ಬ್ರೇಕಿಂಗ್ ನ್ಯೂಸ್
06-01-21 05:24 pm Headline Karnataka News Network ಕ್ರೈಂ
ಲಕ್ನೋ, ಜ.6: ದೆಹಲಿಯ ನಿರ್ಭಯಾ ಪ್ರಕರಣದ ರೀತಿಯಲ್ಲೇ ಮತ್ತೊಂದು ಅತ್ಯಾಚಾರ, ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ದೇವಸ್ಥಾನಕ್ಕೆ ತೆರಳಿದ್ದ 50 ವರ್ಷದ ಮಹಿಳೆಯನ್ನು ಗ್ಯಾಂಗ್ ರೇಪ್ ಮಾಡಿ, ವಿಕೃತವಾಗಿ ಕೊಲೆಗೈದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಬದೌನ್ ಜಿಲ್ಲೆಯ ಉಘೈಟಿ ಗ್ರಾಮದಲ್ಲಿ ಜ.3ರಂದು ಘಟನೆ ನಡೆದಿದೆ. ಅಂಗನವಾಡಿ ಕಾರ್ಯಕರ್ತೆಯಾಗಿರುವ ಮಹಿಳೆ ಜ.3ರಂದು ಸಂಜೆ ದೇವಸ್ಥಾನಕ್ಕೆ ತೆರಳಿದ್ದರು. ಆದರೆ, ದೇಗುಲಕ್ಕೆ ತೆರಳಿದ್ದ ಮಹಿಳೆ ಬಂದಿರಲಿಲ್ಲ. ಮರುದಿನ ದೇವಸ್ಥಾನದ ಅರ್ಚಕ ಮತ್ತು ಇತರ ಇಬ್ಬರು ಸೇರಿ ಮಹಿಳೆಯ ಶವವನ್ನು ಆಕೆಯ ಮನೆಗೆ ತಂದು ಇರಿಸಿದ್ದಾರೆ. ಈ ಬಗ್ಗೆ ಮನೆಯವರು ಕೇಳಿದಾಗ, ಮಹಿಳೆ ದೇವಸ್ಥಾನದ ಬಳಿಯ ಬಾವಿಗೆ ಬಿದ್ದಿದ್ದಳು. ರಕ್ಷಣೆಗಾಗಿ ಬೊಬ್ಬೆ ಹಾಕಿದ್ದು ನಾವು ಹೋಗಿ ರಕ್ಷಿಸಲು ಪ್ರಯತ್ನಿಸಿದ್ದೆವು. ಆದರೆ ಸಾಧ್ಯವಾಗಲಿಲ್ಲ. ಮಹಿಳೆಯ ಮನೆಯವರ ನಂಬರ್ ಏನೂ ಇರಲಿಲ್ಲ. ಹೀಗಾಗಿ ಶವ ತಂದಿದ್ದೇವೆ ಎಂಬುದಾಗಿ ಅರ್ಚಕ ಹೇಳಿದ್ದಾಗಿ ಮಹಿಳೆಯ ಮಗ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ.
ಆದರೆ, ಮಹಿಳೆಯ ಮನೆಯವರು ಅರ್ಚಕ ಮತ್ತು ಇತರ ಇಬ್ಬರು ಸೇರಿ ಅತ್ಯಾಚಾರ ಮಾಡಿ ಕೊಲೆಗೈದಿದ್ದಾರೆಂದು ಆರೋಪಿಸಿದ್ದಾರೆ. ಇದಲ್ಲದೆ, ಈ ಬಗ್ಗೆ ಪೊಲೀಸರಿಗೆ ತಿಳಿಸಿದರೆ ಎಫ್ಐಆರ್ ಮಾಡುವುದಕ್ಕೆ ನಿರ್ಲಕ್ಷ್ಯ ತೋರಿದ್ದಾಗಿ ಹೇಳಿದ್ದಾರೆ. ಊರ ಗ್ರಾಮಸ್ಥರ ಆಕ್ರೋಶ ಕೇಳಿಬಂದ ಬಳಿಕ ಪೊಲೀಸರು ಶವವನ್ನು ಪೋಸ್ಟ್ ಮಾರ್ಟಂ ಮಾಡಲು ಕಳಿಸಿದ್ದಾರೆ. ಪೋಸ್ಟ್ ಮಾರ್ಟಂ ವರದಿಯಲ್ಲಿ ಮಹಿಳೆಯನ್ನು ಅತ್ಯಾಚಾರಗೈದು ಕೊಲೆಗೈದಿದ್ದಲ್ಲದೆ, ಗುಪ್ತಾಂಗ ಮತ್ತು ಕಾಲುಗಳಿಗೆ ಗಾಯಗೊಳಿಸಿರುವುದು ಕಂಡುಬಂದಿದೆ.
ಆಬಳಿಕ ಮಹಿಳೆಯ ಗ್ಯಾಂಗ್ ರೇಪ್ ಮತ್ತು ಕೊಲೆಗೈದಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಮೂವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕುಟುಂಬ ನೀಡಿದ ದೂರಿನ ಬಗ್ಗೆ ನಿರ್ಲಕ್ಷ್ಯ ವಹಿಸಿದ ಠಾಣಾಧಿಕಾರಿಯನ್ನು ಸಸ್ಪೆಂಡ್ ಮಾಡಲಾಗಿದೆ. ಪ್ರಕರಣ ಸಂಬಂಧಿಸಿ ಇಬ್ಬರನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಘಟನೆ ಬಗ್ಗೆ ಆಕ್ರೋಶ ಕೇಳಿಬರುತ್ತಿದ್ದಂತೆ, ಬಧೌನ್ ಜಿಲ್ಲೆಯ ಎಸ್ಪಿ ಸಂಕಲ್ಪ್ ಶರ್ಮಾ, ಘಟನೆಯ ತನಿಖೆಗೆ ನಾಲ್ಕು ಪೊಲೀಸ್ ತಂಡಗಳನ್ನು ರಚಿಸಿದ್ದಾರೆ.
A 50-year-old woman was allegedly gang-raped and brutalised in the Ughaiti area of Uttar Pradesh's Badaun district, police have said. The woman had gone to the temple but never returned. The post-mortem report of the deceased confirmed rape, injury in her private parts, and fracture in her legs.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm