ಬ್ರೇಕಿಂಗ್ ನ್ಯೂಸ್
24-06-26 07:53 pm HK News Staffer ಕ್ರೈಂ
ದಾವಣಗೆರೆ, ಜೂನ್ 24: ಹರಿಹರದಲ್ಲಿ ಬಂಧಿತನಾಗಿರುವ ಶಂಕಿತ ಉಗ್ರನ ಪ್ರಕರಣ ದಿನದಿಂದ ದಿನಕ್ಕೆ ಹೊಸ ಹೊಸ ಅಂಶಗಳನ್ನು ಹೊರಹಾಕುತ್ತಿದ್ದು, ಇದೀಗ ತನಿಖೆಯಲ್ಲಿ ಮತ್ತಷ್ಟು ಆತಂಕಕಾರಿ ಮಾಹಿತಿಗಳು ಬೆಳಕಿಗೆ ಬಂದಿವೆ. ಬಂಧಿತ ಆರೋಪಿ ಸುಹೇಲ್ ವಿರುದ್ಧ ದಾಖಲಾಗಿರುವ ಎಫ್ಐಆರ್ನಲ್ಲಿ ದೇಶದ ಭದ್ರತಾ ಸಂಸ್ಥೆಗಳನ್ನೇ ಬೆಚ್ಚಿಬೀಳಿಸುವಂತಹ ವಿವರಗಳು ಉಲ್ಲೇಖವಾಗಿವೆ.
ಪ್ರಾಥಮಿಕ ತನಿಖೆ ವೇಳೆ ಆರೋಪಿ, “ರಾಮ ಮಂದಿರವನ್ನು ಬಾಂಬ್ ಸ್ಫೋಟದ ಮೂಲಕ ಗುರಿಯಾಗಿಸಲು ಯೋಜನೆ ರೂಪಿಸಿದ್ದೆ” ಎಂದು ಹೇಳಿರುವುದಾಗಿ ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ. ಈ ಸಂಬಂಧ ಪಾಕಿಸ್ತಾನ ಮೂಲದ ‘ರಾಣಾ’ ಎಂಬ ವ್ಯಕ್ತಿಯೊಂದಿಗೆ ಸಂಪರ್ಕದಲ್ಲಿದ್ದ ಎನ್ನುವ ಶಂಕೆಯೂ ವ್ಯಕ್ತವಾಗಿದೆ.
ಆರೋಪಿಯ ಮೊಬೈಲ್ ಫೋನ್ ವಶಕ್ಕೆ ಪಡೆದಿರುವ ಪೊಲೀಸರು ಅದರಲ್ಲಿರುವ ಮಾಹಿತಿಯನ್ನು ಪರಿಶೀಲಿಸಿದಾಗ ಹಲವು ಮಹತ್ವದ ಸುಳಿವುಗಳು ಪತ್ತೆಯಾಗಿವೆ. ವಿಶೇಷವಾಗಿ ವಾಟ್ಸಾಪ್ನ ‘ಲಾಕ್ಡ್ ಚಾಟ್’ ವಿಭಾಗದಲ್ಲಿ ಪಾಕಿಸ್ತಾನ ಮೂಲದ ದೂರವಾಣಿ ಸಂಖ್ಯೆಯೊಂದು ಪತ್ತೆಯಾಗಿದ್ದು, ಅದು ‘ರಾಣಾ ಜೀ’ ಎಂಬ ಹೆಸರಿನಲ್ಲಿ ಸೇವ್ ಮಾಡಲಾಗಿತ್ತು ಎನ್ನಲಾಗಿದೆ.
ಇದರ ಜೊತೆಗೆ ಉರ್ದು ಮಿಶ್ರಿತ ಹಿಂದಿ ಭಾಷೆಯಲ್ಲಿ ನಡೆದಿರುವ ಹಲವು ಧ್ವನಿ ಸಂದೇಶಗಳು ತನಿಖಾಧಿಕಾರಿಗಳ ಗಮನ ಸೆಳೆದಿವೆ. ಅವುಗಳಲ್ಲಿ “ನಾನು ರಾಮ ಮಂದಿರವನ್ನು ಬಾಂಬ್ನಿಂದ ಸ್ಫೋಟಿಸಲು ಬಯಸುತ್ತೇನೆ” ಎಂಬ ಅಂಶವಿರುವ ಆಡಿಯೋ ಕ್ಲಿಪ್ ಕೂಡ ಪತ್ತೆಯಾಗಿದೆ ಎಂದು ತನಿಖಾ ಮೂಲಗಳು ತಿಳಿಸಿವೆ. ಇದೇ ರೀತಿಯ ಇನ್ನೂ ಹಲವು ಧ್ವನಿ ಸಂದೇಶಗಳು ಮೊಬೈಲ್ನಲ್ಲಿ ಲಭ್ಯವಾಗಿದ್ದು, ಅವುಗಳ ಸತ್ಯಾಸತ್ಯತೆಯನ್ನು ತಜ್ಞರ ಮೂಲಕ ಪರಿಶೀಲಿಸಲಾಗುತ್ತಿದೆ.
ಮೊಬೈಲ್ ಪರಿಶೀಲನೆ ವೇಳೆ ಆರೋಪಿ ವಿವಿಧ ವಾಟ್ಸಾಪ್ ಸಾರ್ವಜನಿಕ ಚಾನೆಲ್ಗಳಿಗೆ ಚಂದಾದಾರನಾಗಿದ್ದ ಸಂಗತಿಯೂ ಬೆಳಕಿಗೆ ಬಂದಿದೆ. ಆ ಚಾನೆಲ್ಗಳಲ್ಲಿ ಶಸ್ತ್ರಾಸ್ತ್ರ ಹಿಡಿದಿರುವ ವ್ಯಕ್ತಿಗಳ ಚಿತ್ರಗಳು, ಉಗ್ರ ಚಟುವಟಿಕೆಗಳಿಗೆ ಹೋಲುವ ದೃಶ್ಯಗಳು ಹಾಗೂ ಅನುಮಾನಾಸ್ಪದ ವಿಷಯಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.
ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (ಬಿಎನ್ಎಸ್) ಸೆಕ್ಷನ್ 113(3) ಹಾಗೂ 197(1) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಭಯೋತ್ಪಾದಕ ಕೃತ್ಯ ನಡೆಸುವ ಉದ್ದೇಶದಿಂದ ಸಂಚು ರೂಪಿಸಿರುವ ಶಂಕೆಯ ಹಿನ್ನೆಲೆಯಲ್ಲಿ ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಲಾಗಿದೆ.
ಪ್ರಕರಣದ ಕುರಿತು ಮಾಹಿತಿ ನೀಡಿರುವ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಹೆಚ್.ಟಿ. ಶೇಖರ್, “ಸುಮಾರು 15 ದಿನಗಳ ಹಿಂದೆ ಆರೋಪಿ ಖಾಸಗಿ ಕಾರ್ಖಾನೆಯೊಂದರಲ್ಲಿ ಕೆಲಸಕ್ಕಾಗಿ ಹರಿಹರಕ್ಕೆ ಬಂದಿದ್ದ. ಕಾರ್ಖಾನೆ ಸಮೀಪದ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ. ಅನುಮಾನಾಸ್ಪದ ಚಲನವಲನಗಳ ಹಿನ್ನೆಲೆಯಲ್ಲಿ ವಿಚಾರಣೆಗೆ ಒಳಪಡಿಸಿದಾಗ ಹಲವು ಮಾಹಿತಿಗಳು ಲಭ್ಯವಾಗಿವೆ. ಮೊಬೈಲ್ ಫೋನ್ ಪರಿಶೀಲನೆಯಿಂದ ಮತ್ತಷ್ಟು ಮಹತ್ವದ ಅಂಶಗಳು ಬೆಳಕಿಗೆ ಬಂದಿವೆ” ಎಂದು ತಿಳಿಸಿದ್ದಾರೆ.
ಸದ್ಯ ಆರೋಪಿ ಸಂಪರ್ಕದಲ್ಲಿದ್ದ ವ್ಯಕ್ತಿಗಳು ಯಾರು, ವಿದೇಶಿ ಸಂಪರ್ಕಗಳಿವೆಯೇ, ಯಾವುದೇ ಸಂಘಟಿತ ಜಾಲದ ಭಾಗವಾಗಿದ್ದಾನೆಯೇ ಎಂಬ ಎಲ್ಲಾ ಆಯಾಮಗಳಲ್ಲೂ ತನಿಖೆ ಮುಂದುವರಿದಿದೆ.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
09-08-26 04:47 pm
HK News Staffer
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಶಾರ್ಪ್ ಶೂಟರ್ ರಾಜ...
09-08-26 03:34 pm
ಇನ್ಸ್ಟಾಗ್ರಾಂನಲ್ಲಿ ವರ್ಕ್ ಫ್ರಮ್ ಹೋಮ್ ಹೆಸರಲ್ಲಿ...
09-08-26 12:56 pm
ರೇಣುಕಾಸ್ವಾಮಿ ಗಂಭೀರವಾಗಿ ಗಾಯಗೊಂಡಿದ್ದರೂ ದರ್ಶನ್ ಹ...
09-08-26 12:03 pm