ಬ್ರೇಕಿಂಗ್ ನ್ಯೂಸ್
15-06-26 04:54 pm HK News Staffer ಕ್ರೈಂ
ಕಾರವಾರ, ಜೂನ್ 15: ಸಾಮಾಜಿಕ ಜಾಲತಾಣಗಳಿಗಾಗಿ ರೀಲ್ಸ್ ಚಿತ್ರೀಕರಣ ಮಾಡಲು ಹೋಗಿದ್ದ ಐಟಿ ಉದ್ಯೋಗಿಯೊಬ್ಬ ಸಮುದ್ರದ ಅಲೆಗಳಿಗೆ ಸಿಲುಕಿ ನಾಪತ್ತೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕಡ್ಲೆ ಸಮುದ್ರ ತೀರದಲ್ಲಿ ನಡೆದಿದೆ.
ಮಹಾರಾಷ್ಟ್ರದ ಪುಣೆ ಮೂಲದ ಹಾಗೂ ಖಾಸಗಿ ಐಟಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಜೀವನ್ ಭಟ್ಟರಾಯಿ (26) ಸಮುದ್ರದಲ್ಲಿ ಕೊಚ್ಚಿಹೋಗಿರುವ ಯುವಕ. ಪ್ರವಾಸದ ಭಾಗವಾಗಿ ಐವರು ಸ್ನೇಹಿತರೊಂದಿಗೆ ಕುಮಟಾ ಭಾಗಕ್ಕೆ ಬಂದಿದ್ದ ಅವರು ಕಳೆದ ಮೂರು ದಿನಗಳಿಂದ ಖಾಸಗಿ ರೆಸಾರ್ಟ್ನಲ್ಲಿ ತಂಗಿದ್ದರು.
ಭಾನುವಾರ ರೆಸಾರ್ಟ್ನಿಂದ ಚೆಕ್ಔಟ್ ಆಗುವ ಮುನ್ನ ಸ್ನೇಹಿತರೊಂದಿಗೆ ಕಡ್ಲೆ ಸಮುದ್ರ ತೀರಕ್ಕೆ ತೆರಳಿದ್ದ ಜೀವನ್, ರೀಲ್ಸ್ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದರು. ಈ ವೇಳೆ ಸಮುದ್ರದೊಳಗೆ ಇಳಿದಿದ್ದ ಅವರು ಪ್ರಬಲ ಅಲೆಗಳ ಹೊಡೆತಕ್ಕೆ ಸಿಲುಕಿ ಕೊಚ್ಚಿಹೋಗಿದ್ದಾರೆ ಎನ್ನಲಾಗಿದೆ.
ಘಟನೆ ಗಮನಕ್ಕೆ ಬರುತ್ತಿದ್ದಂತೆಯೇ ಸ್ಥಳೀಯರು ಹಾಗೂ ಸ್ನೇಹಿತರು ಹುಡುಕಾಟ ಆರಂಭಿಸಿದ್ದು, ಬಳಿಕ ಕರಾವಳಿ ಕಾವಲುಪಡೆ, ಸ್ಥಳೀಯ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯ ಆರಂಭಿಸಿದ್ದಾರೆ.
ಆದರೆ ಸಂಜೆ ವೇಳೆಯಾದರೂ ಜೀವನ್ ಅವರ ಸುಳಿವು ಲಭ್ಯವಾಗಿಲ್ಲ. ಸಮುದ್ರದಲ್ಲಿ ನಿರಂತರ ಶೋಧ ಕಾರ್ಯ ಮುಂದುವರಿದಿದ್ದು, ಘಟನೆ ಸಂಬಂಧ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಡಲ ತೀರಗಳಲ್ಲಿ ಸೆಲ್ಫಿ ಹಾಗೂ ರೀಲ್ಸ್ ಚಿತ್ರೀಕರಣಕ್ಕಾಗಿ ಅಪಾಯಕಾರಿ ಪ್ರದೇಶಗಳಿಗೆ ತೆರಳುವ ಪ್ರವೃತ್ತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಘಟನೆ ಮತ್ತೊಮ್ಮೆ ಎಚ್ಚರಿಕೆಯ ಗಂಟೆ ಮೊಳಗಿಸಿದೆ. ಸಾರ್ವಜನಿಕರು ಸಮುದ್ರ ತೀರಗಳಲ್ಲಿ ಸುರಕ್ಷತಾ ಸೂಚನೆಗಳನ್ನು ಪಾಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am