ಬ್ರೇಕಿಂಗ್ ನ್ಯೂಸ್
15-06-26 04:54 pm HK News Staffer ಕ್ರೈಂ
ಕಾರವಾರ, ಜೂನ್ 15: ಸಾಮಾಜಿಕ ಜಾಲತಾಣಗಳಿಗಾಗಿ ರೀಲ್ಸ್ ಚಿತ್ರೀಕರಣ ಮಾಡಲು ಹೋಗಿದ್ದ ಐಟಿ ಉದ್ಯೋಗಿಯೊಬ್ಬ ಸಮುದ್ರದ ಅಲೆಗಳಿಗೆ ಸಿಲುಕಿ ನಾಪತ್ತೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕಡ್ಲೆ ಸಮುದ್ರ ತೀರದಲ್ಲಿ ನಡೆದಿದೆ.
ಮಹಾರಾಷ್ಟ್ರದ ಪುಣೆ ಮೂಲದ ಹಾಗೂ ಖಾಸಗಿ ಐಟಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಜೀವನ್ ಭಟ್ಟರಾಯಿ (26) ಸಮುದ್ರದಲ್ಲಿ ಕೊಚ್ಚಿಹೋಗಿರುವ ಯುವಕ. ಪ್ರವಾಸದ ಭಾಗವಾಗಿ ಐವರು ಸ್ನೇಹಿತರೊಂದಿಗೆ ಕುಮಟಾ ಭಾಗಕ್ಕೆ ಬಂದಿದ್ದ ಅವರು ಕಳೆದ ಮೂರು ದಿನಗಳಿಂದ ಖಾಸಗಿ ರೆಸಾರ್ಟ್ನಲ್ಲಿ ತಂಗಿದ್ದರು.
ಭಾನುವಾರ ರೆಸಾರ್ಟ್ನಿಂದ ಚೆಕ್ಔಟ್ ಆಗುವ ಮುನ್ನ ಸ್ನೇಹಿತರೊಂದಿಗೆ ಕಡ್ಲೆ ಸಮುದ್ರ ತೀರಕ್ಕೆ ತೆರಳಿದ್ದ ಜೀವನ್, ರೀಲ್ಸ್ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದರು. ಈ ವೇಳೆ ಸಮುದ್ರದೊಳಗೆ ಇಳಿದಿದ್ದ ಅವರು ಪ್ರಬಲ ಅಲೆಗಳ ಹೊಡೆತಕ್ಕೆ ಸಿಲುಕಿ ಕೊಚ್ಚಿಹೋಗಿದ್ದಾರೆ ಎನ್ನಲಾಗಿದೆ.
ಘಟನೆ ಗಮನಕ್ಕೆ ಬರುತ್ತಿದ್ದಂತೆಯೇ ಸ್ಥಳೀಯರು ಹಾಗೂ ಸ್ನೇಹಿತರು ಹುಡುಕಾಟ ಆರಂಭಿಸಿದ್ದು, ಬಳಿಕ ಕರಾವಳಿ ಕಾವಲುಪಡೆ, ಸ್ಥಳೀಯ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯ ಆರಂಭಿಸಿದ್ದಾರೆ.
ಆದರೆ ಸಂಜೆ ವೇಳೆಯಾದರೂ ಜೀವನ್ ಅವರ ಸುಳಿವು ಲಭ್ಯವಾಗಿಲ್ಲ. ಸಮುದ್ರದಲ್ಲಿ ನಿರಂತರ ಶೋಧ ಕಾರ್ಯ ಮುಂದುವರಿದಿದ್ದು, ಘಟನೆ ಸಂಬಂಧ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಡಲ ತೀರಗಳಲ್ಲಿ ಸೆಲ್ಫಿ ಹಾಗೂ ರೀಲ್ಸ್ ಚಿತ್ರೀಕರಣಕ್ಕಾಗಿ ಅಪಾಯಕಾರಿ ಪ್ರದೇಶಗಳಿಗೆ ತೆರಳುವ ಪ್ರವೃತ್ತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಘಟನೆ ಮತ್ತೊಮ್ಮೆ ಎಚ್ಚರಿಕೆಯ ಗಂಟೆ ಮೊಳಗಿಸಿದೆ. ಸಾರ್ವಜನಿಕರು ಸಮುದ್ರ ತೀರಗಳಲ್ಲಿ ಸುರಕ್ಷತಾ ಸೂಚನೆಗಳನ್ನು ಪಾಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
15-06-26 04:52 pm
HK News Staffer
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
15-06-26 04:54 pm
HK News Staffer
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm