ಬ್ರೇಕಿಂಗ್ ನ್ಯೂಸ್
29-06-26 09:32 am HK News Staffer ಕ್ರೈಂ
ಮಂಗಳೂರು, ಜೂನ್ 29: ಮುಂಬೈನಿಂದ ಕುಟುಂಬದ ಜೊತೆಗೆ ಕಾರಿನಲ್ಲಿ ಬರುತ್ತಿದ್ದ ಕೇರಳ ಮೂಲದ ಚಿನ್ನದ ವ್ಯಾಪಾರಿಯನ್ನು ಅಡ್ಡಗಟ್ಟಿ ಲಕ್ಷಾಂತರ ಮೌಲ್ಯದ ಚಿನ್ನ ಮತ್ತು ನಗದು ಹಣವನ್ನು ಅಪಹರಿಸಿದ ಘಟನೆ ಪಣಂಬೂರು ಬಳಿಯ ಬೈಕಂಪಾಡಿ ಜಂಕ್ಷನ್ನಲ್ಲಿ ಇಂದು ನಸುಕಿನ ವೇಳೆಗೆ ನಡೆದಿದೆ.
ನಸುಕಿನ 3 ಗಂಟೆ ವೇಳೆಗೆ ಎರಡು ಇನೋವಾ ಮತ್ತು ಇನ್ನೊಂದು ಸ್ವಿಫ್ಟ್ ಕಾರಿನಲ್ಲಿ ಬಂದಿದ್ದ ಏಳೆಂಟು ಮಂದಿಯಿದ್ದ ತಂಡ ಏಕಾಏಕಿ ಚಿನ್ನದ ವ್ಯಾಪಾರಿಯ ಕಾರನ್ನು ಅಡ್ಡಗಟ್ಟಿ, ಪತ್ನಿ ಹಾಗೂ ಮಗನ ಸಮೇತ ಕಾರಿನೊಂದಿಗೆ ಪರಾರಿಯಾದ ಸಿನಿಮಾ ಶೈಲಿಯ ದರೋಡೆ ನಡೆದಿದೆ. ಕೇರಳದ ಪಯ್ಯನ್ನೂರಿನ ನಿವಾಸಿ ಹಾಗೂ ಚಿನ್ನದ ವ್ಯಾಪಾರಿ ವಿಕಾಸ್ (42) ಅವರು ತನ್ನ ಪತ್ನಿ ಹಾಗೂ ಪುತ್ರನ ಜೊತೆಗೆ ಬಿಳಿ ಬಣ್ಣದ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಮುಂಬೈನಿಂದ ಕೇರಳಕ್ಕೆ ಹಿಂದಿರುಗುತ್ತಿದ್ದರು. ಬೈಕಂಪಾಡಿಯ ದ್ವಾರದ ಬಳಿ KA-03 G-8210, KL-13 BB-1841 ಸಂಖ್ಯೆಯ ಎರಡು ಇನ್ನೋವಾ ಕಾರುಗಳು ಹಾಗೂ KL-11 BE-4104 ಸಂಖ್ಯೆಯ ಸ್ವಿಫ್ಟ್ ಕಾರಿನಲ್ಲಿ ಬಂದ ಸುಮಾರು 7ರಿಂದ 8 ಮಂದಿ ಅಪರಿಚಿತರು ವಿಕಾಸ್ ಅವರ ಕಾರನ್ನು ಅಡ್ಡಗಟ್ಟಿದ್ದಾರೆ.
ವಿಕಾಸ್ ಅವರನ್ನು ಕಾರಿನಿಂದ ಕೆಳಗಿಳಿಸಿದ ದುಷ್ಕರ್ಮಿಗಳು, ಅವರ ಪತ್ನಿ ಮತ್ತು ಮಗನ ಸಮೇತ ಕಾರನ್ನು ಒಯ್ದಿದ್ದಾರೆ. ನಂತರ ಕುಳೂರು ಬಳಿ ಪತ್ನಿ, ಮಗನನ್ನು ಕೆಳಗಿಳಿಸಿ, ಆರೋಪಿಗಳು ಕಾರಿನೊಂದಿಗೆ ಪರಾರಿಯಾಗಿದ್ದಾರೆ. ವಿಕಾಸ್ ಕೇರಳದ ಪಯ್ಯನ್ನೂರಿನಲ್ಲಿ ಚಿನ್ನದ ವ್ಯಾಪಾರ ನಡೆಸುತ್ತಿದ್ದು, ಮುಂಬೈ ಬಳಿಯ ಸಾಂಗ್ಲಿಯಲ್ಲಿ ಪರಿಚಯಸ್ಥರ ವಿವಾಹ ಸಮಾರಂಭದಲ್ಲಿ ಭಾಗವಹಿಸಿ ವಾಪಸಾಗುತ್ತಿದ್ದರು. ಘಟನೆ ಸಂಬಂಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ದಾಖಲಾಗಿದ್ದು, 180 ಗ್ರಾಮ್ ಚಿನ್ನ ಮತ್ತು ನಗದು ಸಹಿತ ಸುಮಾರು 20 ಲಕ್ಷ ರು. ಮೌಲ್ಯದ ಸೊತ್ತು ಹೊತ್ತೊಯ್ದಿದ್ದಾರೆ ಎಂದು ವಿಕಾಸ್ ದೂರು ನೀಡಿದ್ದಾರೆ.
ಆದರೆ ಕೇರಳದ ಚಿನ್ನದ ವ್ಯಾಪಾರಿಗಳು ಮುಂಬೈನಲ್ಲಿ ಗಟ್ಟಿಗಳ ರೂಪದಲ್ಲಿ ಚಿನ್ನ ಖರೀದಿಸಿ ಒಯ್ಯುವುದು ಸಾಮಾನ್ಯವಾಗಿದ್ದು ದೊಡ್ಡ ಮೊತ್ತದ ಚಿನ್ನ ಕಳವಾಗಿರುವ ಸಾಧ್ಯತೆ ಇದೆ. ಆರೋಪಿಗಳ ಪತ್ತೆಗಾಗಿ ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 09:32 am
HK News Staffer
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm