ಬ್ರೇಕಿಂಗ್ ನ್ಯೂಸ್
20-06-26 09:13 pm HK News Staffer ಕ್ರೈಂ
ಮಂಗಳೂರು, ಜೂನ್ 20 : ಪತ್ನಿಯನ್ನು ಪತಿಯೇ ಕತ್ತಿಯಿಂದ ಕಡಿದು ಕೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಆಲಂಕಾರು ಪೇಟೆಯ ಕಜೆ ಎಂಬಲ್ಲಿ ನಡೆದಿದ್ದು ಎರಡು ವರ್ಷದ ಕಂದಮ್ಮ ಅನಾಥವಾಗಿ ಪರಿಣಮಿಸಿದೆ.
ಬಜಗೋಳಿ ನಿವಾಸಿ ದಿನೇಶ್ ಹಾಗೂ ಸಿದ್ದಕಟ್ಟೆ ನಿವಾಸಿ ಸಂಗೀತಾ ಮೃತಪಟ್ಟ ದಂಪತಿ. ಪತಿ ದಿನೇಶ್ ಮತ್ತು ಪತ್ನಿ ಸಂಗೀತಾ ನಡುವೆ ಆಗಿಂದಾಗ್ಗೆ ಕೌಟುಂಬಿಕ ಕಲಹ ನಡೆಯುತ್ತಿದ್ದು ಜೂನ್ 19ರ ರಾತ್ರಿ ಪತಿಯೇ ಪತ್ನಿಯನ್ನು ಹತ್ಯೆಗೈದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ದಂಪತಿ ಇಬ್ಬರೂ ಸೇರಿಕೊಂಡು ಆಲಂಕಾರು ಪೇಟೆಯಲ್ಲಿ ಹೋಟೆಲ್ ನಡೆಸುತ್ತಿದ್ದರು. ಎರಡು ವರ್ಷದ ಮಗುವಿನೊಂದಿಗೆ ಕಜೆಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಒಂದು ತಿಂಗಳ ಹಿಂದೆ ಹೊಟೇಲ್ ಬಂದ್ ಮಾಡಿದ್ದು ದಂಪತಿ ನಡುವೆ ವೈಮನಸ್ಸಿನಿಂದ ಕಲಹ ಉಂಟಾಗಿತ್ತು. ಹೀಗಾಗಿ ಒಂದು ತಿಂಗಳಿನಿಂದ ದಿನೇಶ್ ಮನೆ ಬಿಟ್ಟು ತೆರಳಿದ್ದ. ನಿನ್ನೆ ಏಕಾಏಕಿ ಮನೆಗೆ ಮರಳಿದ್ದು ಪತ್ನಿಯ ಜೊತೆಗೆ ಜಗಳವಾಡಿ ಕತ್ತಿಯಿಂದ ಕಡಿದು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.


ಇಂದು ಬೆಳಗ್ಗೆ ಮನೆಯಲ್ಲಿ ಯಾವುದೇ ಚಲನವಲನ ಇರಲಿಲ್ಲ. ಸಂಗೀತಾ ತವರು ಮನೆಯಿಂದ ಕರೆ ಮಾಡಿದಾಗ ಮೊಬೈಲ್ ಸ್ವೀಕರಿಸಿರಲಿಲ್ಲ. ಸಂಶಯದಿಂದ ಇವರ ಮನೆ ಕಡೆಗೆ ಬಂದಿದ್ದು ಒಳಗಿನಿಂದ ಬಾಗಿಲು ಹಾಕಿದ್ದನ್ನು ಒಡೆದು ನೋಡಿದಾಗ ಸಂಗೀತಾ ರಕ್ತದ ಮಡುವಿನಲ್ಲಿ ಬಿದ್ದಿದ್ದರೆ, ದಿನೇಶ್ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಗು ತಾಯಿ ಮೃತಪಟ್ಟಿರುವುದನ್ನು ತಿಳಿಯದೆ ಎರಡು ವರ್ಷದ ಮಗು ಅತ್ತು ಅತ್ತು ಶವದ ಪಕ್ಕದಲ್ಲಿಯೇ ಮಲಗಿತ್ತು. ಕಡಬ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ. ದಂಪತಿ ದುರಂತ ಸಾವಿಗೀಡಾದ ಹಿನ್ನೆಲೆಯಲ್ಲಿ ಎರಡು ವರ್ಷದ ಹೆಣ್ಣು ಮಗು ಅನಾಥವಾಗಿದೆ.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
09-08-26 04:47 pm
HK News Staffer
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಶಾರ್ಪ್ ಶೂಟರ್ ರಾಜ...
09-08-26 03:34 pm
ಇನ್ಸ್ಟಾಗ್ರಾಂನಲ್ಲಿ ವರ್ಕ್ ಫ್ರಮ್ ಹೋಮ್ ಹೆಸರಲ್ಲಿ...
09-08-26 12:56 pm
ರೇಣುಕಾಸ್ವಾಮಿ ಗಂಭೀರವಾಗಿ ಗಾಯಗೊಂಡಿದ್ದರೂ ದರ್ಶನ್ ಹ...
09-08-26 12:03 pm