ಬ್ರೇಕಿಂಗ್ ನ್ಯೂಸ್
13-06-26 06:14 pm HK News Staffer ಕ್ರೈಂ
ಕಾರವಾರ, ಜೂನ್ 13: ಕಾಲೇಜು ಶುಲ್ಕ ಪಾವತಿಸಲು ತಂದೆ ನೀಡಿದ್ದ 10 ಸಾವಿರ ಹಣವನ್ನು ಪರಿಚಯಸ್ಥನೊಬ್ಬನಿಗೆ ಸಾಲವಾಗಿ ನೀಡಿ, ಬಳಿಕ ಆ ಹಣ ಮರಳಿ ಸಿಗದೇ ಮನನೊಂದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳಕೆ ಗ್ರಾಮದಲ್ಲಿ ನಡೆದಿದೆ.
ಭಟ್ಕಳದಲ್ಲಿ ಬಿಸಿಎ ವ್ಯಾಸಂಗ ಮಾಡುತ್ತಿದ್ದ ಗಾಯತ್ರಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಕಾಲೇಜಿನ ಶುಲ್ಕ ಪಾವತಿಸಲು ತಂದೆ ನಾಗರಾಜ ಲಚ್ಚಯ್ಯ ನಾಯ್ಕ ಮಗಳಿಗೆ ₹10 ಸಾವಿರ ನೀಡಿದ್ದರು. ಇದೇ ವೇಳೆ ಗ್ರಾಮದ ಪರಿಚಯಸ್ಥ ಸಂತೋಷ ಮಾಧೇದ ನಾಯ್ಕ ಎಂಬಾತ, ನಿಗದಿತ ಸಮಯದಲ್ಲಿ ಹಣವನ್ನು ಮರಳಿಸುವುದಾಗಿ ಭರವಸೆ ನೀಡಿ ಗಾಯತ್ರಿಯಿಂದ 10 ಸಾವಿರ ಸಾಲ ಪಡೆದಿದ್ದಾನೆ ಎನ್ನಲಾಗಿದೆ.
ಆದರೆ, ನಿಗದಿಪಡಿಸಿದ ಅವಧಿ ಮುಗಿದರೂ ಸಂತೋಷ ಹಣವನ್ನು ಹಿಂದಿರುಗಿಸಿಲ್ಲ. ಪರಿಣಾಮ ಗಾಯತ್ರಿಗೆ ಕಾಲೇಜಿನ ಶುಲ್ಕ ಪಾವತಿಸಲು ಸಾಧ್ಯವಾಗಿರಲಿಲ್ಲ. ಶುಲ್ಕ ಬಾಕಿ ಉಳಿದ ಕಾರಣ ಪರೀಕ್ಷೆಗೆ ಅಗತ್ಯವಾಗಿದ್ದ ಹಾಲ್ಟಿಕೆಟ್ ಕೂಡ ಆಕೆಗೆ ದೊರಕಿರಲಿಲ್ಲ ಎಂದು ತಿಳಿದುಬಂದಿದೆ.
ಪರೀಕ್ಷೆ ಬರೆಯುವ ಅವಕಾಶ ಕಳೆದುಕೊಂಡ ನೋವು ಹಾಗೂ ಹಣದ ಸಮಸ್ಯೆಯಿಂದ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾದ ಗಾಯತ್ರಿ, ಕೊನೆಗೆ ಗ್ರಾಮದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ದುರ್ಘಟನೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರನ್ನು ಆಘಾತಕ್ಕೀಡು ಮಾಡಿದೆ.
ಘಟನೆ ಸಂಬಂಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿದ್ಯಾರ್ಥಿನಿಯ ಸಾವಿಗೆ ಕಾರಣವಾದ ಎಲ್ಲಾ ಆಯಾಮಗಳ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಗಾಯತ್ರಿಗೆ ನೀಡಬೇಕಿದ್ದ ಹಣವನ್ನು ಮರಳಿಸದೇ ಇದ್ದ ಆರೋಪದ ಬಗ್ಗೆಯೂ ವಿಚಾರಣೆ ನಡೆಸಲಾಗುತ್ತಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am