ಬ್ರೇಕಿಂಗ್ ನ್ಯೂಸ್
06-01-21 05:24 pm Headline Karnataka News Network ಕ್ರೈಂ
ಲಕ್ನೋ, ಜ.6: ದೆಹಲಿಯ ನಿರ್ಭಯಾ ಪ್ರಕರಣದ ರೀತಿಯಲ್ಲೇ ಮತ್ತೊಂದು ಅತ್ಯಾಚಾರ, ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ದೇವಸ್ಥಾನಕ್ಕೆ ತೆರಳಿದ್ದ 50 ವರ್ಷದ ಮಹಿಳೆಯನ್ನು ಗ್ಯಾಂಗ್ ರೇಪ್ ಮಾಡಿ, ವಿಕೃತವಾಗಿ ಕೊಲೆಗೈದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಬದೌನ್ ಜಿಲ್ಲೆಯ ಉಘೈಟಿ ಗ್ರಾಮದಲ್ಲಿ ಜ.3ರಂದು ಘಟನೆ ನಡೆದಿದೆ. ಅಂಗನವಾಡಿ ಕಾರ್ಯಕರ್ತೆಯಾಗಿರುವ ಮಹಿಳೆ ಜ.3ರಂದು ಸಂಜೆ ದೇವಸ್ಥಾನಕ್ಕೆ ತೆರಳಿದ್ದರು. ಆದರೆ, ದೇಗುಲಕ್ಕೆ ತೆರಳಿದ್ದ ಮಹಿಳೆ ಬಂದಿರಲಿಲ್ಲ. ಮರುದಿನ ದೇವಸ್ಥಾನದ ಅರ್ಚಕ ಮತ್ತು ಇತರ ಇಬ್ಬರು ಸೇರಿ ಮಹಿಳೆಯ ಶವವನ್ನು ಆಕೆಯ ಮನೆಗೆ ತಂದು ಇರಿಸಿದ್ದಾರೆ. ಈ ಬಗ್ಗೆ ಮನೆಯವರು ಕೇಳಿದಾಗ, ಮಹಿಳೆ ದೇವಸ್ಥಾನದ ಬಳಿಯ ಬಾವಿಗೆ ಬಿದ್ದಿದ್ದಳು. ರಕ್ಷಣೆಗಾಗಿ ಬೊಬ್ಬೆ ಹಾಕಿದ್ದು ನಾವು ಹೋಗಿ ರಕ್ಷಿಸಲು ಪ್ರಯತ್ನಿಸಿದ್ದೆವು. ಆದರೆ ಸಾಧ್ಯವಾಗಲಿಲ್ಲ. ಮಹಿಳೆಯ ಮನೆಯವರ ನಂಬರ್ ಏನೂ ಇರಲಿಲ್ಲ. ಹೀಗಾಗಿ ಶವ ತಂದಿದ್ದೇವೆ ಎಂಬುದಾಗಿ ಅರ್ಚಕ ಹೇಳಿದ್ದಾಗಿ ಮಹಿಳೆಯ ಮಗ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ.

ಆದರೆ, ಮಹಿಳೆಯ ಮನೆಯವರು ಅರ್ಚಕ ಮತ್ತು ಇತರ ಇಬ್ಬರು ಸೇರಿ ಅತ್ಯಾಚಾರ ಮಾಡಿ ಕೊಲೆಗೈದಿದ್ದಾರೆಂದು ಆರೋಪಿಸಿದ್ದಾರೆ. ಇದಲ್ಲದೆ, ಈ ಬಗ್ಗೆ ಪೊಲೀಸರಿಗೆ ತಿಳಿಸಿದರೆ ಎಫ್ಐಆರ್ ಮಾಡುವುದಕ್ಕೆ ನಿರ್ಲಕ್ಷ್ಯ ತೋರಿದ್ದಾಗಿ ಹೇಳಿದ್ದಾರೆ. ಊರ ಗ್ರಾಮಸ್ಥರ ಆಕ್ರೋಶ ಕೇಳಿಬಂದ ಬಳಿಕ ಪೊಲೀಸರು ಶವವನ್ನು ಪೋಸ್ಟ್ ಮಾರ್ಟಂ ಮಾಡಲು ಕಳಿಸಿದ್ದಾರೆ. ಪೋಸ್ಟ್ ಮಾರ್ಟಂ ವರದಿಯಲ್ಲಿ ಮಹಿಳೆಯನ್ನು ಅತ್ಯಾಚಾರಗೈದು ಕೊಲೆಗೈದಿದ್ದಲ್ಲದೆ, ಗುಪ್ತಾಂಗ ಮತ್ತು ಕಾಲುಗಳಿಗೆ ಗಾಯಗೊಳಿಸಿರುವುದು ಕಂಡುಬಂದಿದೆ.
ಆಬಳಿಕ ಮಹಿಳೆಯ ಗ್ಯಾಂಗ್ ರೇಪ್ ಮತ್ತು ಕೊಲೆಗೈದಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಮೂವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕುಟುಂಬ ನೀಡಿದ ದೂರಿನ ಬಗ್ಗೆ ನಿರ್ಲಕ್ಷ್ಯ ವಹಿಸಿದ ಠಾಣಾಧಿಕಾರಿಯನ್ನು ಸಸ್ಪೆಂಡ್ ಮಾಡಲಾಗಿದೆ. ಪ್ರಕರಣ ಸಂಬಂಧಿಸಿ ಇಬ್ಬರನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಘಟನೆ ಬಗ್ಗೆ ಆಕ್ರೋಶ ಕೇಳಿಬರುತ್ತಿದ್ದಂತೆ, ಬಧೌನ್ ಜಿಲ್ಲೆಯ ಎಸ್ಪಿ ಸಂಕಲ್ಪ್ ಶರ್ಮಾ, ಘಟನೆಯ ತನಿಖೆಗೆ ನಾಲ್ಕು ಪೊಲೀಸ್ ತಂಡಗಳನ್ನು ರಚಿಸಿದ್ದಾರೆ.
A 50-year-old woman was allegedly gang-raped and brutalised in the Ughaiti area of Uttar Pradesh's Badaun district, police have said. The woman had gone to the temple but never returned. The post-mortem report of the deceased confirmed rape, injury in her private parts, and fracture in her legs.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am