ಬ್ರೇಕಿಂಗ್ ನ್ಯೂಸ್
29-06-26 07:25 pm HK News Staffer ಕ್ರೈಂ
ಮಂಗಳೂರು, ಜೂನ್ 29: ಮಂಗಳೂರು ನಗರದ ಕೊಡಿಯಾಲಬೈಲಿನಲ್ಲಿರುವ ಜಿಲ್ಲಾ ನ್ಯಾಯಾಲಯ ಸಂಕೀರ್ಣಕ್ಕೆ ಅಪರಿಚಿತ ವ್ಯಕ್ತಿಯೊಬ್ಬ ಬಾಂಬ್ ಬೆದರಿಕೆ ಇಮೇಲ್ ಸಂದೇಶ ಕಳಿಸಿದ್ದು ಬಾಂಬ್ ಪತ್ತೆದಳ ಮತ್ತು ಶ್ವಾನದಳ ಪೊಲೀಸರು ಸ್ಥಳದಲ್ಲಿ ಶೋಧ ನಡೆಸಿದ್ದಾರೆ.
ಮಂಗಳೂರು ಜಿಲ್ಲಾ ಕೋರ್ಟಿನ ಇ-ಮೇಲ್ ವಿಳಾಸಕ್ಕೆ ಅನ್ಬನಂತನ್ ಐಯ್ಯಪ್ಪನ್ ಎಂಬ ಹೆಸರಿನಲ್ಲಿ ಇ-ಮೇಲ್ ಸಂದೇಶ ಬಂದಿದ್ದು ಕೋರ್ಟ್ ಆವರಣದಲ್ಲಿ ಕೆಮಿಕಲ್ ಬಾಂಬ್ ಇಟ್ಟು ಸ್ಟೋಟಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಇಸ್ರೇಲ್ ದೂತಾವಾಸದೊಂದಿಗೆ ಮಂಗಳೂರು ನ್ಯಾಯಾಲಯವನ್ನೂ ಜೂನ್ 29ರ ಮಧ್ಯಾಹ್ನ ಒಂದು ಗಂಟೆಗೆ ಬಾಂಬಿಟ್ಟು ಸ್ಪೋಟಿಸುವುದಾಗಿ ಬೆದರಿಕೆ ಹಾಕಿದ್ದ.
ತನ್ನನ್ನು GenZ DMK ಲೀಡರ್ ಎಂದು ಹೇಳಿಕೊಂಡಿರುವ ಅನ್ಬನಂತನ್ ಐಯ್ಯಪ್ಪನ್, ಸಂಸದ ಎನ್. ಆರ್. ಇಳಂಗೋವನ್ ನಾಡಿಗೆ ದ್ರೋಹ ಎಸಗಿದ್ದಾರೆ, ಈ ಕಾರಣಕ್ಕಾಗಿ ಬಾಂಬ್ ಹಾಕುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾನೆ. ಎಲ್ಲಾ ನ್ಯಾಯಾಧೀಶರ ಮೂಗು ಮತ್ತು ಬಾಯಿಗಳನ್ನು ಮುಚ್ಚಿ ಅವರನ್ನು ಕೂಡಲೇ ಸ್ಥಳಾಂತರಿಸಿ ಎಂದು ಬೆದರಿಕೆ ಹಾಕಿದ್ದಾನೆ.
ಬಾಂಬ್ ಬೆದರಿಕೆ ಹಿನ್ನೆಲೆ ನ್ಯಾಯಾಲಯ ಆವರಣದಲ್ಲಿ ಬಾಂಬ್ ಪತ್ತೆ ದಳ ಮತ್ತು ಸ್ವಾನದಳದಿಂದ ಶೋಧ ನಡೆಸಲಾಗಿದೆ. ಕೋರ್ಟ್ ಕಟ್ಟಡದ ಎಲ್ಲ ಕೊಠಡಿಗಳಲ್ಲಿ ಶೋಧ ಕಾರ್ಯಾಚರಣೆ ಮಾಡಲಾಗಿದೆ. ನಿನ್ನೆ ರಾತ್ರಿ ಇಮೇಲ್ ಬಂದಿದ್ದು ಮಂಗಳೂರು ಪೊಲೀಸರು ಮಧ್ಯಾಹ್ನ ವೇಳೆಗೆ ಕೋರ್ಟ್ ಆವರಣದಲ್ಲಿ ತಪಾಸಣೆ ನಡೆಸಿದ್ದಾರೆ. ಇದೇ ವೇಳೆ, ಚಾಮರಾಜನಗರ ಜಿಲ್ಲಾ ಕೋರ್ಟಿಗೂ ಇದೇ ರೀತಿಯ ಇಮೇಲ್ ಸಂದೇಶ ಬಂದಿದೆ. ಎರಡು ದಿನಗಳ ಹಿಂದೆ ಕಾರವಾರ ಮತ್ತು ಬಾಗಲಕೋಟ ಜಿಲ್ಲಾ ನ್ಯಾಯಾಲಯಗಳಿಗೂ ಹುಸಿ ಬಾಂಬ್ ಬೆದರಿಕೆ ಬಂದಿತ್ತು. ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಧಾರವಾಡ ಹೈಕೋರ್ಟ್ ಪೀಠಕ್ಕೂ ಭದ್ರತೆ ಒದಗಿಸಲಾಗಿದೆ. ಜೂನ್ 26ರಂದು ಉಡುಪಿ ಜಿಲ್ಲಾ ಕೋರ್ಟಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am