ಬ್ರೇಕಿಂಗ್ ನ್ಯೂಸ್
06-01-21 06:08 pm Mangalore Correspondent ಕ್ರೈಂ
Photo credits : DRA_MNG
ಮಂಗಳೂರು, ಜ.6: ದುಬೈನಿಂದ ಭಾರೀ ಪ್ರಮಾಣದ ಚಿನ್ನ ಕಳ್ಳಸಾಗಣಿಕೆ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಡಿಆರ್ ಐ ಅಧಿಕಾರಿಗಳು ಬಂಧಿಸಿದ್ದಾರೆ.
ಸೋಮವಾರ ಮಧ್ಯರಾತ್ರಿ 12.30 ಕ್ಕೆ ಮಂಗಳೂರು ನಿಲ್ದಾಣಕ್ಕೆ ಆಗಮಿಸಿದ್ದ ಸ್ಪೈಸ್ ಜೆಟ್ ವಿಮಾನದಲ್ಲಿ ಇವರು ಆಗಮಿಸಿದ್ದರು. ಕಂದಾಯ ಇಲಾಖೆಯ ಗುಪ್ತಚರ ಅಧಿಕಾರಿಗಳು ತಪಾಸಣೆ ನಡೆಸಿದಾಗ ಇಬ್ಬರು ಯುವಕರ ಮೈಯಲ್ಲಿ ಚಿನ್ನದ ಅಂಶ ಇರುವುದು ಪತ್ತೆಯಾಗಿದೆ. ಬಂಧಿತರನ್ನು ಭಟ್ಕಳ ಮತ್ತು ಕಾಸರಗೋಡಿನ ನಿವಾಸಿಗಳು ಎಂದು ಪತ್ತೆ ಮಾಡಿದ್ದು ತಮ್ಮ ಹೆಸರು, ವಿಳಾಸವನ್ನು ಸರಿಯಾಗಿ ನೀಡಿಲ್ಲ ಎಂದು ಡಿಆರ್ ಐ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ತಪಾಸಣೆ ನಡೆಸಿದಾಗ, ಇಬ್ಬರು ಕೂಡ ಪೇಸ್ಟ್ ರೂಪದಲ್ಲಿ ಚಿನ್ನವನ್ನು ಮೈಯೊಳಗೆ ಅಡಗಿಸಿಟ್ಟಿದ್ದು ಪತ್ತೆಯಾಗಿದೆ.
ಭಟ್ಕಳದ ವ್ಯಕ್ತಿ ತನ್ನ ಗುದ ದ್ವಾರದಲ್ಲಿ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಐದು ಉಂಡೆಗಳನ್ನಾಗಿಸಿ ತುರುಕಿಸಿದ್ದ. ಆತನಲ್ಲಿ ಒಟ್ಟು 809 ಗ್ರಾಂ ಭಾರದ ಐದು ಉಂಡೆಗಳಿದ್ದವು. ಅದನ್ನು ತಪಾಸಣೆಗೆ ಒಳಪಡಿಸಿದಾಗ 641 ಗ್ರಾಂ ಚಿನ್ನ ಪತ್ತೆಯಾಗಿದೆ.
ಕಾಸರಗೋಡಿನ ಯುವಕನ ಒಳಚಡ್ಡಿಯ ರಹಸ್ಯ ಜೇಬಿನಲ್ಲಿ ಚಿನ್ನ ಪತ್ತೆಯಾಗಿದೆ. ಜೇಬಿನಲ್ಲಿದ್ದ ಒಟ್ಟು 1008 ಗ್ರಾಂ ಭಾರದ ಪೇಸ್ಟ್ ನಲ್ಲಿ 646 ಗ್ರಾಂ ಚಿನ್ನ ಪತ್ತೆಯಾಗಿದೆ.
ಕಸ್ಟಮ್ಸ್ ಅಧಿಕಾರಿಗಳ ಕಣ್ಣು ತಪ್ಪಿಸಲು ಆರೋಪಿಗಳು ಈ ತಂತ್ರ ಹೂಡಿದ್ದರು. ಇಬ್ಬರಲ್ಲಿ ಒಟ್ಟು 1.200 ಕೇಜಿ ಚಿನ್ನ ಸಿಕ್ಕಿದ್ದು 67 ಲಕ್ಷ ಮೌಲ್ಯದ್ದೆಂದು ಅಧಿಕಾರಿಗಳು ಅಂದಾಜಿಸಿದ್ದಾರೆ.
ಆರೋಪಿಗಳು ಭಟ್ಕಳ ಮತ್ತು ಕಾಸರಗೋಡಿನಲ್ಲಿ ಸಕ್ರಿಯವಾಗಿರುವ ಚಿನ್ನ ಸ್ಮಗ್ಲಿಂಗ್ ಗ್ಯಾಂಗ್ ಜೊತೆ ನಂಟು ಹೊಂದಿರುವ ಶಂಕೆಯನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ. ಅಲ್ಲದೆ, ದುಬೈ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರೀ ಲಿಂಕ್ ಇರುವ ಬಗ್ಗೆಯೂ ಸಂಶಯ ವ್ಯಕ್ತವಾಗಿದೆ. ಈ ಬಗ್ಗೆ ಇನ್ನಷ್ಟು ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.
ಲಾಕ್ಡೌನ್ ನಿರ್ಬಂಧಗಳನ್ನು ಲಾಭವಾಗಿಸ್ಕೊಂಡು ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದಾರೆಂದು ಅಧಿಕಾರಿಗಳು ಶಂಕಿಸಿದ್ದು ಲಾಕ್ಡೌನ್ ಬಳಿಕ ಕಳ್ಳ ಸಾಗಾಣಿಕೆ ಪ್ರಕರಣಗಳು ಹೆಚ್ಚಿರುವುದನ್ನು ಪತ್ತೆ ಮಾಡಿದ್ದಾರೆ.
Two Persons arrested at the Mangalore International Airport for allegedly trying to smuggle gold worth 67 lakhs into the country by hiding in rectum, a Customs official said Wednesday.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
20-06-25 03:54 pm
Udupi Correspondent
ಆರೆಸ್ಸೆಸ್ ನಾಯಕರ ಮನೆಗಳಿಗೆ ಮಿಡ್ ನೈಟ್ ಪರಿಶೀಲನೆ ;...
20-06-25 02:59 pm
ಒಂದೇ ಮರ ತೆರವಿಗೆ ಸೂಚಿಸಿದ್ದ ಸೋಮೇಶ್ವರ ಪುರಸಭೆ ; ಐ...
19-06-25 10:08 pm
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
Mangalore Police, Sudheer Kumar Reddy: ಕೋಮು ಸ...
19-06-25 01:05 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm