ಬ್ರೇಕಿಂಗ್ ನ್ಯೂಸ್
11-06-26 11:43 am HK News Staffer ಕ್ರೈಂ
ವಿಟ್ಲ, ಜೂನ್ 11: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಸಹಪ್ರಯಾಣಿಕರು ಗಂಭೀರವಾಗಿ ಘಟನೆ ನಡೆದಿದೆ. ಮಾಣಿ ಸಮೀಪದ ಗಡಿಯಾರದಲ್ಲಿ ನಡೆದ ಈ ದುರ್ಘಟನೆಯಿಂದ ಕೆಲಕಾಲ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಮೃತ ಚಾಲಕನನ್ನು ಹಾಸನ ಮೂಲದ ಲಕ್ಷ್ಮೀಕಾಂತ್ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ರಂಜಿತ್, ದರ್ಶನ್ ಹಾಗೂ ಶೋಭಾ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹಾಸನ ಮೂಲದ ನಾಲ್ವರು ಬುಧವಾರ ಮಧ್ಯಾಹ್ನ ಸುಮಾರು 12 ಗಂಟೆ ವೇಳೆಗೆ ಕಾರಿನಲ್ಲಿ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದರು. ಗಡಿಯಾರ ಸಮೀಪದ ತಿರುವಿನಲ್ಲಿ ಸಾಗುತ್ತಿದ್ದ ವೇಳೆ ಏಕಾಏಕಿ ಕಾರಿನ ಮೇಲಿನ ನಿಯಂತ್ರಣ ಕಳೆದುಕೊಂಡ ಚಾಲಕ ಲಕ್ಷ್ಮೀಕಾಂತ್, ರಸ್ತೆ ಡಿವೈಡರ್ ಗೆ ಭೀಕರವಾಗಿ ಢಿಕ್ಕಿ ಹೊಡೆದಿದ್ದಾರೆ. ಢಿಕ್ಕಿಯ ರಭಸ ಎಷ್ಟಿತ್ತೆಂದರೆ ಕಾರು ಹೆದ್ದಾರಿಯಲ್ಲೇ ಹಲವು ಬಾರಿ ಪಲ್ಟಿ ಹೊಡೆದು ಸಂಪೂರ್ಣ ನುಜ್ಜುಗುಜ್ಜಾಗಿದೆ.
ಅಪಘಾತದ ಸದ್ದು ಕೇಳಿ ಸ್ಥಳೀಯರು ತಕ್ಷಣವೇ ಧಾವಿಸಿ ರಕ್ಷಣಾ ಕಾರ್ಯ ಆರಂಭಿಸಿದರು. ಕಾರಿನ ಕಬ್ಬಿಣದ ಅವಶೇಷಗಳ ನಡುವೆ ಸಿಲುಕಿಕೊಂಡಿದ್ದ ನಾಲ್ವರನ್ನು ಹರಸಾಹಸಪಟ್ಟು ಹೊರತೆಗೆದು ಆಸ್ಪತ್ರೆಗೆ ಸಾಗಿಸಿದರು. ಆದರೆ ತೀವ್ರವಾಗಿ ಗಾಯಗೊಂಡಿದ್ದ ಚಾಲಕ ಲಕ್ಷ್ಮೀಕಾಂತ್ ಅವರನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು.
ಗಾಯಾಳುಗಳ ಸ್ಥಿತಿ ಗಂಭೀರವಾಗಿದ್ದರಿಂದ ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯ ಮಾಹಿತಿ ತಿಳಿದು ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಪಘಾತದ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಬಳಿಕ ಪೊಲೀಸರು ಕ್ರೇನ್ ಸಹಾಯದಿಂದ ಜಖಂಗೊಂಡ ಕಾರನ್ನು ರಸ್ತೆಯಿಂದ ತೆರವುಗೊಳಿಸಿ ಸಂಚಾರವನ್ನು ಪುನರಾರಂಭಿಸಿದರು. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm