಳ ಬಗ್ಗೆ ಮತ್ತೆ ಪ್ರಶ್ನೆ
ಈ ಘಟನೆ ಗ್ರಾಮೀಣ ಭಾಗಗಳಲ್ಲಿ ತುರ್ತು ವೈದ್ಯಕೀಯ ಸೇವೆಗಳ ಲಭ್ಯತೆ, ಸಿಬ್ಬಂದಿ ಕೊರತೆ ಹಾಗೂ 108 ಆ್ಯಂಬುಲೆನ್ಸ್ ವ್ಯವಸ್ಥೆಯ ಕಾರ್ಯಕ್ಷಮತೆ ಕುರಿತು ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ. ತುರ್ತು ಸಂದರ್ಭಗಳಲ್ಲಿ ಒಂದೇ ಚಾಲಕನ ಮೇಲೆ ಅವಲಂಬಿತವಾಗಿರುವ ವ್ಯವಸ್ಥೆ ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ಕೇಳಿಬಂದಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am